ಬೆಂಗಳೂರಲ್ಲಿ ಸಗಟು ವಿತರಣಾ ವ್ಯವಹಾರ ಮುಚ್ಚಿದ ಅಮೆಜಾನ್
ನವದೆಹಲಿ, ನವೆಂಬರ್ 29: ವೆಚ್ಚವನ್ನು ಕಡಿತಗೊಳಿಸುವ ಜಾಗತಿಕ ಕ್ರಮದ ಭಾಗವಾಗಿ ಕೆಲವು ವಿಭಾಗಗಳನ್ನು ಮುಚ್ಚುತ್ತಿರುವ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ಸೋಮವಾರ ಭಾರತದಲ್ಲಿ ತನ್ನ ಸಗಟು ವಿತರಣಾ ವ್ಯವಹಾರವನ್ನು ಮುಚ್ಚುವುದಾಗಿ ಘೋಷಿಸಿದೆ.
ಜಗತ್ತಿನ ಇ-ಕಾಮರ್ಸ್ ದಿಗ್ಗಜ ಎನಿಸಿರುವ ಅಮೆಜಾನ್ ವಿತರಣೆಯನ್ನು ಸ್ಥಗಿತಗೊಳಿಸುತ್ತಿದೆ. ಅದರ ಸಗಟು ಇ-ಕಾಮರ್ಸ್ ವೆಬ್ಸೈಟ್ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯ ಕೆಲವು ಭಾಗಗಳಲ್ಲಿ ಲಭ್ಯವಿದೆ.
ಕಂಪನಿಯು ಈ ಹಿಂದೆ ತನ್ನ ಆಹಾರ ವಿತರಣೆ ಮತ್ತು ಅಕಾಡೆಮಿ ಇನ್ ಇಂಡಿಯಾ ಎಂಬ ಆನ್ಲೈನ್ ಕಲಿಕಾ ವೇದಿಕೆಯನ್ನು ಮುಚ್ಚಿತ್ತು. ಬಳಿಕ "ನಾವು ಈ ನಿರ್ಧಾರಗಳನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಪ್ರಸ್ತುತ ಗ್ರಾಹಕರು ಮತ್ತು ಪಾಲುದಾರರನ್ನು ನೋಡಿಕೊಳ್ಳಲು ನಾವು ಈ ಕಾರ್ಯಕ್ರಮವನ್ನು ಹಂತ ಹಂತವಾಗಿ ಸ್ಥಗಿತಗೊಳಿಸುತ್ತಿದ್ದೇವೆ ಎಂದು ಕಂಪನಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದರು.

ದೇಶದಲ್ಲಿ ಸ್ಥಳೀಯ ಕಿರಾಣಿ ಅಂಗಡಿಗಳು, ಫಾರ್ಮಸಿಗಳು ಮತ್ತು ಡಿಪಾರ್ಟ್ಮೆಂಟ್ ಸ್ಟೋರ್ಗಳನ್ನು ಸಶಕ್ತಗೊಳಿಸಲು ಅಮೆಜಾನ್ ತನ್ನ ವಿತರಣಾ ಸೇವೆಯನ್ನು ಪ್ರಾರಂಭಿಸಿತ್ತು. ಕಳೆದ ವಾರ ಅಮೆಜಾನ್ ದೇಶದಲ್ಲಿ ತನ್ನ ಎಜುಟೆಕ್ ಅಕಾಡೆಮಿಯನ್ನು ಮುಚ್ಚುವುದಾಗಿ ಘೋಷಿಸಿದ ಒಂದು ದಿನದ ನಂತರ ತನ್ನ ಆಹಾರ ವಿತರಣಾ ವ್ಯವಹಾರವನ್ನು ಸ್ಥಗಿತಗೊಳಿಸುವುದಾಗಿ ಹೇಳಿತ್ತು.
ಅಮೆಜಾನ್ ಭಾರತದಲ್ಲಿ ತನ್ನ ಆಹಾರ ವಿತರಣಾ ಸೇವೆಯನ್ನು ಮೇ 2020ರಲ್ಲಿ ಪ್ರಾರಂಭಿಸಿತ್ತು. ನಮ್ಮ ವಾರ್ಷಿಕ ಆಪರೇಟಿಂಗ್ ಯೋಜನೆ ಪರಿಶೀಲನೆ ಪ್ರಕ್ರಿಯೆಯ ಭಾಗವಾಗಿ ನಾವು ಅಮೆಜಾನ್ ಫುಡ್ ಡೆಲಿವರಿ ವಿಭಾಗವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮಾಡಿದ್ದೇವೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ. ಆದರೆ ಕಂಪನಿಯು ಭಾರತದಲ್ಲಿ ಜನರನ್ನು ವಜಾಗೊಳಿಸುವುದನ್ನು ನಿರಾಕರಿಸಿದೆ.

ಈ ಹಿಂದೆ ಅಮೆಜಾನ್ 10,000 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಘೋಷಿಸಿತ್ತು. ಕಾರ್ಪೊರೇಟ್ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಸುಮಾರು 10,000 ಉದ್ಯೋಗಿಗಳನ್ನು ವಜಾಗೊಳಿಸಲು ಕಂಪನಿಯು ಯೋಜಿಸುತ್ತಿರುವುದರಿಂದ ಅನಿಶ್ಚಿತ ಸ್ಥೂಲ ಆರ್ಥಿಕ ವಾತಾವರಣವು ಇ ಕಾಮರ್ಸ್ ಕಂಪೆನಿ ಅಮೆಜಾನ್ ತನ್ನ ಜಾಗತಿಕ ಉದ್ಯೋಗಿಗಳನ್ನು ಕಡಿಮೆ ಮಾಡುತ್ತಿದೆ ಎಂದು ರಾಯಿಟರ್ಸ್ ಕಳೆದ ವಾರ ವರದಿ ಮಾಡಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications