ಭಾರತ್ ಪೆಟ್ರೋಲಿಯಂ ಖಾಸಗೀಕರಣಕ್ಕೆ ಮುಂದಾದ ಸರ್ಕಾರ, ಖರೀದಿಗೆ ಕಾದಿದೆ ರಿಲಯನ್ಸ್
ನವದೆಹಲಿ, ಅಕ್ಟೋಬರ್ 07: ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(BPCL) ಮಾರಾಟಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತ್ ಪೆಟ್ರೋಲಿಯಂ ಸಂಸ್ಥೆ ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಪೂರಕ ಪ್ರಕ್ರಿಯೆಗಳು ಆರಂಭವಾಗಿವೆ. ರಾಷ್ಟೀಕೃತ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಜಾರಿಗೊಳಿಸಲು ಕಾಯಿದೆಗೆ ತಿದ್ದುಪಡಿ ತರುವುದು ಅಗತ್ಯ.
ಬಿಪಿಸಿಎಲ್ ರಾಷ್ಟ್ರೀಕೃತಗೊಳಿಸುವ ಕಾಯ್ದೆ 1976 ಹಾಗೂ ತಿದ್ದುಪಡಿ ಕಾಯ್ದೆ 2016ಗೆ ಬೇಕಾದ ಮರು ತಿದ್ದುಪಡಿಯನ್ನು ಮಾಡಲಾಗಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಸಿಗಬೇಕಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ನಲ್ಲಿ ಸರ್ಕಾರ ಶೇ.53.3 ಪಾಲು ಹೊಂದಿದೆ. ಈ ಷೇರುಗಳ ಮಾರಾಟದಿಂದ 60-70 ಸಾವಿರ ಕೋಟಿ ರೂಪಾಯಿ ಆದಾಯ ಬರಬಹುದೆಂಬ ನಿರೀಕ್ಷೆ ಹೊಂದಲಾಗಿದೆ. ಬಿಪಿಸಿಎಲ್ ಮಾರುಕಟ್ಟೆ ಮೌಲ್ಯ ಅಕ್ಟೋಬರ್ 04, 2019ಕ್ಕೆ 1.11 ಲಕ್ಷ ಕೋಟಿ ರು ನಷ್ಟಿದೆ.
2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರವು ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ದರು. ಈ ಪ್ರಕ್ರಿಯೆ ಬಗ್ಗೆ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸರ್ಕಾರಿ ಸ್ವಾಮ್ಯ ಬಿಪಿಸಿಎಲ್ ಹಾಗೂ ಎಚ್ ಪಿಸಿಎಲ್ ಖಾಸಗೀಕರಣಕ್ಕೆ ಸಂಸತ್ತಿನ ಅನುಮೋದನೆ ಅಗತ್ಯ ಎಂದು ಹೇಳಿತ್ತು.

ಬಿಪಿಸಿಎಲ್ ಷೇರುಗಳನ್ನು ಖರೀದಿಸಲು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ಸುಕವಾಗಿದೆ ಎನ್ನಲಾಗಿದೆ. ಇದಲ್ಲದೆ ಯುಕೆಯ ಬಿಪಿ, ಕುವೈಟ್ ಪೆಟ್ರೋಲಿಯಂ, ಮಲೇಷಿಯಾದ ಪೆಟ್ರೋನಾಸ್, ಸೌದಿ ಅರಾಮ್ಕೋ ಹಾಗೂ ಶೆಲ್ ಮತ್ತು ಎಸ್ಸಾರ್ ಆಯಿಲ್ ಕೂಡಾ ರೇಸಿನಲ್ಲಿವೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿದರೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.
ಮುಂಬೈನಲ್ಲಿ ನಾಲ್ಕು ತೈಲ ಘಟಕ, ಕೇರಳದ ಕೊಚ್ಚಿ, ಮಧ್ಯಪ್ರದೇಶದ ಬಿನಾ, ಅಸ್ಸಾಂನ ನುಮಾಲಿಗರ್ ನಲ್ಲಿ ತೈಲ ಘಟಕಗಳನ್ನು ಬಿಪಿಸಿಎಲ್ ಹೊಂದಿದ್ದು, ಒಟ್ಟಾರೆ, 38.3 ಮಿಲಿಯನ್ ಟನ್ ಕಚ್ಚಾತೈಲವನ್ನು ಇಂಧನವಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿವೆ. ಇದರ ಜೊತೆಗೆ 15,078ಪೆಟ್ರೋಲ್ ಪಂಪ್ ಹಾಗೂ 6,004 ಎಲ್ ಪಿಜಿ ವಿತರಣೆಯನ್ನು ಬಿಪಿಸಿಎಲ್ ಹೊಂದಿದೆ. ಭಾರತ 294.4 ಮಿಲಿಯನ್ ಟನ್ ತೈಲ ಸಂಸ್ಕರಣಾ ಸಾಮರ್ಥ್ಯ, 65 554 ಪೆಟ್ರೋಲ್ ಪಂಪ್ ಹಾಗೂ 24 026 ಎಲ್ ಪಿ ಜಿ ವಿತರಣೆಯನ್ನು ಹೊಂದಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications