ಇ ಮೊಬಿಲಿಟಿಯತ್ತ ಬಾಷ್ ಆದಾಯ, ನಿವ್ವಳ ಲಾಭ ಕುಸಿತ
ಬೆಂಗಳೂರು, ಮೇ 22: ತಂತ್ರಜ್ಞಾನ ಮತ್ತು ಸೇವೆಗಳ ಮುಂಚೂಣಿಯ ಪೂರೈಕೆದಾರ ಸಂಸ್ಥೆಯಾದ ಬಾಷ್ ಲಿಮಿಟೆಡ್ 2019-20ರ ಆರ್ಥಿಕ ವರ್ಷದಲ್ಲಿ 9,842 ಕೋಟಿ ರೂ.ಗಳ(1.25 ಬಿಲಿಯನ್ ಯೂರೋ) ಒಟ್ಟಾರೆ ಆದಾಯವನ್ನು ಕಾರ್ಯಾಚರಣೆಗಳಿಂದ ಗಳಿಸಿರುವುದಾಗಿ ಪ್ರಕಟಿಸಿದೆ. ಈ ಆದಾಯ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ.18.6 ರಷ್ಟು ಇಳಿಕೆಯಾಗಿದೆ.
ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭ ಶೇ 80ರಷ್ಟು ಕುಸಿತಗೊಂಡಿದ್ದು, 81.14 ಕೋಟಿ ರು ಬಂದಿದೆ. 2020 ರ ಮಾರ್ಚ್ 31 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಾರ್ಯಾಚರಣೆಯ ಒಟ್ಟು ಆದಾಯದಲ್ಲಿ ಶೇ.18.1 ರಷ್ಟು ಕಡಿಮೆಯಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ ಕಡಿಮೆಯಾಗಿದೆ.
ಕಾರ್ಯಾಚರಣೆಗಳಿಂದ ಕಳೆದ ಸಾಲಿಗಿಂತ ಒಟ್ಟು ಆದಾಯದಲ್ಲಿ ಶೇ.29.9 ರಷ್ಟು ಕುಸಿತವಾಗಿದೆ. ಇನ್ನು ಒಟ್ಟು ಆದಾಯದ ತೆರಿಗೆಪೂರ್ವ ಲಾಭ(ಪಿಬಿಟಿ) 1636 ಕೋಟಿ ರೂ.ಗಳಾಗಿದೆ. 2019-20 ನೇ ಸಾಲಿನಲ್ಲಿ ಒಟ್ಟು ಆದಾಯದ ಪಿಬಿಟಿ ಶೇ.16.6 ರಷ್ಟು ದಾಖಲಾಗಿದೆ.

ಈ ಬಗ್ಗೆ ಮಾತನಾಡಿದ ಬಾಷ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಬಾಷ್ ಗ್ರೂಪ್ ಇನ್ ಇಂಡಿಯಾದ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ''ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಬಾಷ್ ಲಿಮಿಟೆಡ್ ದೇಶದಲ್ಲಿ ಕ್ರಮೇಣವಾಗಿ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ನಾವು ಸಹವರ್ತಿಗಳ ಸುರಕ್ಷತೆಗೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಸುಸ್ಥಿರ ಮತ್ತು ಸ್ಥಿರವಾದ ಪೂರೈಕೆಯನ್ನು ನೀಡುವ ಮೂಲಕ ನಮ್ಮ ಗ್ರಾಹಕರಿಗೆ ಎಂದಿನಂತೆ ಸೇವೆಗಳನ್ನು ಒದಗಿಸಲು ಎಲ್ಲಾ ಅಗತ್ಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ'' ಎಂದರು.
2019-20 ನೇ ಸಾಲಿನಲ್ಲಿ ಪಿಎಟಿ 650 ಕೋಟಿ ರೂಪಾಯಿಗಳಾಗಿದೆ. ನಮ್ಮ ಬಿಡದಿ ಘಟಕ ಮತ್ತು ಆಡುಗೋಡಿ ಕ್ಯಾಂಪಸ್ನ ವಿಸ್ತರಣೆಗೆಂದು 399 ಕೋಟಿ ರೂಪಾಯಿಗಳನ್ನು ವಿನಿಯೋಗ ಮಾಡಲಾಗಿದೆ.
2019-20 ನೇ ಹಣಕಾಸು ಸಾಲಿನಲ್ಲಿ ಬಾಷ್ ಲಿಮಿಟೆಡ್ ಹಲವಾರು ಪುನರ್ ರಚನೆ, ಪುನರ್ಕೌಶಲ್ಯ ಮತ್ತು ಪುನರ್ ನಿಯೋಜನೆ ಉಪಕ್ರಮಗಳಿಗಾಗಿ 717 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣವನ್ನು ಕಂಪನಿಯ ರೂಪಾಂತರ ಯೋಜನೆಗಳು ಮತ್ತು ಎಲೆಕ್ಟ್ರೋ ಮೊಬಿಲಿಟಿ ಮತ್ತು ಇತರೆ ಸಾರಿಗೆ ಸಂಬಂಧಿತ ಯೋಜನೆಗಳಿಗೆ ಬಳಕೆ ಮಾಡಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications