ಎಚ್ ಡಿಎಫ್ ಸಿ ಬ್ಯಾಂಕ್ ಎಟಿಎಂ ಇನ್ಮುಂದೆ ಪೇಪರ್ ಲೆಸ್
ಮುಂಬೈ, ಮೇ.31: ಖಾಸಗಿ ವಲಯದ ಎರಡನೇ ಅತಿದೊಡ್ಡ ಬ್ಯಾಂಕ್ ಎಚ್ ಡಿಎಫ್ ಸಿ ಹೊಸ ಪರಿಸರ ಸ್ನೇಹಿ ಕ್ರಮಕ್ಕೆ ಮುಂದಾಗಿದೆ. ಎಚ್ ಡಿಎಫ್ ಸಿ ಬ್ಯಾಂಕ್ ಎಟಿಎಂನಲ್ಲಿ ಇನ್ಮುಂದೆ ಕಾಗದರಹಿತವಾಗಲಿದೆ. ಗ್ರಾಹಕರಿಗೆ ಎಸ್ ಎಂಎಸ್ ಮೂಲಕ ಅಲರ್ಟ್ ನೀಡಲು ಬ್ಯಾಂಕ್ ನಿರ್ಧರಿಸಿದೆ.
ಎಚ್ ಡಿಎಫ್ ಸಿ ಬ್ಯಾಂಕ್ ಎಟಿಎಂನಿಂದ ಕ್ಯಾಶ್ ಪಡೆಯುವಾಗ ರಸೀತಿ ಪಡೆಯುವ ಕ್ರಮಕ್ಕೆ ಬ್ರೇಕ್ ಬೀಳಲಿದೆ. ಇದರ ಬಳಿಕೆ ಕ್ಯಾಶ್ ವಿಥ್ ಡ್ರಾ ಮಾಡಿಕೊಂಡ ಮೇಲೆ ಎಸ್ ಎಂಎಸ್ ಮೂಲಕ ಗ್ರಾಹಕರಿಗೆ ಅಲರ್ಟ್ ಕಳಿಸಲಾಗುತ್ತದೆ. ಎಸ್ ಎಂಎಸ್ ನಲ್ಲಿ ವಿಥ್ ಡ್ರಾ ಮೊತ್ತ, ಬ್ಯಾಲೆನ್ಸ್ ಮೊತ್ತ ಸೇರಿದಂತೆ ಪೂರ್ತಿ ವಿವರ ಲಭ್ಯವಾಗಲಿದೆ ಎಂದು ಬ್ಯಾಂಕಿನ ಹಿರಿಯ ಅಧಿಕಾರಿ ಹೇಳಿದ್ದಾರೆ.[ಕ್ರೆಡಿಟ್ ಕಾರ್ಡ್ ಪಿನ್ ಅಂಚೆಯಲ್ಲಿ ಬರಲ್ಲ]

ಈ ಹೊಸ ವ್ಯವಸ್ಥೆಯನ್ನು ಮೊದಲಿಗೆ ಕೆಲವು ಎಟಿಎಂಗಳಲ್ಲಿ ಜಾರಿಗೊಳಿಸಲಾಗುತ್ತದೆ. ನಂತರ ದೇಶದೆಲ್ಲೆಡೆ ಇರುವ ಸುಮಾರು 11,700 ಎಟಿಎಂಗಳಲ್ಲಿ ಜೂನ್ ತಿಂಗಳ ಅಂತ್ಯಕ್ಕೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿದು ಬಂದಿದೆ. [ಮಿತಿ ಮೀರಿದ ಎಟಿಎಂ ಬಳಕೆ ಕೈ ಕಚ್ಚಲಿದೆ] (ಪಿಟಿಐ)
ಎಚ್ ಡಿಎಫ್ ಸಿ ಬ್ಯಾಂಕಿನ ಎಟಿಎಂ ಮೂಲಕ ಪ್ರತಿ ತಿಂಗಳಿಗೆ ಸುಮಾರು 2 ಕೋಟಿ ರು ಪ್ರತಿ ತಿಂಗಳಿಗೆ ವಿಥ್ ಡ್ರಾ ಕಾಣಲಾಗುತ್ತಿದೆ. ಈ ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೊಂಡರೆ ಸರಿ ಸುಮಾರು 10 ಕೋಟಿ ರು ಗೂ ಅಧಿಕ ಮೊತ್ತ ಉಳಿಯಲಿದೆ. ಕಳೆದ ವರ್ಷ ಸುಮಾರು 500ಕ್ಕೂ ಅಧಿಕ ಹೊಸ ಎಟಿಎಂ ಕೇಂದ್ರಗಳನ್ನು ಎಚ್ ಡಿಎಫ್ ಸಿ ತನ್ನ ಜಾಲಕ್ಕೆ ಸೇರಿಸಿಕೊಂಡಿದೆ. [ಗೃಹಸಾಲ, ವಾಹನ ಸಾಲ ಬಡ್ಡಿದರ ಇಳಿಕೆ]
ಈ ಮುಂಚೆ ಎಚ್ ಡಿಎಫ್ ಸಿ ಹಸಿರು ಪಿನ್ ಜಾರಿಗೊಳಿಸಿತ್ತು. ಗ್ರಾಹಕರಿಗೆ ಪಿನ್ ನಂಬರ್ಗಳನ್ನು ಮೊಬೈಲ್ ಮೆಸೆಜ್ ಮೂಲಕ ತಲುಪಿಸಲಾಗುತ್ತದೆ. ಮೊದಲ ಬಾರಿಯ ಪಾಸ್ ವರ್ಡ್ಗಳನ್ನು ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ಗ್ರಾಹಕರು ಅಗತ್ಯಬಿದ್ದರೆ ಬ್ಯಾಂಕ್ನ ಎಟಿಎಂ ಗಳಲ್ಲಿ ತಮ್ಮ ಪಾಸ್ ವರ್ಡ್ ಬದಲಾಯಿಸಿಕೊಳ್ಳಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications