ಸಿಮೆಂಟ್ ದರ ಪ್ರತಿ ಚೀಲಕ್ಕೆ ಶೇ.25ರಷ್ಟು ಹೆಚ್ಚಳ
ಬೆಂಗಳೂರು, ಜೂ.21: ಸಿಮೆಂಟ್ ತಯಾರಿಕಾ ಕಂಪನಿಗಳ ಸಂಘ ಸಿಮೆಂಟ್ ದರವನ್ನು ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕ್ರೆಡಾಯ್ - ಕರ್ನಾಟಕ ಘಟಕ, ಇದು ಸಿಮೆಂಟ್ ಕಂಪನಿಗಳ ಸ್ವೇಚ್ಛಾಚಾರದ ನಿರ್ಧಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕ್ರೆಡಾಯ್ ಆಡಳಿತ ಮಂಡಳಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದು, ಸದಸ್ಯರು ಬೆಲೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರತಿ ಚೀಲಕ್ಕೆ 255 ರೂಪಾಯಿ ಬೆಲೆ ಇತ್ತು. ಆದರೆ, ಈಗ 315 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಒಟ್ಟಾರೆ ಶೇ. 25 ರಷ್ಟು ಹೆಚ್ಚಳ ಮಾಡಲಾಗಿದೆ.

ಸಿಮೆಂಟ್ ತಯಾರಿಕಾ ಕಂಪನಿಗಳ ಈ ಕ್ರಮವನ್ನು ಪ್ರಶ್ನಿಸಿ ಕ್ರೆಡಾಯ್ ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡುವುದರ ಜತೆಯಲ್ಲಿ ಒಂದು ವಾರದ ಒಳಗೆ ಸಿಮೆಂಟ್ ದರವನ್ನು ಇಳಿಸಬೇಕೆಂದು ಮನವಿ ಮಾಡಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ದಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಕನ್ ಸ್ಟ್ರಕ್ಷನ್ ಫೆಡರೇಷನ್ ಆಫ್ ಇಂಡಿಯಾ, ನ್ಯಾಷನಲ್ ಹೈವೆ ಅಥಾರಿಟಿ ಆಫ್ ಇಂಡಿಯಾ ಮತ್ತು ಕ್ರೆಡಾಯ್ ಸಿಮೆಂಟ್ ದರ ಹೆಚ್ಚಳ ಖಂಡಿಸಿ ಕಾಂಪಿಟಿಷನ್ ಕಮಿಷನ್ ಆಫ್ ಇಂಡಿಯಾಕ್ಕೆ ದೂರು ನೀಡಲಿವೆ.
ದರ ಹೆಚ್ಚಳದ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲೆ ಆಗಲಿದೆ. ಏಕೆಂದರೆ, ಸಿಮೆಂಟ್ ಬೆಲೆ ಹೆಚ್ಚಳದಿಂದ ನಿರ್ಮಾಣ ವೆಚ್ಚ ಅಧಿಕಗೊಳ್ಳಲಿದೆ. ಹೀಗಾಗಿ ಅಪಾರ್ಟ್ ಮೆಂಟ್ ಗಳ ಬೆಲೆಯಲ್ಲೂ ಹೆಚ್ಚಳವಾಗುತ್ತದೆ. ಅಂದರೆ, ಜನ ಸಾಮಾನ್ಯರು ಹೆಚ್ಚಿನ ಹೊರೆಯನ್ನು ಹೊರಬೇಕಾಗುತ್ತದೆ.
ಸಿಮೆಂಟ್ ಕಂಪನಿಗಳು ಸಿಮೆಂಟ್ ದರವನ್ನು ಈ ಸಂದರ್ಭದಲ್ಲಿ ಹೆಚ್ಚಳ ಮಾಡಬಾರದಿತ್ತು ಎಂದು ಅಭಿಪ್ರಾಯಪಟ್ಟಿರುವ ಕಟ್ಟಡ ನಿರ್ಮಾಣ ಸಂಸ್ಥೆಗಳು ಇದಕ್ಕೆ ನೀಡಿರುವ ಸಮರ್ಥನೆ, ಮುಂಗಾರು ಮಳೆ ಆರಂಭವಾಗಿದೆ. ಈ ಸಂದರ್ಭದಲ್ಲಿ ನಿರ್ಮಾಣ ಕಾಮಗಾರಿಗಳು ಕುಂಠಿತವಾಗುತ್ತವೆ.
ಕ್ರೆಡಾಯ್ ಪ್ರಕಾರ, ಬೆಲೆ ಹೆಚ್ಚಳದಿಂದಾಗಿ ಸಿಮೆಂಟ್ ಮಾರಾಟದಲ್ಲಿ ಸ್ವಲ್ಪ ಕುಂಠಿತವಾಗಲಿದೆ. ಸಿಮೆಂಟ್ ಕಂಪನಿಗಳು ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳ ಮಾಡಬಾರದಿತ್ತು. ಈಗಾಗಲೆ ಕಬ್ಬಿಣದ ಕಂಪನಿಗಳು ಮೆಟ್ರಿಕ್ ಟನ್ ಗೆ 5 ಸಾವಿರ ರೂಪಾಯಿ ಹೆಚ್ಚಳ ಮಾಡಿ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಹೆಚ್ಚಿನ ಹೊರೆಯಾಗುವಂತೆ ಮಾಡಿವೆ.
ದೇಶದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಬಹುತೇಕ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಹೊಂದಿವೆ. ಬೆಲೆ ಹೆಚ್ಚಳದಿಂದ ಕಾಮಗಾರಿಗೆ ಹಿನ್ನಡೆ ಆಗುವುದಲ್ಲದೆ, ಕಾಮಗಾರಿ ಮುಗಿಯುವ ವೇಳೆಗೆ ದುಬಾರಿಯಾಗಲಿವೆ. ಅಲ್ಲದೇ ಮುಂದಿನ ದಿನಗಳಲ್ಲಿ ಜನ ಸಾಮಾನ್ಯರ ಮೇಲೆ ಹೆಚ್ಚಿನ ತೆರಿಗೆ ಹೊರೆ ಬೀಳಲೂ ಇದು ಕಾರಣವಾಗುತ್ತದೆ. (ಒನ್ಇಂಡಿಯಾ ಬಿಜಿನೆಸ್ ಡೆಸ್ಕ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications