ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಿದ ಅಮೆಜಾನ್
ಬೆಂಗಳೂರು, ಮೇ 21 : ಮನೆ ಬಾಗಿಲಿಗೆ ಆಹಾರ ತಲುಪಿರುವ ಕ್ಷೇತ್ರಕ್ಕೆ ಅಮೆಜಾನ್ ಇಂಡಿಯಾ ಪಾದಾರ್ಪಣೆ ಮಾಡಲಿದೆ. ಈಗಾಗಲೇ ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ಮತ್ತು ಝೆಮ್ಯೂಟೋಗೆ ಇದರಿಂದಾಗಿ ಪೈಪೋಟಿ ಎದುರಾಗಲಿದೆ.
ಗುರುವಾರ ಅಮೆಜಾನ್ ಇಂಡಿಯಾ ಈ ಕುರಿತು ಘೋಷಣೆ ಮಾಡಿದೆ. ಫುಡ್ ಡೆಲಿವರಿ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಬೆಂಗಳೂರು ಸೇರಿದಂತೆ ಕೆಲವು ನಗರದಲ್ಲಿ ಆರಂಭಿಸಲಾಗುತ್ತದೆ ಎಂದು ಹೇಳಿದೆ. ಅಮೆಜಾನ್ ಅಪ್ಲಿಕೇಶನ್ನಲ್ಲಿಯೇ ಆಹಾರವನ್ನು ಜನರು ಆರ್ಡರ್ ಮಾಡಬಹುದು.
ಪ್ರಾಯೋಗಿಕವಾಗಿ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಈ ಸೇವೆ ಆರಂಭವಾಗಿದೆ. ಪಿನ್ ಕೋಡ್ ಬಳಸಿಕೊಂಡು ಜನರು ತಮ್ಮ ಬಡಾವಣೆಗೆ ಸೇವೆ ಲಭ್ಯವಿದೆಯೇ? ಎಂದು ಪರೀಕ್ಷಿಸಬಹುದಾಗಿದೆ.

ಅಮೆಜಾನ್ ಪ್ರತಿಷ್ಠಿತ ಹೋಟೆಲ್ಗಳ ಜೊತೆ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಅಡಿಗಾಸ್, ಫ್ರೆಶ್ಮೆನ್ಯು, ನಮಸ್ತೆ, ಚಾಯ್ ಪಾಯಿಂಟ್ ಸೇರಿದಂತೆ ವಿವಿಧ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿದೆ. ಚೈನೀಸ್ ಖಾದ್ಯಗಳನ್ನು ತಯಾರು ಮಾಡುವ ಸಂಸ್ಥೆಗಳ ಜೊತೆಗೂ ಒಪ್ಪಂದ ಆಗಿದೆ.
ಜನರು ಆಹಾರ ಪದಾರ್ಥಗಳ ಡೆಲಿವರಿಗಾಗಿ ಹಲವು ದಿನಗಳಿಂದ ಬೇಡಿಕೆ ಇಡುತ್ತಿದ್ದರು. ಈಗಾಗಲೇ ಇರುವ ಸೇವೆಗಳ ಜೊತೆ ಆಹಾರ ಪದಾರ್ಥಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಲಾಕ್ ಡೌನ್ ಸಮಯದಲ್ಲಿ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ ಎಂದು ಅಮೆಜಾನ್ ಹೇಳಿದೆ.
ಲಾಕ್ ಡೌನ್ ಅವಧಿಯಲ್ಲಿ ಅಮೆಜಾನ್ ಅಗತ್ಯ ವಸ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಕ್ಕೆ ಅಗತ್ಯ ವಸ್ತುಗಳ ಸರಬರಾಜನ್ನು ಮಾಡಲಾಗಿದೆ. ಇದನ್ನೇ ಆಧಾರವಾಗಿ ಇಟ್ಟುಕೊಂಡು ಆಹಾರ ಪದಾರ್ಥಗಳ ಡೆಲಿವರಿಗೆ ಮುಂದಾಗಿದೆ.
ಸ್ವಿಗ್ಗಿ ಮತ್ತು ಝೊಮ್ಯಾಟೋ ಲಾಕ್ ಡೌನ್ ಅವಧಿಯಲ್ಲಿ ಆದ ನಷ್ಟದಿಂದ ಹೊರ ಬರಲು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿವೆ. ಇಂತಹ ಸಂದರ್ಭದಲ್ಲಿ ಅಮೆಜಾನ್ ಹೊಸದಾಗಿ ಈ ಕ್ಷೇತ್ರಕ್ಕೆ ಕಾಲಿಡುತ್ತಿದೆ.
-
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಅಳೆದು ತೂಗಿ ಅನ್ನ ಮಾಡಬೇಡಿ,ತುಸು ಮಿಕ್ಕಲಿ: ಇದರ ಹಿಂದಿದೆ ಧಾರ್ಮಿಕ ಕಾರಣ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್











Click it and Unblock the Notifications