Bengaluru Commuters: ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಬೆಂಗಳೂರು ಜನರ ಡಿಮ್ಯಾಂಡ್ ಇದು, ಸರ್ಕಾರ ಒಪ್ಪುತ್ತಾ?
ಬೆಂಗಳೂರು ಮಹಾನಗರದಲ್ಲಿ ಬೈಕ್ ಟ್ಯಾಕ್ಸಿ ಅಬ್ಬರ ಮತ್ತೆ ಶುರುವಾಗುತ್ತಿದೆ, ಬೈಕ್ ಟ್ಯಾಕ್ಸಿಗೆ ಈಗ ಅನುಮತಿ ಸಿಕ್ಕ ನಂತರ ಪ್ರಯಾಣಿಕರು ಖುಷಿಯಾಗಿದ್ದಾರೆ. ಆದರೆ ಆಟೋ ಹಾಗೂ ಕ್ಯಾಬ್ ಚಾಲಕರು ಈ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಒಬ್ಬರೇ ಪ್ರಯಾಣಿಸುವಾಗ, ಕಡಿಮೆ ದೂರದ ಪ್ರಯಾಣಕ್ಕೆ ಬೈಕ್ ಟ್ಯಾಕ್ಸಿ ಅವಲಂಬಿಸಿರುವ ಲಕ್ಷಾಂತರ ದೈನಂದಿನ ಪ್ರಯಾಣಿಕರು ತಮ್ಮ ದಿನನಿತ್ಯದ ಕಾರ್ಯ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ನಂತರ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಇದ್ದ ತೊಡಕು ನಿವಾರಣೆ ಆಗಿದೆ. ಹೀಗಿದ್ದಾಗ ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರು ಬೈಕ್ ಟ್ಯಾಕ್ಸಿ ಸೇವೆ ವಿಚಾರದಲ್ಲಿ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ.
ಬೆಂಗಳೂರಿನ ನಿವಾಸಿ ಹಾಗೂ ಬೈಕ್ ಟ್ಯಾಕ್ಸಿ ಸೇವೆ ಬಳಸುವ ಪ್ರಯಾಣಿಕರೊಬ್ಬರು ಹೇಳುವಂತೆ, ಈಗ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ಸಿಕ್ಕಿರುವುದು ಸಂತಸದ ವಿಚಾರ. ಬೇರೆ ಆಯ್ಕೆಗಳಿಗೆ ಹೋಲಿಸಿದರೆ ಬೈಕ್ ಟ್ಯಾಕ್ಸಿಗಳು ಹತ್ತಿರದ ಜಾಗಗಳನ್ನು ತಲುಪಲು ಕಡಿಮೆ ವೆಚ್ಚ ಹಾಗೂ ವೇಗವಾಗಿರುತ್ತವೆ. ಆದರೆ ಸರ್ಕಾರ ಬೈಕ್ ಟ್ಯಾಕ್ಸಿಗಳ ನಿಯಮದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಬೇಕು ಎನ್ನುವ ಆಗ್ರಹ ಕೂಡ ಮಾಡುತ್ತಾರೆ. ಏಕೆಂದರೆ ಇದೇ ಸಮಯವನ್ನು ಬಳಸಿಕೊಂಡು ಟ್ಯಾಕ್ಸಿ ಅಪ್ಲಿಕೇಷನ್ಸ್ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ವಸೂಲಿ ಮಾಡುವ ಆತಂಕ ಕೂಡ ಇದೆ. ಹೀಗಾಗಿ ಸರ್ಕಾರವೇ ಇದಕ್ಕೆ ನಿಯಂತ್ರಣ ಹೇರಿದರೆ ಒಳ್ಳೆಯದು ಅಂತಿದ್ದಾರೆ ಬೆಂಗಳೂರಿನ ಪ್ರಯಾಣಿಕರು.

ಬೈಕ್ ಟ್ಯಾಕ್ಸಿ ನಿಯಮ ಜಾರಿಗೆ ಒತ್ತಾಯ
ಮತ್ತೊಂದು ಕಡೆ ಬೆಂಗಳೂರು ನಗರದಲ್ಲಿ ಮೆಟ್ರೋ ಜಾಲ ವಿಸ್ತರಣೆ ಆಗಿದ್ದು, 83 ನಿಲ್ದಾಣ ಇರುವ ನಮ್ಮ ಬೆಂಗಳೂರು ಮೆಟ್ರೋದಲ್ಲಿ 96 ಕಿಮೀ ಜಾಲ ವಿಸ್ತರಣೆ ಆಗಿದೆ. ಇನ್ನೂ 79 ಕಿಮೀ ಮಾರ್ಗವು ಕೆಲವೇ ವರ್ಷಗಳಲ್ಲಿ ಸಿದ್ಧವಾಗಲಿದೆ. ಹೀಗಿದ್ದಾಗ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣ ಮಾಡಲು ಜನ ಕೂಡ ಬೈಕ್ ಟ್ಯಾಕ್ಸಿ ಸೇವೆ ಮೊರೆ ಹೋಗುವುದು ಮಾಮೂಲು.
ಈ ಎಲ್ಲಾ ವಿಚಾರಗಳನ್ನು ಲೆಕ್ಕಹಾಕಿ ಮತ್ತು ಭವಿಷ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಉತ್ತಮವಾಗಿ ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ರೀತಿ ಇರಲು ಸರ್ಕಾರ ನಿಯಮಗಳನ್ನು ಜಾರಿಗೆ ತರಬೇಕು ಎಂಬ ಆಗ್ರಹ ಇದೀಗ ಪ್ರಯಾಣಿಕರಿಂದ ಕೇಳಿಬರುತ್ತಿದೆ. ಆದರೆ ಸರ್ಕಾರ ಇದನ್ನು ಯಾವ ರೀತಿಯಾಗಿ ಸ್ವೀಕಾರ ಮಾಡುತ್ತೆ? ಎಂಬುದು ಈಗ ಕುತೂಹಲದ ಪ್ರಶ್ನೆಯಾಗಿದೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications