ಏ. 30ರೊಳಗೆ ಸ್ವ ದೃಢೀಕರಣ ನೀಡದಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಬ್ಲಾಕ್!
ಈ ನಿಯಮವು 2004ರ ಜುಲೈ 1ರಿಂದ 2015ರ ಆಗಸ್ಟ್ 31ರೊಳಗಿನ ಅವಧಿಯಲ್ಲಿ ನೂತನ ಬ್ಯಾಂಕ್ ಖಾತೆ ತೆರೆದಿರುವವರಿಗೆ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ, ಏಪ್ರಿಲ್ 12: ಬ್ಯಾಂಕ್ ಠೇವಣಿದಾರರು ತಮ್ಮ ಠೇವಣಿಯ ಬಗ್ಗೆ ಸ್ವಯಂ ದೃಢೀಕರಣ ಪತ್ರವನ್ನು ಬ್ಯಾಂಕ್ ಗಳಿಗೆ ಏಪ್ರಿಲ್ 30ರೊಳಗೆ ನೀಡಬೇಕಿದೆ. ತಪ್ಪಿದರೆ, ಸಂಬಂಧಪಟ್ಟವರ ಬ್ಯಾಂಕ್ ಅಕೌಂಟ್ ಗಳು ಬ್ಲಾಕ್ ಆಗಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಎಚ್ಚರಿಸಿದೆ.
ಅಂದಹಾಗೆ, ಈ ನಿಯಮವು 2014ರ ಜುಲೈ 1ರಿಂದ 2015ರ ಆಗಸ್ಟ್ 31ರೊಳಗಿನ ಅವಧಿಯಲ್ಲಿ ನೂತನ ಬ್ಯಾಂಕ್ ಖಾತೆ ತೆರೆದಿರುವವರಿಗೆ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ವಿದೇಶದಿಂದ ಹಣ ತರಿಸಿಕೊಳ್ಳುವ ಅಥವಾ ವಿದೇಶದಲ್ಲಿರುವ ವ್ಯಕ್ತಿಗಳಿಗೆ ಹಣ ವರ್ಗಾಯಿಸುವ ವೈಯಕ್ತಿಕ ಖಾತೆಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳಿದೆ.

ಆದಾಯ ತೆರಿಗೆ ಇಲಾಖೆಯೂ ತನ್ನ ಟ್ವಿಟರ್ ಖಾತೆಯ ಮೂಲಕ ಈ ವಿಚಾರವನ್ನು ತಿಳಿಸಿದೆ. Foreign Account Tax Compliance Ac (FACTA) ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಅಂದಹಾಗೆ, ಈ ಸ್ವ ದೃಢೀಕರಣದ ವೇಳೆ ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯವೇನಿಲ್ಲ ಎಂದು ಬ್ಯುಸಿನೆಸ್ ಟೈಮ್ಸ್ ವರದಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
Account holders are informed that, in case self-certifications are not provided till 30.4.2017,A/Cs would be blocked : pic.twitter.com/YICvRHqfPm
— Income Tax India (@IncomeTaxIndia) April 11, 2017
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications