ವೈರಲ್ ಆಯಿತು "ಖಿನ್ನತೆ" ಬಗ್ಗೆ ಆನಂದ್ ಮಹೀಂದ್ರಾ ಟ್ವೀಟ್...
ವಾರದ ಆರಂಭ ಒಂದು ರೀತಿ ಗಡಿಬಿಡಿಯಿಂದ ಕೂಡಿದ್ದರೆ, ಎರಡು ಮೂರನೇ ದಿನಕ್ಕೆ ಕಾಲಿಡುತ್ತಿದ್ದಂತೆ ಕೆಲಸದಲ್ಲಿ ನಿರುತ್ಸಾಹ ಕಾಣಿಸಿಕೊಳ್ಳುತ್ತದೆ. ಹೇಳಲಾರದ ಖಿನ್ನತೆಯೊಂದು ಆವರಿಸುತ್ತದೆ. ಯಾವ ಕೆಲಸವನ್ನೂ ಮನಸ್ಸಿಟ್ಟು ಮಾಡಲು ಆಗದಂಥ ಸ್ಥಿತಿಯದು. ಬಹುಪಾಲು ಉದ್ಯೋಗಿಗಳಲ್ಲಿ ಈ "ಮಿಡ್ ವೀಕ್ ಬ್ಲೂಸ್" ಸರ್ವೇ ಸಾಮಾನ್ಯವೂ ಆಗಿಬಿಟ್ಟಿದೆ.
ಕೆಲಸದಲ್ಲಿ ನಿರಾಸಕ್ತಿ, ಬೇಡದ ಆಲೋಚನೆ, ಕಿರಿಕಿರಿ, ಒತ್ತಡ, ಮುಂದಿನ ಗುರಿಯ ಬಗ್ಗೆ ಅಸ್ಪಷ್ಟತೆ ಇವೆಲ್ಲವೂ ವಾರದ ನಡುವಿನ ಈ ಖಿನ್ನತೆಯ ಲಕ್ಷಣವೇ. ಆದರೆ ಇದರಿಂದ ಹೊರಬರುವ ಮಾರ್ಗವಿದೆಯೇ? ಈ ಕುರಿತು ಪ್ರಖ್ಯಾತ ಉದ್ಯಮಿ ಮತ್ತು ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಮಾಡಿರುವ ಟ್ವೀಟ್ ಇದೀಗ ವೈರಲ್ ಆಗಿದೆ.
ವಾರದ ಮಧ್ಯದಲ್ಲಿ ಕಾಣಿಸಿಕೊಳ್ಳುವ ಈ ಖಿನ್ನತೆಯಿಂದ ಹೊರಬರಲು ಎರಡು ಸಲಹೆಗಳನ್ನು ಈ ಟ್ವೀಟ್ ಮುಖಾಂತರ ಹಂಚಿಕೊಂಡಿದ್ದಾರೆ ಅವರು.

ಆನಂದ್ ಮಹೀಂದ್ರಾ ಟ್ವೀಟ್ ನಲ್ಲಿ ಏನಿದೆ?: ಮಿಡ್ ವೀಕ್ ಬ್ಲೂಸ್ ಬಗ್ಗೆ ವಿವರಿಸಲು ನಾಲ್ಕು ಬೀದಿ ದೀಪಗಳುಳ್ಳ ಸ್ಕೆಚ್ ಒಂದನ್ನು ಹಂಚಿಕೊಂಡಿದ್ದಾರೆ ಅವರು. ಅದರಲ್ಲಿ "ಕೀಪ್ ಯುವರ್ ಹೆಡ್ ಅಪ್" ಎಂದು ಸಂದೇಶವನ್ನೂ ಬರೆದಿದ್ದಾರೆ. ಇದಕ್ಕೆ ವಿವರಣೆ ನೀಡಿರುವ ಅವರು, ಖಿನ್ನತೆ ಎಂಬುದು ಹೊರಗಿನ ಸಂಗತಿಗಳಿಂದ ಆಗುವುದಲ್ಲ ಎಂದಿದ್ದಾರೆ.
ಇದರಿಂದ ಹೊರಬರಲು ಎರಡು ಸಲಹೆಗಳನ್ನು ನೀಡಿದ್ದಾರೆ. ಬೆಳಗ್ಗೆ ಪುಟ್ಟ ಧ್ಯಾನ ಹಾಗೂ ಪ್ರಾಣಾಯಾಮ ಮಾಡಿ, ಸಂಜೆ ಕೆಲ ಹೊತ್ತು ವ್ಯಾಯಾಮ ಮಾಡಿ. ಇವೆರಡು ಅಂಶಗಳು ನಮ್ಮನ್ನು ಎಂಥ ಖಿನ್ನತೆಯಿಂದಲೂ ಹೊರಬರುವಂತೆ ಮಾಡುತ್ತವೆ ಎಂದು ಬರೆದುಕೊಂಡಿದ್ದಾರೆ. ಆನಂದ್ ಮಹೀಂದ್ರಾ ಅವರ ಈ ಟ್ವೀಟ್ ವೈರಲ್ ಆಗಿದ್ದು, ಈ ಸಂದೇಶವನ್ನು ಒಪ್ಪಿದ ಹಲವು ಧನಾತ್ಮಕ ಪ್ರತಿಕ್ರಿಯೆಗಳು ಬಂದಿವೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications