ಬ್ರಿಗೇಡ್ ಗ್ರೂಪ್ 28ರ ಸಂಭ್ರಮಕ್ಕೆ ಪುಸ್ತಕದ ಮೆರುಗು
ಬೆಂಗಳೂರು, ಅ.16: ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ಬ್ರಿಗೇಡ್ ಗ್ರೂಪ್ಗೆ ಈಗ 28ರ ಸಂಭ್ರಮ. ಕಳೆದ 28 ವರ್ಷಗಳಲ್ಲಿ ಸಂಸ್ಥೆ ನಡೆದು ಬಂದ ಹಾದಿ, ಈ ಅವಧಿಯಲ್ಲಿ ಸಾಧಿಸಿದ ಸಾಧನೆಗಳ ಕುರಿತಾದ ಸ್ಮರಣಿಕೆ 'ದಿ ಮೆನಿ ವರ್ಲ್ಡ್ಸ್ ಆಫ್ ಬ್ರಿಗೇಡ್' ಕಾಫಿ ಟೇಬಲ್ ಬುಕ್ ಬಿಡುಗಡೆ ಮಾಡಿದೆ.
216 ಪುಟಗಳ ಈ ಸ್ಮರಣಿಕೆಯನ್ನು ದೇಶದ ಖ್ಯಾತ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಪದ್ಮ ವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೆನಿ ವರ್ಲ್ಡ್ಸ್ ಆಫ್ ಬ್ರಿಗೇಡ್ ಗ್ರೂಪ್ ಎಂಬ ಹೆಸರನ್ನು ಸ್ಮರಣಿಕೆಗೆ ನೀಡಿರುವುದು ಸೂಕ್ತವೆನಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ದಿ ಕಾಫಿ ಟೇಬಲ್ ಬುಕ್ ಬ್ರಿಗೇಡ್ ಗ್ರೂಪ್ನ ಸಾಧನೆಯ ಹೆಜ್ಜೆಯನ್ನು ಮತ್ತು ದಾಖಲೆಗಳನ್ನು ಛಾಯಾಚಿತ್ರಗಳ ಸಹಿತ ಮಾಹಿತಿ ನೀಡುವ ಕಣಜವಾಗಿದೆ. ಬೆಂಗಳೂರಿನಲ್ಲಿ ನಗರೀಕರಣ ನಿರೀಕ್ಷೆಗೂ ಮೀರಿ ಬೆಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ಕಟ್ಟಡಗಳ ನಿರ್ಮಾಣದಂತಹ ಸವಾಲು ಬೆಳೆಯುತ್ತಿದೆ. ಈ ಸವಾಲನ್ನು ಎದುರಿಸುವ ವಿಚಾರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ.
ಇಂತಹ ರಿಯಲ್ ಎಸ್ಟೇಟ್ ಉದ್ಯಮಗಳಲ್ಲಿ ಬ್ರಿಗೇಡ್ ಗ್ರೂಪ್ ಅತ್ಯುತ್ತಮ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಬೆಂಗಳೂರು ನಗರದಲ್ಲಿ ನಾಗರಿಕ ಮೂಲಭೂತ ಸೌಲಭ್ಯ ಅಭಿವೃದ್ಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ಕಸ್ತೂರಿರಂಗನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಬ್ರಿಗೇಡ್ ನಿರ್ಮಿಸಿರುವ ಅಪಾರ್ಟ್ಮೆಂಟ್ಗಳು, ಮಾಲ್ಗಳು, ಕಚೇರಿಗಳು, ಕ್ಲಬ್, ಸೇವಾ ವಸತಿ ಸಂಕಿರಣಗಳು, ಶಾಲೆಗಳು, ಸಮುದಾಯ ಕೇಂದ್ರಗಳು, ಹೊಟೇಲ್ಗಳು ಸಂಸ್ಥೆಯ ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿವೆ ಎಂದು ತಿಳಿಸಿದ ಕಸ್ತೂರಿ ರಂಗನ್ ಅವರು, ಇದು ಕೇವಲ ಅತ್ಯುತ್ತಮ ಗುಣಮಟ್ಟದಿಂದ ಕೂಡಿದ, ಅತ್ಯುತ್ತಮ ವಾತಾವರಣದಲ್ಲಿ ನಿರ್ಮಾಣವಾ ಕಟ್ಟಡಗಳಲ್ಲ. ಇವುಗಳ ಜತೆಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದರು.
ಭಾರತದ ಅತ್ಯುತ್ತಮ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾದ ಬ್ರಿಗೇಡ್ ಗ್ರೂಪ್ ಕಳೆದ 28 ವರ್ಷಗಳಲ್ಲಿ ದಕ್ಷಿಣ ಭಾರತದ ನಗರಗಳಲ್ಲಿ ವಸತಿ, ಕಚೇರಿ, ರಿಟೇಲ್, ಹೊಟೇಲ್, ಶಿಕ್ಷಣ ಸಂಸ್ಥೆಗಳ ಕಟ್ಟಡಗಳು ಸೇರಿದಂತೆ ಹತ್ತು ಹಲವಾರು ಬಗೆಯ ಕಟ್ಟಡಗಳನ್ನು ನಿರ್ಮಿಸುತ್ತಾ ಬಂದಿದೆ. ಇದುವರೆಗೆ 100ಕ್ಕೂ ಹೆಚ್ಚು ಕಟ್ಟಡಗಳನ್ನು 20 ದಶಲಕ್ಷ ಚದರಡಿಯಲ್ಲಿ ನಿರ್ಮಾಣ ಮಾಡಿದ್ದು, ಮುಂದಿನ 5 ವರ್ಷದಲ್ಲಿ 30 ದಶಲಕ್ಷ ಚದರಡಿಯಲ್ಲಿ ನಿರ್ಮಾಣ ಮಾಡುವ ಗುರಿ ಹೊಂದಿದೆ. (ಒನ್ಇಂಡಿಯಾ ಬಿಜಿನೆಸ್ ಡೆಸ್ಕ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications