ಇನ್ಮುಂದೆ ದೇಶದೆಲ್ಲೆಡೆ ಬಿಎಸ್ಎನ್ಎಲ್ ವೈಫೈ ಜಾಲ
ಆಗ್ರಾ, ಜೂ.17: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಂಬರುವ ದಿನಗಳಲ್ಲಿ ದೇಶದೆಲ್ಲೆಡೆ 40 ಸಾವಿರಕ್ಕೂ ಅಧಿಕ ವೈಫೈ ಹಾಟ್ಸ್ಪಾಟ್ಗಳನ್ನು ಸ್ಥಾಪಿಸುವ ಯೋಜನೆ ಹಾಕಿಕೊಂಡಿದೆ. ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾದ ಈ ಜಾಲ ಸ್ಥಾಪನೆಗೆ ಸುಮಾರು 6,000 ಕೋಟಿ ರೂ. ಬಂಡವಾಳ ಹೂಡಲಾಗುತ್ತದೆ.
ವಿಶ್ವಪ್ರಸಿದ್ಧ ತಾಜ್ ಮಹಲ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಉಚಿತ ವೈಫೈ ಸೇವೆ ಉದ್ಘಾಟಿಸಿದ ನಂತರ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಈ ವಿಷಯ ತಿಳಿಸಿದರು.
ಡಿಜಿಟಲ್ ಇಂಡಿಯಾ ಭಾಗವಾಗಿ ದೇಶಾದ್ಯಂತ ವೈಫೈ ಜಾಲ ನಿರ್ಮಿಸುವ ಸಲುವಾಗಿ ವೈಫೈ ಹಾಟ್ ಸ್ಪಾಟ್ ಸ್ಥಾಪಿಸಲು ಸಿದ್ಧತೆ ನಡೆದಿದೆ. ಜುಲೈನಲ್ಲಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, 2018ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಕೆಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಈ ವರ್ಷಾಂತ್ಯದ ವೇಳೆಗೆ 250 ಸ್ಥಳಗಳಲ್ಲಿ 2500 ವೈಫೈ ಹಾಟ್ಸ್ಪಾಟ್ ಸ್ಥಾಪಿಸಲು ಉದ್ದೇಶಿಸಲಾಗಿದೆ.ಈಗಾಗಲೇ ದೇಶಾದ್ಯಂತ 200 ವೈಫೈ ಹಾಟ್ಸ್ಪಾಟ್ಗಳನ್ನು ಸ್ಥಾಪಿಸಲಾಗಿದೆ ಎಂದರು. ಬಿಎಸ್ಎನ್ಎಲ್ ಮೊದಲ 30 ನಿಮಿಷದವರೆಗೆ ವೈಫೈ ಸೌಲಭ್ಯವನ್ನು ಉಚಿತವಾಗಿ ನೀಡಲಿದ್ದು, ನಂತರ ಪಾವತಿ ಮಾಡಿ ವೈಫೈ ಸೌಲಭ್ಯ ಪಡೆಯಬಹುದು ಎಂದು ಬಿಎಸ್ಎನ್ಎಲ್ ಸಿಎಂಡಿ ಅನುಪಮ್ ಶ್ರೀವಾಸ್ತವ ತಿಳಿಸಿದರು.
20 ರು, 30 ರು, 50 ರು ಹಾಗೂ 70 ರು ನಂತೆ ರೀಚಾರ್ಜ್ ಮಾಡಿಸಿ 30 ನಿಮಿಷ, 60,120 ಅಥವಾ ಪೂರ್ತಿ ದಿನಕ್ಕೆ ವೈ ಫೈ ಸೌಲಭ್ಯ ಪಡೆದುಕೊಳ್ಳಬಹುದು. ಪ್ರವಾಸಿ ತಾಣಗಳಾದ ಖಜುರಾಹೋ, ಜಗನ್ನಾಥ್ ದೇಗುಲ ಸೇರಿದಂತೆ ಅನೇಕ ಕಡೆಗಳಲ್ಲಿ ನೆಟ್ವರ್ಕ್ ಸುಧಾರಣೆ ಕಾರ್ಯ ಜಾರಿಯಲ್ಲಿದೆ ಎಂದು ಅನುಪಮ್ ಹೇಳಿದರು. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications