May Bank Holidays:ಮೇ ತಿಂಗಳ ಬ್ಯಾಂಕ್ ರಜೆ ಪಟ್ಟಿ: ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಏಪ್ರಿಲ್ 30: ಇನ್ನೇನು ನಾಳೆಯಿಂದಲೇ 2024ರ ಮೇ ತಿಂಗಳು ಆರಂಭವಾಗಲಿದೆ. ಈ ತಿಂಗಳ ವಿಶೇಷವರೆಂದರೆ ತಿಂಗಳ ಮೊದಲ ದಿನವೇ ರಜಾ ದಿನ. ಮೇ 1ರಂದು ಕಾರ್ಮಿಕರ ದಿನದ ನಿಮಿತ್ತ ಸಾಮಾನ್ಯವಾಗಿ ಬಹುತೇಕ ರಾಜ್ಯಗಳಲ್ಲಿ ಬ್ಯಾಂಕ್, ಸರ್ಕಾರಿ ಕಚೇರಿಗಳು ರಜೆ ಇರುತ್ತದೆ.
ಆರ್ಬಿಐ ಕ್ಯಾಲಂಡರ್ ಪ್ರಕಾರ 2024ರ ಮೇ ತಿಂಗಳಲ್ಲಿ ಬ್ಯಾಂಕುಗಳಿಗೆ 11 ದಿನ ರಜೆ ಇದೆ. ಕರ್ನಾಟಕದಲ್ಲಿ 10 ದಿನ ರಜೆ ಇದೆ. ಮೇ 1ರಂದು ಕಾರ್ಮಿಕರ ದಿನದ ನಿಮಿತ್ತ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳಲ್ಲಿ ಬ್ಯಾಂಕುಗಳು ಬಂದ್ ಇರಲಿದೆ. ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಕಾರಣ ಮೇ ತಿಂಗಳಲ್ಲಿ ಆರು ಹಂತಗಳ ಮತದಾನದ ನಡೆಯಲಿದ್ದು,ಮೇ 7, 13, 20 ಮತ್ತು 25ರಂದು ವಿವಿಧೆಡೆ ಮತದಾನ ಕಾರಣ ಬ್ಯಾಂಕ್ ರಜೆ ಇರುತ್ತದೆ.

ಮೇ ತಿಂಗಳ ಬ್ಯಾಂಕ್ ರಜೆ ಪಟ್ಟಿ
ಮೇ 1- ಬುಧವಾರ: ವಿಶ್ವ ಕಾರ್ಮಿಕರ ದಿನ/ ಮಹಾರಾಷ್ಟ್ರ ದಿನ (ಮಹಾರಾಷ್ಟ್ರ, ಕರ್ನಾಟಕ ತಮಿಳುನಾಡು, ಅಸ್ಸಾಂ, ಆಂಧ್ರ ಪ್ರದೇಶ, ತೆಲಂಗಾಣ, ಮಣಿಪುರ, ಕೇರಳ, ಪಶ್ಚಿಮ ಬಂಗಾಳ, ಗೋವಾ, ಬಿಹಾರ್ ಸೇರಿದಂತೆ 11 ರಾಜ್ಯಗಳಲ್ಲಿ ಬ್ಯಾಂಕ್ ರಜೆ)
ಮೇ 5- ಭಾನುವಾರ(ದೇಶದಾದ್ಯಂತ)
ಮೇ 7- ಮಂಗಳವಾರ: ಲೋಕಸಭಾ ಚುನಾವಣೆ 3ನೇ ಹಂತ (ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ಗೋವಾದಲ್ಲಿ ರಜೆ)
ಮೇ 8- ಬುಧವಾರ: ರಬೀಂದ್ರ ಜಯಂತಿ (ಪಶ್ಚಿಮ ಬಂಗಾಳದಲ್ಲಿ ರಜೆ)
ಮೇ 10- ಶುಕ್ರವಾರ: ಬಸವ ಜಯಂತಿ/ ಅಕ್ಷಯ ತೃತೀಯ (ಕರ್ನಾಟಕದಲ್ಲಿ ರಜೆ)
ಮೇ 11- ಎರಡನೇ ಶನಿವಾರ
ಮೇ 12- ಭಾನುವಾರ(ದೇಶದಾದ್ಯಂತ)
ಮೇ 13- ಸೋಮವಾರ: ಲೋಕಸಭಾ ಚುನಾವಣೆ 4ನೇ ಹಂತ (ಜಮ್ಮು ಕಾಶ್ಮೀರದಲ್ಲಿ ರಜೆ)
ಮೇ 16- ಗುರುವಾರ: ಸಿಕ್ಕಿಂ ರಾಜ್ಯ ದಿನ
ಮೇ 19-ಭಾನುವಾರ(ದೇಶದಾದ್ಯಂತ)
ಮೇ 20- ಸೋಮವಾರ (5ನೇ ಹಂತದ ಚುನಾವಣೆ)
ಮೇ 23-ಗುರುವಾರ: ಬುದ್ಧ ಪೂರ್ಣಿಮಾ (ಪ್ರಮುಖ ನಗರಗಳಲ್ಲಿ ರಜೆ)
ಮೇ 25- ನಾಲ್ಕನೇ ಶನಿವಾರ
ಮೇ 26: ಭಾನುವಾರ(ದೇಶದಾದ್ಯಂತ)
-
Bank Jobs: ಸರ್ಕಾರಿ ಬ್ಯಾಂಕ್ ಕೆಲಸಕ್ಕೆ ಇನ್ಮುಂದೆ ಸಿಬಿಲ್ ಸ್ಕೋರ್ ಕಡ್ಡಾಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications