ಒಂದು ದಿನದ ಮುಷ್ಕರಕ್ಕೆ ಕರೆನೀಡಿದ ಬ್ಯಾಂಕ್ ಯೂನಿಯನ್ ಒಕ್ಕೂಟ
ಮುಂಬೈ, ಡಿ 2: ಕ್ರಿಸ್ಮಸ್ ಹಬ್ಬದ ಮರುದಿನ ಅಂದರೆ, ಡಿಸೆಂಬರ್ 26ರಂದು ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಕರೆನೀಡಿದೆ.
ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡವನ್ನು ವಿಲೀನಗೊಳಿಸುವುದನ್ನು ವಿರೋಧಿಸಿ ಬ್ಯಾಂಕ್ ಮುಷ್ಕರಕ್ಕೆ ಕರೆನೀಡಲಾಗಿದೆ ಎಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಶೋಷಿಯೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಸೆಪ್ಟಂಬರ್ ತಿಂಗಳಲ್ಲಿ ಸಾರ್ವಜನಿಕ ವಲಯದ ಮೂರು ಬ್ಯಾಂಕುಗಳನ್ನು ವಿಲೀನಗೊಳಿಸುವುದಾಗಿ, ಕೇಂದ್ರ ಸರಕಾರ ಪ್ರಕಟಿಸಿತ್ತು. ಈ ಮೂರು ಬ್ಯಾಂಕುಗಳಲ್ಲಿ ಲಾಭದಲ್ಲಿ ನಡೆಯುತ್ತಿದ್ದ ಬ್ಯಾಂಕ್ ಎಂದರೆ ಅದು ವಿಜಯಾ ಬ್ಯಾಂಕ್. ಈಗ ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನಗೊಳಿಸಲಾಗುತ್ತಿದೆ.

ಕರ್ನಾಟಕದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯಾ ಬ್ಯಾಂಕ್ ಅನ್ನು ಇತರ ಬ್ಯಾಂಕ್ ಜೊತೆ ವಿಲೀನಗೊಳಿಸುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.
ವಿಲೀನದ ಬಗ್ಗೆ ಪ್ರಸ್ತಾವ ಬಂದ ನಂತರ ಸಾರ್ವಜನಿಕ ವಲಯದ ಬ್ಯಾಂಕ್ ಷೇರುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು. ಅದರಲ್ಲೂ ವಿಜಯಾ ಬ್ಯಾಂಕ್ ಷೇರು ಇಪ್ಪತ್ತು ಪರ್ಸೆಂಟ್ ಗೂ ಹೆಚ್ಚು ಕುಸಿತ ಕಂಡಿದೆ.
ವಿಜಯಾ ಬ್ಯಾಂಕಿನ ಅನುತ್ಪಾದಕ ಆಸ್ತಿ ಬಹಳ ಕಡಿಮೆ ಇದ್ದು, ಸರಕಾರಕ್ಕೆ ಲಾಭಾಂಶ ನೀಡುತ್ತಿರುವ ಬ್ಯಾಂಕ್ ಗಳಲ್ಲಿ ವಿಜಯಾ ಬ್ಯಾಂಕ್ ಕೂಡ ಒಂದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications