Q4:ಬಾಷ್ ತೆರಿಗೆ ನಂತರದ ಲಾಭ 482 ಕೋಟಿ ರು ಗಳಿಕೆ
ಬೆಂಗಳೂರು, ಮೇ 20:ಜಾಗತಿಕ ತಂತ್ರಜ್ಞಾನ ಮತ್ತು ಸೇವೆಗಳ ಪೂರೈಕೆದಾರ ಸಂಸ್ಥೆ ಬಾಷ್ ಲಿಮಿಟೆಡ್ 2020-21 ನೇ ಹಣಕಾಸು ಸಾಲಿನಲ್ಲಿ ಕಾರ್ಯಾಚರಣೆಗಳ ಮೂಲಕ ಒಟ್ಟು 9,718 ಕೋಟಿ ರೂಪಾಯಿಗಳ (1.12 ಬಿಲಿಯನ್ ಯೂರೋಗಳು) ಆದಾಯವನ್ನು ಗಳಿಸಿದೆ. ಆದಾಗ್ಯೂ, ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 1.3% ರಷ್ಟು ಕಡಿಮೆ ದಾಖಲಾಗಿದೆ. ಹೊರತಾದ ಉತ್ಪನ್ನಗಳ ತೆರಿಗೆ ಪೂರ್ವ ಲಾಭ(ಪಿಬಿಟಿ) 19.9% ರಷ್ಟು ಕುಸಿದಿದ್ದು, 1,311 ಕೋಟಿ ರೂಪಾಯಿಗಳನ್ನು ಗಳಿಸಿದೆ. 2020-21 ನೇ ಹಣಕಾಸು ಸಾಲಿನಲ್ಲಿ ಕಾರ್ಯಾಚರಣೆಗಳಿಂದ ಹೊರತಾದ ಉತ್ಪನ್ನಗಳ ಮುನ್ನ ಆದಾಯ ಪಿಬಿಟಿ 13.5% ಕ್ಕೆ ತಲುಪಿದೆ.
2020-21 ನೇ ಹಣಕಾಸು ಸಾಲಿನಲ್ಲಿ ಬಾಷ್ ಲಿಮಿಟೆಡ್ ವಿವಿಧ ಪುನರ್ ರಚನೆ, ಪುನರ್ ಕೌಶಲ್ಯ ಮತ್ತು ಪುನರ್ ನಿಯೋಜನೆ ಉಪಕ್ರಮಗಳಿಗಾಗಿ 743 ಕೋಟಿ ರೂಪಾಯಿಗಳ ಅವಕಾಶವನ್ನು ಕಲ್ಪಿಸಿಕೊಂಡಿತ್ತು. ಹೊರತಾದ ಉತ್ಪನ್ನಗಳ ನಂತರದ ಪಿಬಿಟಿ 567 ಕೋಟಿ ರೂಪಾಯಿಗಳಾಗಿತ್ತು ಅಥವಾ ಕಾರ್ಯಾಚರಣೆಗಳ 5.8% ಒಟ್ಟು ಆದಾಯವಾಗಿತ್ತು. ತೆರಿಗೆ ನಂತರದ ಲಾಭವು(ಪಿಎಟಿ) 482 ಕೋಟಿ ರೂಪಾಯಿಗಳಾಗಿದೆ.ಪಿಎಟಿ ಕಾರ್ಯಾಚರಣೆಗಳಿಂದ ಒಟ್ಟು ಆದಾಯದ 10.7% ರಷ್ಟು ದಾಖಲಾಗಿದೆ. 2020-21 ನೇ ಹಣಕಾಸು ಸಾಲಿನಲ್ಲಿ ಆಡುಗೋಡಿ ಕ್ಯಾಂಪಸ್ ಅನ್ನು ಸ್ಮಾರ್ಟ್ ಕ್ಯಾಂಪಸ್ ಅನ್ನಾಗಿ ಪರಿವರ್ತನೆ ಮಾಡುವಂತಹ ಪ್ರಮುಖ ಕಾರ್ಯಗಳಿಗಾಗಿ 246 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗಿದೆ.
ಈ ಹಣಕಾಸು ಸಾಲಿನ ಫಲಿತಾಂಶದ ಬಗ್ಗೆ ಮಾತನಾಡಿದ ಬಾಷ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಬಾಷ್ ಇಂಡಿಯಾದ ಅಧ್ಯಕ್ಷ ಸೌಮಿತ್ರ ಭಟ್ಟಚಾರ್ಯ, ''2020 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೂನ್ಯ ಮಾರಾಟದ ಸನಿಹ ಇದ್ದಾಗ್ಯೂ ಕೃಷಿ ಕ್ಷೇತ್ರ ಅದರಲ್ಲೂ ಪ್ರಮುಖವಾಗಿ ಟ್ರಾಕ್ಟರ್ ವ್ಯವಹಾರದಲ್ಲಿ ಬೇಡಿಕೆ ಹೆಚ್ಚಾಗಿ ಕಂಡುಬಂದಿತ್ತು. 2020-21 ನೇ ಹಣಕಾಸು ಸಾಲಿನ ಎರಡನೇ ತ್ರೈಮಾಸಿಕದಿಂದ ಉದ್ಯಮವು ಚೇತರಿಕೆ ಕಾಣಲಾರಂಭಿಸಿತು. ಆದಾಗ್ಯೂ, ಮಾರುಕಟ್ಟೆಯಲ್ಲಿ ಅನಿಶ್ಚಿತತೆಯಿದ್ದ ಪರಿಣಾಮ ಮುಂದುವರಿದಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೂರೈಕೆ ಜಾಲದಲ್ಲಿ ಏರಿಳಿತಗಳು ಮತ್ತು ಅನಿಶ್ಚಿತತೆಗಳು ಮುಂದುವರಿದ ಪರಿಣಾಮವು ಆಟೋ ಕ್ಷೇತ್ರದ ಮೇಲೆ ಬೀರಿತು. ಇದಲ್ಲದೇ, ಪವರ್ ಟೂಲ್ಸ್ ವಿಭಾಗ ವಿಶೇಷವಾಗಿ ನಿರ್ಮಾಣ ಮತ್ತು ಇ-ಕಾಮರ್ಸ್ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಕಂಡಿದ್ದೇವೆ'' ಎಂದು ತಿಳಿಸಿದರು.

ಮಾರ್ಚ್ 31, 2021 ಕ್ಕೆ ಕೊನೆಗೊಂಡ 4 ನೇ ತ್ರೈಮಾಸಿಕದಲ್ಲಿ ಬಾಷ್ ಲಿಮಿಟೆಡ್ ಕಾರ್ಯಾಚರಣೆಗಳಿಂದ ಒಟ್ಟು 3,218 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದ್ದು, ಇದು ಹಿಂದಿನ ವರ್ಷದ 4 ನೇ ತ್ರೈಮಾಸಿಕಕ್ಕೆ ಹೋಲಿಸಿದರೆ 43.8 % ರಷ್ಟು ಹೆಚ್ಚಾಗಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ ಪಿಬಿಟಿ 640 ಕೋಟಿ ರೂಪಾಯಿಗಳಾಗಿದ್ದು, ಹಿಂದಿನ ವರ್ಷದ ಇದೇ ಅವಧಿಗಿಂತ 77.2 % ಹೆಚ್ಚಾಗಿದೆ.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications