ಬಾಷ್ ತ್ರೈಮಾಸಿಕ ಫಲಿತಾಂಶ: ಶೇ. 0.3ರಷ್ಟು ತೆರಿಗೆ ಪೂರ್ವ ನಷ್ಟ
ಬೆಂಗಳೂರು: ತಂತ್ರಜ್ಞಾನ ಮತ್ತು ಸೇವೆಗಳ ಮುಂಚೂಣಿಯ ಪೂರೈಕೆದಾರ ಸಂಸ್ಥೆಯಾದ ಬಾಷ್ ಲಿಮಿಟೆಡ್ 2020-21 ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 992 ಕೋಟಿ ರೂ.ಗಳ ಒಟ್ಟಾರೆ ಆದಾಯವನ್ನು ಕಾರ್ಯಾಚರಣೆಗಳಿಂದ ಗಳಿಸಿರುವುದಾಗಿ ಪ್ರಕಟಿಸಿದೆ. ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲಾ ವಿಭಾಗಗಳ ಮಾರಾಟದಲ್ಲಿನ ಆದಾಯ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ.64 ರಷ್ಟು ಇಳಿಕೆಯಾಗಿದೆ.
Recommended Video
ತೆರಿಗೆ ಪೂರ್ವ ನಷ್ಟವು 3 ಕೋಟಿ ರೂಪಾಯಿಗಳಾಗಿದೆ. ಇದು ಕಾರ್ಯಾಚರಣೆಯ ಶೇ.0.3 ರಷ್ಟು ಒಟ್ಟು ಆದಾಯವಾಗಿದೆ. ಈ ತ್ರೈಮಾಸಿಕದಲ್ಲಿ ಲಾಕ್ ಡೌನ್ ಇದ್ದಿದ್ದರಿಂದ ಈ ಪರಿಣಾಮಗಳು ಉಂಟಾಗಿವೆ.
ಭಾರತೀಯ ಆಟೋಮೋಟಿವ್ ಮಾರುಕಟ್ಟೆಯಲ್ಲಿ ರಚನಾತ್ಮಕ ಬದಲಾವಣೆ ಮುಂದುವರಿದಿದೆ. ಬಾಷ್ ಲಿಮಿಟೆಡ್ ಪುನರ್ ರಚನೆ, ಪುನರ್ ಕೌಶಲ್ಯ ಮತ್ತು ಇನ್ನಿತರೆ ರೂಪಾಂತರಿತ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಹೆಚ್ಚುವರಿಯಾಗಿ 197 ಕೋಟಿ ರೂಪಾಯಿಗಳ ಅವಕಾಶವನ್ನು 2020ರ ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕಕ್ಕೆ ಕಲ್ಪಿಸಿದೆ.

ಕಾರ್ಯಾಚರಣೆಗಳಿಂದ ಕಳೆದ ಸಾಲಿಗಿಂತ ಒಟ್ಟು ಆದಾಯದಲ್ಲಿ ಶೇ.29.9 ರಷ್ಟು ಕುಸಿತವಾಗಿದೆ. ಇನ್ನು ಒಟ್ಟು ಆದಾಯದ ತೆರಿಗೆಪೂರ್ವ ಲಾಭ(ಪಿಬಿಟಿ) 1,636 ಕೋಟಿ ರೂ.ಗಳಾಗಿದೆ. 2019-20 ನೇ ಸಾಲಿನಲ್ಲಿ ಒಟ್ಟು ಆದಾಯದ ಪಿಬಿಟಿ ಶೇ.16.6 ರಷ್ಟು ದಾಖಲಾಗಿದೆ.
ಅಸಾಧಾರಣವಾದ ಉತ್ಪನ್ನದಿಂದ ತೆರಿಗೆ ಪೂರ್ವ ನಷ್ಟ(ಪಿಬಿಟಿ) 200 ಕೋಟಿ ರೂಪಾಯಿ ಮತ್ತು ತೆರಿಗೆ ನಂತರದ ನಷ್ಟವು (ಪಿಎಟಿ) 120 ಕೋಟಿ ರೂಪಾಯಿಗಳಾಗಿದೆ. ಇನ್ನು ಅಸಾಧಾರಣ ಉತ್ಪನ್ನಗಳು ಕಾರ್ಯಾಚರಣೆಗಳ ಒಟ್ಟು ಆದಾಯ ಶೇ.2.7 ರಷ್ಟು ಪಿಎಟಿಯನ್ನು ದಾಖಲಿಸಿದೆ.
ಆಟೋಮೋಟಿವ್ ಉದ್ಯಮದಲ್ಲಿನ ಹಿನ್ನಡೆ ಮತ್ತು ಕೋವಿಡ್-19 ಹಿನ್ನೆಲೆಯಲ್ಲಿ ಬಾಷ್ ಲಿಮಿಟೆಡ್ ನ ಮಾರಾಟಗಳ ಮೇಲೆ ಪರಿಣಾಮ ಉಂಟಾಗಿದೆ. ಇದರಿಂದಾಗಿ 2020-21 ನೇ ಸಾಲಿನ ಮೊದಲ ತ್ರೈಮಾಸಿಕದ ಮಾರಾಟದಲ್ಲಿ ಶೇ.68.2 ರಷ್ಟು ಕುಸಿತ ಕಂಡುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications