Bengaluru Commuters: ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಬೆಂಗಳೂರು ಜನರ ಡಿಮ್ಯಾಂಡ್ ಇದು, ಸರ್ಕಾರ ಒಪ್ಪುತ್ತಾ?
ಬೆಂಗಳೂರು ಮಹಾನಗರದಲ್ಲಿ ಬೈಕ್ ಟ್ಯಾಕ್ಸಿ ಅಬ್ಬರ ಮತ್ತೆ ಶುರುವಾಗುತ್ತಿದೆ, ಬೈಕ್ ಟ್ಯಾಕ್ಸಿಗೆ ಈಗ ಅನುಮತಿ ಸಿಕ್ಕ ನಂತರ ಪ್ರಯಾಣಿಕರು ಖುಷಿಯಾಗಿದ್ದಾರೆ. ಆದರೆ ಆಟೋ ಹಾಗೂ ಕ್ಯಾಬ್ ಚಾಲಕರು ಈ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಒಬ್ಬರೇ ಪ್ರಯಾಣಿಸುವಾಗ, ಕಡಿಮೆ ದೂರದ ಪ್ರಯಾಣಕ್ಕೆ ಬೈಕ್ ಟ್ಯಾಕ್ಸಿ ಅವಲಂಬಿಸಿರುವ ಲಕ್ಷಾಂತರ ದೈನಂದಿನ ಪ್ರಯಾಣಿಕರು ತಮ್ಮ ದಿನನಿತ್ಯದ ಕಾರ್ಯ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ನಂತರ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಇದ್ದ ತೊಡಕು ನಿವಾರಣೆ ಆಗಿದೆ. ಹೀಗಿದ್ದಾಗ ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರು ಬೈಕ್ ಟ್ಯಾಕ್ಸಿ ಸೇವೆ ವಿಚಾರದಲ್ಲಿ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ.
ಬೆಂಗಳೂರಿನ ನಿವಾಸಿ ಹಾಗೂ ಬೈಕ್ ಟ್ಯಾಕ್ಸಿ ಸೇವೆ ಬಳಸುವ ಪ್ರಯಾಣಿಕರೊಬ್ಬರು ಹೇಳುವಂತೆ, ಈಗ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ಸಿಕ್ಕಿರುವುದು ಸಂತಸದ ವಿಚಾರ. ಬೇರೆ ಆಯ್ಕೆಗಳಿಗೆ ಹೋಲಿಸಿದರೆ ಬೈಕ್ ಟ್ಯಾಕ್ಸಿಗಳು ಹತ್ತಿರದ ಜಾಗಗಳನ್ನು ತಲುಪಲು ಕಡಿಮೆ ವೆಚ್ಚ ಹಾಗೂ ವೇಗವಾಗಿರುತ್ತವೆ. ಆದರೆ ಸರ್ಕಾರ ಬೈಕ್ ಟ್ಯಾಕ್ಸಿಗಳ ನಿಯಮದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಬೇಕು ಎನ್ನುವ ಆಗ್ರಹ ಕೂಡ ಮಾಡುತ್ತಾರೆ. ಏಕೆಂದರೆ ಇದೇ ಸಮಯವನ್ನು ಬಳಸಿಕೊಂಡು ಟ್ಯಾಕ್ಸಿ ಅಪ್ಲಿಕೇಷನ್ಸ್ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ವಸೂಲಿ ಮಾಡುವ ಆತಂಕ ಕೂಡ ಇದೆ. ಹೀಗಾಗಿ ಸರ್ಕಾರವೇ ಇದಕ್ಕೆ ನಿಯಂತ್ರಣ ಹೇರಿದರೆ ಒಳ್ಳೆಯದು ಅಂತಿದ್ದಾರೆ ಬೆಂಗಳೂರಿನ ಪ್ರಯಾಣಿಕರು.

ಬೈಕ್ ಟ್ಯಾಕ್ಸಿ ನಿಯಮ ಜಾರಿಗೆ ಒತ್ತಾಯ
ಮತ್ತೊಂದು ಕಡೆ ಬೆಂಗಳೂರು ನಗರದಲ್ಲಿ ಮೆಟ್ರೋ ಜಾಲ ವಿಸ್ತರಣೆ ಆಗಿದ್ದು, 83 ನಿಲ್ದಾಣ ಇರುವ ನಮ್ಮ ಬೆಂಗಳೂರು ಮೆಟ್ರೋದಲ್ಲಿ 96 ಕಿಮೀ ಜಾಲ ವಿಸ್ತರಣೆ ಆಗಿದೆ. ಇನ್ನೂ 79 ಕಿಮೀ ಮಾರ್ಗವು ಕೆಲವೇ ವರ್ಷಗಳಲ್ಲಿ ಸಿದ್ಧವಾಗಲಿದೆ. ಹೀಗಿದ್ದಾಗ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣ ಮಾಡಲು ಜನ ಕೂಡ ಬೈಕ್ ಟ್ಯಾಕ್ಸಿ ಸೇವೆ ಮೊರೆ ಹೋಗುವುದು ಮಾಮೂಲು.
ಈ ಎಲ್ಲಾ ವಿಚಾರಗಳನ್ನು ಲೆಕ್ಕಹಾಕಿ ಮತ್ತು ಭವಿಷ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಉತ್ತಮವಾಗಿ ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ರೀತಿ ಇರಲು ಸರ್ಕಾರ ನಿಯಮಗಳನ್ನು ಜಾರಿಗೆ ತರಬೇಕು ಎಂಬ ಆಗ್ರಹ ಇದೀಗ ಪ್ರಯಾಣಿಕರಿಂದ ಕೇಳಿಬರುತ್ತಿದೆ. ಆದರೆ ಸರ್ಕಾರ ಇದನ್ನು ಯಾವ ರೀತಿಯಾಗಿ ಸ್ವೀಕಾರ ಮಾಡುತ್ತೆ? ಎಂಬುದು ಈಗ ಕುತೂಹಲದ ಪ್ರಶ್ನೆಯಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications