ಐಟಿ ಕ್ಷೇತ್ರದಲ್ಲಿ 2025ರ ಹೊತ್ತಿಗೆ 30 ಲಕ್ಷ ಉದ್ಯೋಗ ಸೃಷ್ಟಿ : ಆರ್ವಿಡಿ
ಬೆಂಗಳೂರು, ನವೆಂಬರ್ 29 : ಮುಂದಿನ ವರ್ಷದಿಂದ (2019ರಿಂದ) ವಾರ್ಷಿಕವಾಗಿ 'ಬೆಂಗಳೂರು ಸ್ಕಿಲ್' ಶೃಂಗಸಭೆಯನ್ನು ಅತ್ಯಂತ ದೊಡ್ಡ ಪ್ರಮಾಣದಲ್ಲಿ ನಡೆಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭಗೊಂಡ 'ಬೆಂಗಳೂರು ಟೆಕ್ ಸಮ್ಮಿಟ್'ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಬೆಂಗಳೂರು ಸ್ಕಿಲ್' ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ಉಪಕ್ರಮವನ್ನು ಆರಂಭಿಸಲು ಇದು ತಕ್ಕ ಸಮಯವಾಗಿದೆ" ಎಂದು ನುಡಿದರು.
"ಸದ್ಯಕ್ಕೆ ನಮ್ಮಲ್ಲಿ ಬೆಳವಣಿಗೆಯ ದರವೇನೋ ಕ್ಷಿಪ್ರ ಗತಿಯಲ್ಲಿದೆ. ಆದರೆ, ಉದ್ಯೋಗ ಸೃಷ್ಟಿಯು ಇದೇ ವೇಗದಲ್ಲ ನಡೆಯುತ್ತಿಲ್ಲ. ಹೀಗಾಗಿ, ಸರಕಾರ ಮತ್ತು ಉದ್ದಿಮೆಗಳು ಉದ್ಯೋಗಸೃಷ್ಟಿಗೆ ಒತ್ತು ನೀಡಲೇಬೇಕಾಗಿದೆ. ಉದ್ಯೋಗದೊಂದಿಗೆ ಬೆಳವಣಿಗೆ' ಎನ್ನುವುದು ನಮ್ಮ ಮೂಲಮಂತ್ರವಾಗಬೇಕಾಗಿದ್ದು, ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿಯು ನಿರ್ಣಾಯಕ ಪಾತ್ರ ವಹಿಸಲಿದೆ" ಎಂದು ದೇಶಪಾಂಡೆ ನುಡಿದರು.

ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 2025ರ ಹೊತ್ತಿಗೆ 30 ಲಕ್ಷ ಉದ್ಯೋಗಿಗಳಿರುವ ನಿರೀಕ್ಷೆ ಇದೆ. ಹಾಗೆಯೇ, ನವೋದ್ಯಮಗಳ ಸಂಖ್ಯೆಯು 25 ಸಾವಿರವನ್ನು ಮುಟ್ಟಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದೆ. ಇದರ ಜತೆಗೆ, ದೇಶದ ಐಟಿ ಉತ್ಪನ್ನ/ಸೇವೆಗಳ ಮೂಲಕ ಈಗ ಹರಿದು ಬರುತ್ತಿರುವ ಶೇ.17ರಷ್ಟು ಆದಾಯವನ್ನು ಶೇ.25ಕ್ಕೆ ಹೆಚ್ಚಿಸಬೇಕೆಂಬ ಆಶಯವಿದೆ ಎಂದು ಅವರು ವಿವರಿಸಿದರು.
ಸರಕಾರವು ಈಗಾಗಲೇ ಪ್ರತ್ಯೇಕ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನೇ ಸ್ಥಾಪಿಸಿದೆ. ಇದರ ಜತೆಗೆ ಸ್ಕಿಲ್ ಮಿಷನ್ ಮತ್ತು ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರಗಳು ಕೂಡ ಇವೆ. ಈ ಮೂಲಕ ಸರಕಾರವು ಉದ್ಯೋಗಸೃಷ್ಟಿಯೆಡೆಗೆ ತನಗಿರುವ ಬದ್ಧತೆಯನ್ನು ಪ್ರದರ್ಶಿಸಿದೆ. ಸಮಾಜದ ಅಂಚಿನಲ್ಲಿರುವವರಿಗೆ ಕೌಶಲ್ಯವನ್ನು ಒದಗಿಸುವ ಮೂಲಕ ಸಾಮಾಜಿಕ ಸೌಹಾರ್ದವನ್ನು ಕಾಪಾಡಬೇಕಾಗಿದೆ ಎಂದು ಅವರು ಹೇಳಿದರು.
ತಂತ್ರಜ್ಞಾನವನ್ನು ಜನರ ಉಪಯೋಗಕ್ಕೆ ಬಳಸಿಕೊಳ್ಳುವಲ್ಲಿ ಕರ್ನಾಟಕ ರಾಜ್ಯವು ಸದಾ ಮುಂಚೂಣಿಯಲ್ಲಿದೆ. ಮಾಹಿತಿ ತಂತ್ರಜ್ಞಾನವು ಇನ್ನೂ ಅಷ್ಟಾಗಿ ಬೆಳೆಯದಿದ್ದ 20 ವರ್ಷಗಳ ಹಿಂದೆಯೇ ನಾವು ಬೆಂಗಳೂರು ಐಟಿ' ಎನ್ನುವ ಶೃಂಗಸಭೆಯನ್ನು ಚಾಲ್ತಿಗೆ ತಂದೆವು. ಇದು ಜಾಗೃತಿ ಮೂಡಿಸಲು ಸಹಾಯವಾಯಿತಲ್ಲದೆ, ರಾಜ್ಯಕ್ಕೆ ಅಗಾಧ ಪ್ರಮಾಣದ ಬಂಡವಾಳವು ಹರಿದು ಬರಲೂ ನೆರವು ನೀಡಿತು ಎಂದು ಸಚಿವರು ನುಡಿದರು.
ನಂತರದ ದಿನಗಳಲ್ಲಿ ರಾಜ್ಯವು ಬೆಂಗಳೂರು ಬಯೋ' ಎನ್ನುವ ಹೆಸರಿನಲ್ಲಿ ಜೈವಿಕ ತಂತ್ರಜ್ಞಾನಕ್ಕೆ ಒತ್ತು ನೀಡಿತು. ಇದನ್ನು ನಂತರ ಇತರೆ ರಾಜ್ಯಗಳು ಅನುಕರಿಸಿದವು. ನ್ಯಾನೊ ತಂತ್ರಜ್ಞಾನದಲ್ಲಿ ಕೂಡ ರಾಜ್ಯವು ಬೆಂಗಳೂರು ನ್ಯಾನೊ' ಬ್ರ್ಯಾಂಡ್ ಅನ್ನು ಪರಿಚಿಯಿಸಿತು. ಹೀಗೆ, ಹಲವು ವಿಕ್ರಮಗಳು ರಾಜ್ಯದ ಬತ್ತಳಿಕೆಯಲ್ಲಿವೆ ಎಂದು ಕೌಶಲ್ಯಾಭಿವೃದ್ಧಿ ಸಚಿವರು ನೆನಪಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications