ಆಗಸ್ಟ್ ತಿಂಗಳಲ್ಲಿ ದೇಶದ ವಿವಿಧ ರಾಜ್ಯಗಳ ಬ್ಯಾಂಕುಗಳ ರಜಾ ಪಟ್ಟಿ
ನವದೆಹಲಿ, ಜುಲೈ 27: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಆಗಸ್ಟ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ, ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಜುಲೈ ತಿಂಗಳಲ್ಲಿ 15 ರಜೆಗಳು ದೇಶದ 9 ವಿವಿಧ ರಾಜ್ಯಗಳಿಗೆ ಸೀಮಿತವಾಗಿತ್ತು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಾತ್ರ ಜುಲೈ ತಿಂಗಳಂತೆ ಆಗಸ್ಟ್ ತಿಂಗಳಲ್ಲೂ ಕಡಿಮೆ ರಜೆ ದಿನಗಳು ಸಿಗುತ್ತವೆ.
ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾ ದಿನವಿರಲಿದೆ.
ಪ್ರತಿ ವರ್ಷ ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಗಮನಿಸಿ: ಕರ್ನಾಟಕದಲ್ಲಿ ಮೊಹರಂ ರಜಾ ದಿನ ಮಾತ್ರ ಆಗಸ್ಟ್ ತಿಂಗಳಲ್ಲಿ ಲಭ್ಯವಾಗಲಿದೆ. ಮಿಕ್ಕಂತೆ ವಿವಿಧ ರಾಜ್ಯಗಳ ರಜಾ ದಿನಗಳ ಬಗ್ಗೆ ವಿವರ ಮುಂದಿದೆ..
| ಆಗಸ್ಟ್ 2021ರಲ್ಲಿ ಬ್ಯಾಂಕ್ ರಜಾ ದಿನ | |||
|---|---|---|---|
| ದಿನ | ದಿನಾಂಕ | ರಜಾ ದಿನ | ನಗರ |
| ಆಗಸ್ಟ್ 13, 2021 | ಶುಕ್ರವಾರ | Patriot’s Day | ದೇಶದ ವಿವಿಧೆಡೆ |
| ಆಗಸ್ಟ್ 16 | ಸೋಮವಾರ | ಪಾರ್ಸೆ ಹೊಸ ದಿನ | ದೇಶದ ವಿವಿಧೆಡೆ |
| ಆಗಸ್ಟ್ 20 | ಶುಕ್ರವಾರ | ಮೊಹರಂ/ಮೊದಲ ಓಣಂ | ಕರ್ನಾಟಕ, ಕೇರಳ ಹಾಗೂ ಹಲವು ರಾಜ್ಯಗಳು |
| ಆಗಸ್ಟ್ 21 | ಶನಿವಾರ | ತಿರು ಓಣಂ | ಕೇರಳ |
| ಆಗಸ್ಟ್ 23 | ಸೋಮವಾರ | ಶ್ರೀನಾರಾಯಣ ಗುರು ಜಯಂತಿ | ಕೇರಳ |
| ಆಗಸ್ಟ್ 30 | ಸೋಮವಾರ | ಕೃಷ್ಣ ಜಯಂತಿ | ಭಾರತದ ಕೆಲವೆಡೆ |
| ಆಗಸ್ಟ್ 31 | ಮಂಗಳವಾರ | ಕೃಷ್ಣ ಜನ್ಮಾಷ್ಟಮಿ | ಭಾರತದ ಕೆಲವೆಡೆ |
ಮೇಲ್ಕಂಡ ದಿನಾಂಕಗಳಲ್ಲದೆ, ಆಗಸ್ಟ್ 1 (ಭಾನುವಾರ), ಆಗಸ್ಟ್ 14 (2ನೇ ಶನಿವಾರ), ಆಗಸ್ಟ್ 8 (ಭಾನುವಾರ), ಆಗಸ್ಟ್ 15 (ಭಾನುವಾರ), ಆಗಸ್ಟ್ 22 (ಭಾನುವಾರ), ಆಗಸ್ಟ್ 28 (4ನೇ ಶನಿವಾರ), ಆಗಸ್ಟ್ 29 (ಭಾನುವಾರ) ರಂದು ರಜೆ ಇರಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications