ಉದ್ಯಮಿ ಮಲ್ಯ, ನೀರವ್ ಮೋದಿ, ಚೋಕ್ಸಿ 8441.5 ಕೋಟಿ ಆಸ್ತಿ ಬ್ಯಾಂಕ್ಗಳಿಗೆ ವರ್ಗಾವಣೆ
ನವದೆಹಲಿ, ಜೂನ್ 23: ಭಾರತೀಯ ಬ್ಯಾಂಕ್ಗಳಿಗೆ ವಂಚಿಸಿ ವಿದೇಶಕ್ಕೆ ಹಾರಿರುವ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಸಂಬಂಧಿಸಿದ 8441.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯವು ವರ್ಗಾಯಿಸಿದೆ.
ದೇಶದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳಲ್ಲಿ ಸಾಲ ಪಡೆದು ವಂಚಿಸಲಾಗಿದೆ. ಮೂವರು ಉದ್ಯಮಿ ಮಾಡಿರುವ ವಂಚನೆಯಿಂದಾಗಿ ಬ್ಯಾಂಕ್ಗಳಿಗೆ 22,586 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಜಾರಿ ನಿರ್ದೇಶನಾಲಯ ನೀಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಮುಂಬೈನ ಪಿಎಂಎಲ್ಎ ಅಡಿ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಜಾರಿ ನಿರ್ದೇಶನಾಲಯವು ಅದಕ್ಕೆ ಲಗತ್ತಿಸಲಾದ ಷೇರುಗಳನ್ನು (6,600 ಕೋಟಿ ರೂ.) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟಕ್ಕೆ ವರ್ಗಾಯಿಸಿದೆ.

ಸಾಲ ಮರುಪಾವತಿಗೆ 5824 ಕೋಟಿ ರೂ. ಷೇರು ಮಾರಾಟ
ಎಸ್ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಸಾಲ ಮರುಪಡೆಯುವಿಕೆ ನ್ಯಾಯಮಂಡಳಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ನ ಷೇರುಗಳನ್ನು 5824.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಆ ಮೂಲಕ ಜೂನ್ 25ರೊಳಗೆ ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಪಡೆಯುವ ಬಗ್ಗೆ ನಿರೀಕ್ಷಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳು ಈಗಾಗಲೇ ಷೇರುಗಳನ್ನು ಮಾರಾಟ ಮೂಲಕ 1357 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡಿಕೊಂಡಿವೆ.

ಇಡಿ ಜಪ್ತಿ ಮಾಡಿರುವ ಒಟ್ಟು ಆಸ್ತಿ-ಷೇರುಗಳ ಮೌಲ್ಯ?
ಜೂನ್ 23ರವರಗಿನ ಅಂಕಿ-ಅಂಶಗಳ ಪ್ರಕಾರ, ಪಿಎಂಎಲ್ಎ ಅಡಿ 18,170.2 ಕೋಟಿ ಮೌಲ್ಯದ ಆಸ್ತಿ ಮತ್ತು ಷೇರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪೈಕಿ 330 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಒಟ್ಟು ನಷ್ಟದ ಶೇ.40ರಷ್ಟು ನಷ್ಟವನ್ನು ಪ್ರತಿನಿಧಿಸುವ 9042 ಕೋಟಿ ರೂ.ಗಳ ಆಸ್ತಿಯನ್ನು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಹಸ್ತಾಂತರಿಸಲಾಗಿದೆ.

ವಿದೇಶಗಳಲ್ಲಿ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಸಂಗ್ರಹ
ಕೇಂದ್ರ ತನಿಖಾ ತಂಡದ ಅಧಿಕಾರಿಗಳು ದಾಖಲಿಸಿಕೊಂಡಿರುವ ಎಫ್ಐಆರ್ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ವೇಳೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಹಿವಾಟಿನ ಜೊತೆಗೆ ವಿದೇಶಗಳಲ್ಲಿ ಆಸ್ತಿ ಸಂಗ್ರಹಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅಲ್ಲದೇ, ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ತಮ್ಮ ನಿಯಂತ್ರಣದಲ್ಲಿ ಇರುವ ನಕಲಿ ಕಂಪನಿಗಳನ್ನು ತೋರಿಸಿ ಸಾರ್ವಜನಿಕ ಬ್ಯಾಂಕ್ಗಳಿಂದ ಸಾಲ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ.

ಮೂವರು ಉದ್ಯಮಿಗಳು ವಂಚಿಸಿದ ಶೇ.80.45ರಷ್ಟು ಸ್ವತ್ತು ವಶ
ಭಾರತೀಯ ಬ್ಯಾಂಕ್ಗಳಿಗೆ ನಕಲಿ ಕಂಪನಿಗಳ ದಾಖಲೆಯನ್ನು ತೋರಿಸಿ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ 22585.83 ಕೋಟಿ ರೂಪಾಯಿ ವಂಚಿಸಿದ್ದಾರೆ. ಈ ಪೈಕಿ ಇದುವರೆಗೂ ಶೇ.80.45ರಷ್ಟು ಅಂದರೆ 18,170.02 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮತ್ತು ಷೇರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಡಿ ವಶಕ್ಕೆ ಪಡೆದಿರುವ ಲಗತ್ತಿಸಿರುವ ಆಸ್ತಿಯಲ್ಲಿ 969 ಕೋಟಿ ರೂಪಾಯಿ ಮೌಲ್ಯದ ಆಸ್ತಿಯು ವಿದೇಶದಲ್ಲಿ ಇರುವುದು ಗೊತ್ತಾಗಿದೆ.

ಬ್ಯಾಂಕ್ಗಳಿಗೆ ಮಕ್ಮಲ್ ಟೋಪಿ ಹಾಕಿ ಉದ್ಯಮಿಗಳು ಪರಾರಿ
ಭಾರತೀಯ ಸಾರ್ವಜನಿಕ ಸ್ವಾಮ್ಯ ಹಾಗೂ ಖಾಸಗಿ ಬ್ಯಾಂಕ್ಗಳಿಗೆ ಮಕ್ಮಲ್ ಟೋಪಿ ಹಾಕಿದ ಮೂವರು ಉದ್ಯಮಿಗಳು ವಿದೇಶಗಳಿಗೆ ಪರಾರಿ ಆಗಿದ್ದಾರೆ. ಭಾರತಕ್ಕೆ ಮದ್ಯದ ದೊರೆ ವಿಜಯ್ ಮಲ್ಯ, ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಹಸ್ತಾಂತರಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟೇಟ್ ಕೋರ್ಟ್ ಆದೇಶಿಸಿದ್ದು, ಯುಕೆ ಹೈಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿದಿದೆ. ಯುಕೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನಿರಾಕರಿಸಿ ಹಿನ್ನೆಲೆ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಅಂತಿಮವಾಗಲಿದೆ.
ಭಾರತಕ್ಕೆ ಮತ್ತೊಬ್ಬ ಉದ್ಯಮಿ ನೀರವ್ ಮೋದಿ ಹಸ್ತಾಂತರಕ್ಕೂ ಕೂಡ ಯುಕೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ. ಹಸ್ತಾಂತರಕ್ಕೆ ಭಾರತ ಮನವಿ ಸಲ್ಲಿಸಿರುವ ಬೆನ್ನಲ್ಲೇ ಕಳೆದ 2 ವರ್ಷ ಮೂರು ತಿಂಗಳಿನಿಂದ ನೀರವ್ ಮೋದಿ ಲಂಡನ್ ಜೈಲಿನಲ್ಲಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications