ಕಾವೇರಿಗಾಗಿ ಗಲಭೆ: ಬೆಂಗಳೂರಿಗೆ 25 ಸಾವಿರ ಕೋಟಿ ರು ನಷ್ಟ!
ಬೆಂಗಳೂರು, ಸೆ. 13: ಕಾವೇರಿ ವಿವಾದ ಹಿನ್ನಲೆಯಲ್ಲಿ ಉಂಟಾದ ಗಲಭೆ, ಬಂದ್, ವಾಹನ- ಕಟ್ಟಡ ಧ್ವಂಸ, ಸಾರಿಗೆ ಸಂಪರ್ಕ ಕಡಿತ ಹೀಗೆ ಅವ್ಯವಸ್ಥೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಸರಿ ಸುಮಾರು 25,000 ಕೋಟಿ ರು ನಷ್ಟ ತಂದಿದೆ ಎಂದು ಅಸ್ಸೋಚಾಮ್ ಅಂದಾಜಿಸಿದೆ.
ವಿವಿಧ ಸ್ತರದ ಶ್ರಮಿಕ ವರ್ಗದ ದಿನ ನಿತ್ಯದ ಸಂಚಾರಕ್ಕೆ ಸಂಚಕಾರ ಉಂಟಾದ ಹಿನ್ನಲೆಯಲ್ಲಿ ಬೆಂಗಳೂರಿನ ಇಮೇಜ್ ಕೂಡಾ ಹಾಳಾಗಿದ್ದು, 22,000 ಕೋಟಿ ರು ನಿಂದ 25,000 ಕೋಟಿ ರು ನಷ್ಟವಾಗಿರುವ ಸಾಧತೆಯಿದೆ ಎಂದು ಕೈಗಾರಿಕಾ ಕೇಂದ್ರ ಸಮಿತಿ ಅಸ್ಸೋಚಾಮ್ ಮಂಗಳವಾರ ಹೇಳಿದೆ.[ಕಾವೇರಿ ಹೋರಾಟ, ಮಂಗಳವಾರ ಏನಾಯ್ತು?]
ಬೆಂಗಳೂರಿನಲ್ಲಿ ಫಾರ್ಚ್ಯೂನ್ 500 ಶ್ರೇಣಿಯ ಅನೇಕ ಕಂಪನಿಗಳಿದ್ದು, ಬಂದ್ ಹಾಗೂ ಗಲಭೆಯಿಂದಾಗಿ ಭಾರಿ ನಷ್ಟ ಅನುಭವಿಸಿವೆ ಎಂದು ಅಸ್ಸೋಚಾಮ್ ನ ಪ್ರಧಾನ ಕಾರ್ಯದರ್ಶಿ ಡಿಎಸ್ ರಾವತ್ ಹೇಳಿದರು.[ಬೆಂಗಳೂರಿನಲ್ಲಿ ಪರಿಸ್ಥಿತಿ ಹೇಗಿದೆ, ಪೊಲೀಸರ ಹೇಳಿಕೆ ಮಾತ್ರ ನಂಬಿ!]

ಇನ್ಫೋಸಿಸ್, ವಿಪ್ರೋ ಅಲ್ಲದೆ, ಫ್ಲಿಪ್ ಕಾರ್ಟ್, ಅಮೆಜಾನ್ ನಂಥ ಆನ್ ಲೈನ್ ಸರ್ವೀಸ್ ಸಂಸ್ಥೆಗಳಿಗೆ ಬೆಂಗಳೂರು ಮುಖ್ಯ ಕೇಂದ್ರವಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಮಾನ್ಯತಾ ಟೆಕ್ ಪಾರ್ಕ್, ಎಕೋ ಸ್ಪೇಸ್, ಬಾಗ್ ಮನೆ ಟೆಕ್ ಪಾರ್ಕ್, ಐಟಿಪಿಎಲ್ ಸೇರಿದಂತೆ ವಿವಿಧ ಟೆಕ್ ಪಾರ್ಕ್ ನಂಬಿಕೊಂಡು ಸಾಫ್ಟ್ ವೇರ್ ಅಲ್ಲದೆ ಕ್ಯಾಬ್, ಖಾಸಗಿ ವಾಹನ, ಹೋಟೆಲ್ ಉದ್ಯಮ ಕೂಡಾ ಕಾರ್ಯನಿರ್ವಹಿಸುತ್ತಿದೆ. [ಬಸ್ ಸುಟ್ಟಿದ್ದರಿಂದ ಕಾವೇರಿ ಸಮಸ್ಯೆ ಬಗೆಹರಿಯುತ್ತಾ?: ಕೆಪಿಎನ್]
ಸೆಪ್ಟೆಂಬರ್ 2 ರಿಂದ ಕೈಗಾರಿಕಾ ವಲಯ ಆತಂಕದಿಂದಲೇ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಬೆಂಗಳೂರು ಪೊಲೀಸರು ಹಾಗೂ ಸರ್ಕಾರದ ಸಮಯೋಚಿತ ನಿರ್ವಹಣೆಯಿಂದ ಸಮಸ್ಯೆ ತಿಳಿಗೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications