Mantri Mall Reopened: ಶಾಪಿಂಗ್ ಪ್ರಿಯರ ಖುಷಿಯ ತಾಣ ಮಂತ್ರಿ ಮಾಲ್ ಪುನಾರಂಭ- ಗ್ರಾಹಕರ ಸಂಖ್ಯೆ ಹೆಚ್ಚಳ ಸಾಧ್ಯತೆ
ಬೆಂಗಳೂರು ಮೇ 18: ಕಳೆದೊಂದು ವಾರದಿಂದ ಬಂದ್ ಆಗಿದ್ದ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಮಲ್ಲೇಶ್ವರದ ಮಂತ್ರಿ ಮಾಲ್ ಶುಕ್ರವಾರದಿಂದ ಪುನರಾಂಭಗೊಂಡಿದೆ. ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಅಕ್ಷಯ ತೃತೀಯಯದಂದು (ಮೇ 10ರ ಶುಕ್ರವಾರ) ಬಿಬಿಎಂಪಿ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿ ಸೀಜ್ ಮಾಡಿದರು.
ಬಿಬಿಎಂಪಿಯ ಕ್ರಮವನ್ನು ವಿರೋಧಿಸಿ ಮಂತ್ರಿ ಮಾಲ್ನ ಆಡಳಿತ ಮಂಡಳಿ ನ್ಯಾಯಾಲಯದ ಮೊರೆ ಹೋಗಿದ್ದರು. ಕಳೆದ ಗುರುವಾರ ಹೈಕೋರ್ಟ್ ಜುಲೈ 31ರ ಒಳಗಾಗಿ 20 ಕೋಟಿ ಬಾಕಿ ಪಾವತಿ ಮಾಡುವಂತೆ ಆದೇಶಿಸುವುದಾರೊಂದಿಗೆ ಮಾಲ್ ತೆರೆಯುವುದಕ್ಕೆ ಅವಕಾಶ ನೀಡಿದೆ.

ಮಂತ್ರಿ ಮಾಲ್ 50 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು ಈ ಪೈಕಿ 20 ಕೋಟಿ ರೂ.ಗಳನ್ನ ಜುಲೈ 31 ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಲ್ ತೆರೆಯಲು ಸೂಚನೆ ನೀಡಲಾಗಿದೆ. 250ಕ್ಕೂ ಅಧಿಕ ಮಳಿಗೆ ಹಾಗೂ ವ್ಯಾಪಾರ ಹಿನ್ನೆಲೆಯಲ್ಲಿ ಹೈಕೋರ್ಟ್ ಬಿಬಿಎಂಪಿಗೆ ಮಾಲ್ ತೆರೆಯುವಂತೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಮಂತ್ರಿ ಮಾಲ್ ಆಡಳಿತ ಮಂಡಳಿಗೆ ಬೀಗದ ಕೂ ಹಸ್ತಾಂತರಿಸಿದ್ದಾರೆ . ಮಾಲ್ನ ವ್ಯಾಪಾರಿಗಳು ಶುಕ್ರವಾರ ಬೆಳಗ್ಗೆ ಅಂಗಡಿ ಮಳಿಗೆಗಳನ್ನು ಸ್ವಚ್ಚಗೊಳಿಸುವುದರಲ್ಲಿ ನಿರತರಾಗಿದ್ದರು. ಮಾಲ್ ಆರಂಭಗೊಳ್ಳುತ್ತಿದಂತೆ ಗ್ರಾಹಕರು ಎಂದಿನಂತೆ ಆಗಮಿಸಿ ಖರೀದಿಯಲ್ಲಿ ತೊಡಗಿದ್ದಾರೆ.

ಹಲವಾರು ಬಾರಿ ಮಾಲ್ಗೆ ನೋಟೀಸ್
ಈ ಹಿಂದೆಯು ಕೆಲವು ಬಾರಿ ಇದೇ ತೆರಿಗೆ ಬಾಕಿ ಪಾವತಿಸದ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ನಾಲ್ಕು ಬಾರಿ ಮಂತ್ರಿ ಮಾಲ್ಗೆ ಬೀಗ ಜಡಿಯಲಾಗಿತ್ತು. ಆದರೂ ಬುದ್ಧಿ ಕಲಿಯದ ಮಂತ್ರಿ ಮಾಲ್ ಆಡಳಿತ ಮಂಡಳಿ ತನ್ನ ತೆರಿಗೆ ಪಾವತಿಯಲ್ಲಿ ನಿರ್ಲಕ್ಷ್ಯ ಮುಂದುವರೆಸಿತ್ತು.
ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆ ಪ್ರಕಾರ, ನಿಮ್ಮ ವ್ಯಾಪಾರಕ್ಕೆ ಸಂಬಂಧಿಸಿದಂತೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಲಾಗಿದೆ ಎಂದು ಮಂತ್ರಿ ಮಾಲ್ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ಬಿಬಿಎಂಪಿ ನೋಟಿಸ್ ಅಂಟಿಸಲಾಗಿತ್ತು.
ತೆರಿಗೆ ಬಾಕಿ ಉಳಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಒನ್ಟೈಮ್ ಪೇಪೆಂಟ್ಗೆ ಅವಕಾಶ ನೀಡಿತ್ತು. ಆದರೂ ಸಹಿತ ತೆರಿಗೆ ಪಾವತಿಸದೇ ನಿರ್ಲಕ್ಷ್ಯ ವಹಿಸಿತ್ತು. ಹೀಗಾಗಿ ಬಿಬಿಎಂಪಿಯು ಮಾಲ್ ಅನ್ನು ಸೀಲ್ ಮಾಡಿ ಬಾಗಿಲು ಹಾಕಿತು.
ಶಾಪಿಂಗ್ ಪ್ರಿಯರು ಖುಷ್
ಸಾಮಾನ್ಯವಾಗಿ ವಾರಾಂತ್ಯಗಳಲ್ಲಿ ಮಂತ್ರಿ ಮಾಲ್ಗೆ ಶಾಪಿಂಗ್ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೆ ಬೆಂಗಳೂರಿನಲ್ಲಿ ಮಂತ್ರಿ ಮಾಲ್ನಲ್ಲೇ ಶಾಪಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮಾಲ್ ಓಪನ್ ಆಗುತ್ತಿದ್ದಂತೆ ಶಾಪಿಂಗ್ ಪ್ರಿಯರು ಸಂತೋಷಗೊಂಡಿದ್ದಾರೆ. ಮಾಲ್ ವಾರಂತ್ಯವೇ ಓಪನ್ ಆಗಿರುವುದರಿಂದ ಗ್ರಾಹಕರು ಖುಷಿ ಪಟ್ಟಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications