ಮಾರ್ಚ್ 27 ರಿಂದ ಏ. 4ರ ಅವಧಿಯಲ್ಲಿ ಬ್ಯಾಂಕ್ 2 ದಿನ ಮಾತ್ರ ಕೆಲಸ
ನವದೆಹಲಿ, ಮಾರ್ಚ್ 21: ಮಾರ್ಚ್ ತಿಂಗಳಲ್ಲಿ ಬ್ಯಾಂಕ್ ನೌಕರರ ಒಕ್ಕೂಟವು ನಡೆಸಿದ ಮುಷ್ಕರದಿಂದಾಗಿ ನಾಲ್ಕು ದಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈಗ ಮಾರ್ಚ್ 27 ಏಪ್ರಿಲ್ 4 ರ ಅವಧಿಯಲ್ಲಿ ಬ್ಯಾಂಕ್ ವ್ಯವಹಾರ ಕಷ್ಟವಾಗಲಿದೆ.
ಮಾರ್ಚ್ 27 ಏಪ್ರಿಲ್ 4 ರ ಅವಧಿಯಲ್ಲಿ ಬ್ಯಾಂಕ್ ವ್ಯವಹಾರ ಕಷ್ಟ. ಈ ಅವಧಿಯಲ್ಲಿ ಕೇವಲ 2 ದಿನಗಳು ಮಾತ್ರ ಬ್ಯಾಂಕ್ ಕಾರ್ಯ ನಿರ್ವಹಿಸಲಿದೆ ಎಂದು ಬ್ಯಾಂಕ್ ರಜಾ ದಿನಗಳ ಪಟ್ಟಿಯಿಂದ ಹೇಳಬಹುದು. ಅದರಲ್ಲೂ ಉತ್ತರ ಭಾರತದಲ್ಲಿ ಸಾಲು ಸಾಲು ರಜೆ ಮಜಾ ಸಿಗಲಿದೆ.
ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾದಿನವಿರಲಿದೆ.

ಮಾರ್ಚ್ 27 ನಾಲ್ಕನೇ ಶನಿವಾರ ಎಂದು ರಜೆ ಇರಲಿದೆ. ಮಾರ್ಚ್ 28 ಭಾನುವಾರದ ರಜೆ, ಮಾರ್ಚ್ 29, 30 ರಂದು ಹೋಳಿ ಹಬ್ಬದ ಅಂಗವಾಗಿ ದೇಶದೆಲ್ಲೆಡೆ ರಜೆ ಸಿಗಲಿದೆ. ಮಾರ್ಚ್ 30ರಂದು ಬಿಹಾರ ರಾಜ್ಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆ ರಾಜ್ಯದ ಬ್ಯಾಂಕುಗಳಿಗೆ ಅಂದು ರಜೆ ಇರಲಿದೆ.ಮಾರ್ಚ್ 31 ಆರ್ಥಿಕ ವರ್ಷದ ಕೊನೆ ದಿನದಂದು ಬ್ಯಾಂಕ್ ಜೊತೆಗೆ ಗ್ರಾಹಕರು ವ್ಯವಹರಿಸಲು ಆಸ್ಪದವಿರುವುದಿಲ್ಲ. ಏಪ್ರಿಲ್ 1 ರಂದು ಬ್ಯಾಂಕ್ ಅಕೌಂಟಿಂಗ್ ಕಾರ್ಯ ನಡೆಯಲಿದೆ, ಏಪ್ರಿಲ್ 2ರಂದು ಗುಡ್ ಫ್ರೈಡೇ ಅಂಗವಾಗಿ ರಜೆ ಘೋಷಿಸಲಾಗಿದೆ. ಏಪ್ರಿಲ್ 3ರಂದು ಬ್ಯಾಂಕ್ ಓಪನ್ ಇರಲಿದೆ. ಏಪ್ರಿಲ್ 4 ರಂದು ಭಾನುವಾರದ ರಜೆ ಸಿಗಲಿದೆ.
ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications