ಆಕ್ಸಿಸ್ ಬ್ಯಾಂಕ್ ಪರವಾನಗಿ ರದ್ದು ಸುದ್ದಿ ರದ್ದಿ
ಸರಕಾರದ ಹಣ ಬದಲಾವಣೆ ನಿಯಮವನ್ನು ಮುರಿದ ಕಾರಣಕ್ಕಾಗಿ ಕಳೆದ ವಾರ ಆಕ್ಸಿಸ್ ಬ್ಯಾಂಕ್ ಶಾಖೆಯೊಂದರಲ್ಲಿ ಹತ್ತೊಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಿದ್ದೇವೆ ಎಂದು ತಿಳಿಸಿತ್ತು. ಇದು ಹಲವಾರು ಊಹಾಪೋಹಗಳಿಗೆ ಕಾರಣವಾಗಿತ್ತು.
ಮುಂಬೈ, ಡಿಸೆಂಬರ್ 12: ಆಕ್ಸಿಸ್ ಬ್ಯಾಂಕ್ ಪರವಾನಗಿಯನ್ನು ರದ್ದುಗೊಳಿಸಲು ರಿಸರ್ವ್ ಬ್ಯಾಂಕ್ ಸಿದ್ಧತೆ ನಡೆಸಿದೆ ಎಂದು ಸ್ಥಳೀಯ ಪತ್ರಿಕೆಯೊಂದರಲ್ಲಿ ಬಂದಿರುವ ವರದಿಯು ಸುಳ್ಳು ಹಾಗೂ ದುರುದ್ದೇಶಪೂರಿತವಾದದ್ದು, ಬ್ಯಾಂಕ್ ನಲ್ಲಿ ಎಲ್ಲವೂ ಹತೋಟಿಯಲ್ಲಿದೆ. ರಿಸರ್ವ್ ಬ್ಯಾಂಕ್ ನ ಎಲ್ಲ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ಬ್ಯಾಂಕ್ ತಿಳಿಸಿರುವುದಾಗಿ ಎಕನಾಮಿಕ್ ಟೈಮ್ಸ್ ನಲ್ಲಿ ಸೋಮವಾರ ಸಂಜೆ ವರದಿ ಮಾಡಿದೆ.
ಆಕ್ಸಿಸ್ ಬ್ಯಾಂಕ್ ಭಾರತದ ಮೂರನೇ ಅತಿ ದೊಡ್ಡ ಖಾಸಗಿ ಬ್ಯಾಂಕ್. ಸರಕಾರದ ಹಣ ಬದಲಾವಣೆ ನಿಯಮವನ್ನು ಮುರಿದ ಕಾರಣಕ್ಕಾಗಿ ಕಳೆದ ವಾರ ಆಕ್ಸಿಸ್ ಬ್ಯಾಂಕ್ ಶಾಖೆಯೊಂದರಲ್ಲಿ ಹತ್ತೊಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಿದ್ದೇವೆ ಎಂದು ತಿಳಿಸಿತ್ತು. ಶನಿವಾರ ದೋ ಪಹಾರ್ ಹಿಂದಿ ಪತ್ರಿಕೆಯಲ್ಲಿ ಆಕ್ಸಿಸ್ ಬ್ಯಾಂಕ್ ಪರವಾನಗಿ ರದ್ದು ಆಗುತ್ತದೆ ಎಂದು ವರದಿಯಾಗಿತ್ತು. ಅದಕ್ಕೆ ಬ್ಯಾಂಕ್ ಪ್ರತಿಕ್ರಿಯೆ ನೀಡಿದೆ.[ಚಾಂದಿನಿ ಚೌಕ್ ಶಾಖೆ ಬ್ಯಾಂಕ್ ನಕಲಿ ಖಾತೆಗಳಲ್ಲಿ ಸಿಕ್ಕಿದ್ದು 100 ಕೋಟಿ!]

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ, ಬ್ಯಾಂಕ್ ಉದ್ಯೋಗಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕಾರಣಕ್ಕೆ ಇಂಥ ಸುದ್ದಿ ಹಬ್ಬಿಸಲಾಗುತ್ತದೆ. ಮತ್ತು ಬ್ಯಾಂಕ್ ನ ಹೆಸರು ಕೆಡಿಸುವ ಉದ್ದೇಶ ಇದೆ ಎಂದು ಷೇರು ಮಾರುಕಟ್ಟೆಗೆ ಮಾಹಿತಿ ನೀಡಲಾಗಿದೆ. ಸೋಮವರ ಮಧ್ಯಾಹ್ನದ ಅವಧಿಯಲ್ಲಿ ಶೇ 2.5ರಷ್ಟು ಇಳಿದ ಆಕ್ಸಿಸ್ ಬ್ಯಾಂಕ್ ಷೇರುಗಳು 445ಕ್ಕೆ ಕುಸಿಯಿತು.[ಬೆಂಗಳೂರಿನ ಕೆನರಾ, ಐಸಿಐಸಿಐ, ಆಕ್ಸಿಸ್ ಬ್ಯಾಂಕ್ ಮೇಲೆ ದಾಳಿ]
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications