ಭಾರತದಲ್ಲಿ ಆನ್ಲೈನ್ ಕಲಿಕಾ ಅಕಾಡೆಮಿ ಮುಚ್ಚಲಿದೆ ಅಮೆಜಾನ್
ಬೆಂಗಳೂರು, ನವೆಂಬರ್ 24: ಭಾರತದಲ್ಲಿನ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಾರಂಭವಾದ ಅಮೆಜಾನ್. ಕಾಂ ಗುರುವಾರದಂದು ತನ್ನ ಆನ್ಲೈನ್ ಕಲಿಕಾ ವೇದಿಕೆಯನ್ನು ಎರಡು ವರ್ಷಗಳೊಳಗೆ ಯಾವುದೇ ಕಾರಣವನ್ನು ಉಲ್ಲೇಖಿಸದೆ ಮುಚ್ಚುವುದಾಗಿ ಹೇಳಿದೆ.
ಅಮೆಜಾನ್ ಅಕಾಡೆಮಿ ಪ್ಲಾಟ್ಫಾರ್ಮ್ ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ವರ್ಚುವಲ್ ಕಲಿಕೆಯ ಜನಪ್ರಿಯತೆಯ ಮಧ್ಯೆ ಕಳೆದ ವರ್ಷದ ಆರಂಭದಲ್ಲಿ ಪ್ರಾರಂಭಿಸಲಾಯಿತು. ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿತು. ಇದು ಭಾರತದಾದ್ಯಂತ ಉನ್ನತ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪರೀಕ್ಷೆಗೆ ಇದು ತರಬೇತಿ ನೀಡುತ್ತದೆ.
ಇ ಕಾಮರ್ಸ್ ದೈತ್ಯ ಅಮೆಜಾನ್ ಅಕಾಡೆಮಿಯನ್ನು ಪ್ರಸ್ತುತ ಗ್ರಾಹಕರನ್ನು ನೋಡಿಕೊಂಡು ಹಂತ ಹಂತವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಕೋವಿಡ್ 19 ಪ್ರೇರಿತ ಲಾಕ್ಡೌನ್ಗಳ ನಂತರ ಭಾರತದಾದ್ಯಂತ ಮತ್ತೆ ತೆರೆಯುವ ಶಾಲೆಗಳು ಮತ್ತು ಕೋಚಿಂಗ್ ಸೆಂಟರ್ಗಳ ಒತ್ತಡದಲ್ಲಿ ಅನೇಕ ಎಜುಟೆಕ್ ಸಂಸ್ಥೆಗಳು ತತ್ತರಿಸುತ್ತಿರುವ ಸಮಯದಲ್ಲಿ ಅಮೆಜಾನ್ ಈ ನಿರ್ಧಾರ ಮಾಡಿದೆ.

ಕಳೆದ ತಿಂಗಳು ಆಕಾಶ್ ಎಜುಟೆಕ್ ಕಂಪೆನಿ ಮಾಲೀಕ ಬೈಜುಸ್ ಲಾಭ ಕೊರತೆಯ ಕಾರಣ 2,500 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿತ್ತು. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಇತರ ಎಜುಟೆಕ್ ಕಂಪೆನಿಗಳಾದ ಅನ್ ಅಕಾಡೆಮಿ, ಟಾಪ್ಆರ್, ವೈಟ್ಹ್ಯಾಟ್ ಜೂನಿಯರ್ ಮತ್ತು ವೇದಾಂತು ಕೂಡ ಈ ವರ್ಷದ ಆರಂಭದಲ್ಲಿ ವಜಾಗಳನ್ನು ಘೋಷಿಸಿದ್ದರು.
ಮೂಲಗಳ ಪ್ರಕಾರ ಈ ವರ್ಷದ ಅಕ್ಟೋಬರ್ನಲ್ಲಿ ಎಜುಟೆಕ್ ಪ್ಲಾಟ್ಫಾರ್ಮ್ ಅನ್ನು ಸ್ಥಗಿತಗೊಳಿಸುವ ಯೋಜನೆಯ ಬಗ್ಗೆ ಅಮೆಜಾನ್ ಉದ್ಯೋಗಿಗಳಿಗೆ ತಿಳಿಸಲಾಗಿತ್ತು. ಸುಮಾರು 25 ಉದ್ಯೋಗಿಗಳು ಈ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರೆಲ್ಲರನ್ನೂ ಈಗ ಕಂಪನಿಯು ತೆಗೆದಿದೆ. ವೇದಿಕೆಯು ಸುಮಾರು 150 ವಿದ್ಯಾರ್ಥಿಗಳಿಗೆ ತನ್ನ ಕೋರ್ಸ್ಗಳನ್ನು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗ್ರಾಹಕರು ಅಕ್ಟೋಬರ್ 2024 ರವರೆಗೆ ಒಂದು ವರ್ಷದ ಅವಧಿಯವರೆಗೆ ಆನ್ಲೈನ್ನಲ್ಲಿ ಪೂರ್ಣ ಕೋರ್ಸ್ಗಳಿಗೆ ಪ್ರವೇಶವನ್ನು ಹೊಂದಿರುತ್ತಾರೆ. ಹೆಚ್ಚುವರಿಯಾಗಿ, ಪ್ರಸ್ತುತ ಶೈಕ್ಷಣಿಕ ಬ್ಯಾಚ್ನಲ್ಲಿ ದಾಖಲಾದವರಿಗೆ ಸಂಪೂರ್ಣ ಶುಲ್ಕವನ್ನು ಅಮೆಜಾನ್ ಅಕಾಡೆಮಿ ಮರುಪಾವತಿ ಮಾಡುತ್ತದೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications