ವೈಯಕ್ತಿಕ ದುರ್ನಡತೆ ಆರೋಪ: ಫ್ಲಿಪ್ ಕಾರ್ಟ್ ಸಿಇಒ ಸ್ಥಾನ ತ್ಯಜಿಸಿದ ಬಿನ್ನಿ ಬನ್ಸಲ್
ಫ್ಲಿಪ್ ಕಾರ್ಟ್ ನ ಸಹ ಸಂಸ್ಥಾಪಕ ಹಾಗೂ ಸಮೂಹದ ಸಿಇಒ ಬಿನ್ನಿ ಬನ್ಸಲ್ ತಕ್ಷಣದಿಂದಲೇ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ. ವಾಲ್ ಮಾರ್ಟ್ ಕಂಪನಿಯು ಫ್ಲಿಪ್ ಕಾರ್ಟ್ ಮಾಲೀಕತ್ವದ ಬಹು ಪಾಲು ಖರೀದಿ ಮಾಡಿದ ಆರು ತಿಂಗಳ ಒಳಗೆ ಈ ಬೆಳವಣಿಗೆ ನಡೆದಿದೆ.
ಮತ್ತೊಬ್ಬ ಸಹ ಸಂಸ್ಥಾಪಕ ಸಚಿನ್ ಬನ್ಸಲ್ ಜೊತೆಗೂಡಿ ಬಿನ್ನಿ ಫ್ಲಿಪ್ ಕಾರ್ಟ್ ನಲ್ಲಿ ಇದ್ದರು. ಕಂಪನಿ ಮಾರಾಟದ ವೇಳೆಯಲ್ಲೇ ಸಚಿನ್ ಬನ್ಸಲ್ ಹೊರ ನಡೆದಿದ್ದರು. ಫ್ಲಿಪ್ ಕಾರ್ಟ್ ನ ಆಡಳಿತ ಮಂಡಳಿಯಲ್ಲಿ ಬಿನ್ನಿ ಮುಂದುವರಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತವಾಗಿಲ್ಲ.
ಬಿನ್ನಿ ಬನ್ಸಲ್ ವಿರುದ್ಧ ವೈಯಕ್ತಿಕ ದುರ್ನಡತೆ ಆರೋಪದ ಮೇಲೆ ಫ್ಲಿಪ್ ಕಾರ್ಟ್ ಹಾಗೂ ವಾಲ್ ಮಾರ್ಟ್ ನಿಂದ ಸ್ವತಂತ್ರ ತನಿಖೆಯೊಂದು ನಡೆದಿತ್ತು. ಆ ನಂತರ ತಮ್ಮ ಹುದ್ದೆ ತ್ಯಜಿಸುವ ನಿರ್ಧಾರಕ್ಕೆ ಅವರು ಬಂದಿದ್ದಾರೆ.

ತನಿಖೆಯು ಸಂಪೂರ್ಣವಾಗಿತ್ತು. ದೂರುದಾರರು ಆರೋಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ಆದರೆ ತೀರ್ಪು ಕೈಗೊಳ್ಳುವ ವೇಳೆಯಲ್ಲಿ ಇತರ ಲೋಪಗಳು ಕಂಡುಬಂದಿವೆ. ಮುಖ್ಯವಾಗಿ ಪಾರದರ್ಶಕತೆ ಹಾಗೂ ಆ ಸನ್ನಿವೇಶಕ್ಕೆ ಬಿನ್ನಿ ಪ್ರತಿಕ್ರಿಯೆ ನೀಡಿದ ರೀತಿ ಬಗ್ಗೆ ಲೋಪಗಳು ಕಂಡುಬಂದಿವೆ. ಆದ್ದರಿಂದ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದೇವೆ ಎಂದು ವಾಲ್ ಮಾರ್ಟ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
-
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications