ಗ್ರಾಹಕರೇ ಎಚ್ಚರ! ಮಾರ್ಚ್ ತಿಂಗಳಲ್ಲಿ 6 ದಿನಗಳ ಕಾಲ ಬ್ಯಾಂಕ್ ಸೇವೆ ವ್ಯತ್ಯಯ
ನವದೆಹಲಿ, ಫೆಬ್ರವರಿ 24: 2020ನೇ ಸಾಲಿನಲ್ಲಿ ಮೂರನೇ ಬಾರಿಗೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನವರಿ 31 ಮತ್ತು ಫೆಬ್ರವರಿ 1 ರಂದು ಎರಡು ದಿನಗಳ ಬ್ಯಾಂಕ್ ಮುಷ್ಕರದ ನಂತರ, ಮಾರ್ಚ್ ತಿಂಗಳಲ್ಲಿ ಮೂರು ದಿನಗಳ ಮುಷ್ಕರಕ್ಕೆ ಬ್ಯಾಂಕ್ ನೌಕರರ ಒಕ್ಕೂಟಗಳು ಕರೆ ನೀಡಿವೆ.
ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ (ಬಿಇಎಫ್ಐ) ಮತ್ತು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಮುಷ್ಕರಕ್ಕೆ ಕರೆ ನೀಡಿದ್ದು, ಲಕ್ಷಾಂತರ ಮಂದಿ ಬ್ಯಾಂಕ್ ಸಿಬ್ಬಂದಿ ಮಾರ್ಚ್ 11 ರಿಂದ 13 ರವರೆಗೆ 3 ದಿನಗಳ ಅಖಿಲ ಭಾರತ ಬ್ಯಾಂಕ್ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳು ನೌಕರರ ಸಂಘಟನೆಗಳು ಭಾಗಿಯಾಗುವ ಸಾಧ್ಯತೆಯಿದೆ.
ಬೇಡಿಕೆಗಳೇನು?: ವಿಶೇಷ ಭತ್ಯೆಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸುವುದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವುದು, ಕುಟುಂಬ ಪಿಂಚಣಿಯಲ್ಲಿ ಸುಧಾರಣೆ ಮುಂತಾದ ಪ್ರಮುಖ ಬೇಡಿಕೆಗಳಿವೆ.

2020ನೇ ಸಾಲಿನ ಬ್ಯಾಂಕ್ ರಜಾ ದಿನಗಳ ಸಂಪೂರ್ಣ ಪಟ್ಟಿ
ಸಾಲು ಸಾಲು ರಜೆಗಳಿವೆ: ಮಾರ್ಚ್ 8 ರಂದು ಭಾನುವಾರ ರಜೆ ಇದೆ. ಮಾರ್ಚ್ 10 ರಂದು ಹೋಳಿಹುಣ್ಣಿಮೆ ಪ್ರಯುಕ್ತ ರಜೆ ಇರುತ್ತದೆ. ಮಾರ್ಚ್ 11 ರಿಂದ 13 ರವರೆಗೆ 3 ದಿನಗಳ ಮುಷ್ಕರ ನಡೆದರೆ, ಮಾರ್ಚ್ 14ರಂದು ಎರಡನೇ ಶನಿವಾರ, ಮಾರ್ಚ್ 15 ಭಾನುವಾರ ರಜೆ ಸಿಗಲಿದೆ. ಸರಣಿಯಾಗಿ 6 ದಿನಗಳ ಕಾಲ ಬ್ಯಾಂಕ್ ಗಳ ಬಾಗಿಲು ಬಂದ್ ಮಾಡಿದರೆ, ಗ್ರಾಹಕರಿಗೆ ಸಮಸ್ಯೆ ಎದುರಾಗಲಿದೆ. ಹೀಗಾಗಿ, ಬಹುತೇಕ ಮಾರ್ಚ್ 2ನೇ ವಾರ ಬ್ಯಾಂಕುಗಳು ಕಾರ್ಯನಿರ್ವಹಿಸುವ ಸಾಧ್ಯತೆ ಕಡಿಮೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications