ಬಿಎಸ್ಎನ್ಎಲ್ ದಿವಾಳಿ?: ಲಕ್ಷಾಂತರ ಉದ್ಯೋಗಿಗಳಿಗೆ ಸಂಬಳ ಸಿಕ್ಕಿಲ್ಲ
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ 'ಭಾರತ್ ಸಂಚಾರ ನಿಗಮ ಲಿಮಿಟೆಡ್' (ಬಿಎಸ್ಎನ್ಎಲ್) ನ ಆರ್ಥಿಕ ಪರಿಸ್ಥಿತಿ ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಹದಗೆಡುತ್ತಿದೆ. ಫೆಬ್ರವರಿ ತಿಂಗಳಿನಲ್ಲಿ 1.76 ಲಕ್ಷ ಉದ್ಯೋಗಿಗಳಿಗೆ ಸಂಬಳ ನೀಡಲು ಸಂಸ್ಥೆ ಬಳಿ ಹಣವಿಲ್ಲ ಎಂದು ತಿಳಿದು ಬಂದಿದ್ದು, ಈ ಕುರಿತಂತೆ ಫೈನಾನ್ಶಿಯಲ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಇದೇ ಮೊದಲ ಬಾರಿಗೆ ಬಿಎಸ್ಎನ್ಎಲ್ ಸಂಸ್ಥೆ ಇಂಥ ದುಃಸ್ಥಿತಿಗೆ ಬಂದಿದೆ. ಕಳೆದ ಐದು ವರ್ಷಗಳಿಂದ ನಷ್ಟದಲ್ಲಿರುವ ಟೆಲಿಕಾಂ ಸಂಸ್ಥೆಯ ಸಮಸ್ಯೆ ಬಗ್ಗೆ ಉದ್ಯೋಗಿಗಳ ಒಕ್ಕೂಟ(ಎಯುಎಬಿ)ವು ದೂರಸಂರ್ಪಕ ಸಚಿವ ಮನೋಜ್ ಸಿನ್ಹಾ ಅವರಿಗೆ ಈ ಬಗ್ಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ.
ಬಿಎಸ್ಎನ್ಎಲ್ನ ಒಟ್ಟು ಆದಾಯದ ಶೇ 55ರಷ್ಟು ಸಿಬ್ಬಂದಿ ವೇತನ ಪಾವತಿಗೆ ವಿನಿಯೋಗವಾಗುತ್ತಿದೆ. ವಾರ್ಷಿಕವಾಗಿ ಸಂಸ್ಥೆಯ ವೇತನಶುಲ್ಕ ಶೇ 8ರಷ್ಟು ಹೆಚ್ಚಳವಾಗುತ್ತಿದೆ. ಆದರೆ, ಆದಾಯ ಮಾತ್ರ ನಿಧಾನಗತಿಯಲ್ಲಿ ಸಾಗುತ್ತಿದೆ.

ಟೆಲಿಕಾಂ ಮಾರುಕಟ್ಟೆಯ ದರ ಸಮರದಲ್ಲಿ ಸಂಪೂರ್ಣವಾಗಿ ಹಿನ್ನಡೆ ಅನುಭವಿಸಿರುವ ಬಿಎಸ್ಎನ್ಎಲ್ಆದಾಯವಿಲ್ಲದೇ ದಿವಾಳಿತನ ಹಾದಿ ಹಿಡಿದಿದೆ ಎಂದು ಬಿಎಸ್ಎನ್ಎಲ್ ಉದ್ಯೋಗಿಗಳ ಒಕ್ಕೂಟ ಹೇಳಿದೆ.
ದೆಹಲಿ, ಕೇರಳ, ಜಮ್ಮು ಮತ್ತು ಕಾಶ್ಮೀರ, ಒಡಿಶಾ ಕಚೇರಿಯ ಸಿಬ್ಬಂದಿಗೆ ಫೆಬ್ರವರಿ ತಿಂಗಳ ವೇತನ ಪಾವತಿಸಲು ಆರಂಭಿಸಲಾಗಿದೆ. ಸರ್ಕಾರದ ಯಾವುದೇ ರೀತಿಯ ಹಣಕಾಸಿನ ಬೆಂಬಲ ನೀಡದ ಕಾರಣ ವೇತನ ಪಾವತಿ ವಿಳಂಬವಾಗುತ್ತಿದೆ ಎಂದು ಬಿಎಸ್ಎನ್ಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಸ್ಎನ್ಎಲ್ ನಷ್ಟದ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆ ಆಗುತ್ತಿದೆ. ವರದಿ ಪ್ರಕಾರ, 2018ರಲ್ಲಿ ಸುಮಾರು 8 ಸಾವಿರ ಕೋಟಿ ರು ನಷ್ಟು ನಷ್ಟ ಎದುರಿಸಿದೆ. 2017ರ ಆರ್ಥಿಕ ವರ್ಷದಲ್ಲಿ 4,786 ಕೋಟಿ ರು, 2019ರಲ್ಲಿ 8 ಸಾವಿರ ಕೋಟಿ ರುಗೂ ಅಧಿಕ ನಷ್ಟ ನಿರೀಕ್ಷಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications