ಲೋಕಸಭೆ ಚುನಾವಣೆ ಬಳಿಕ 54 ಸಾವಿರ ಉದ್ಯೋಗಿಗಳಿಗೆ ಕೊಕ್
ನವದೆಹಲಿ, ಏಪ್ರಿಲ್ 03: ಲೋಕಸಭೆ ಚುನಾವಣೆ ದೆಸೆಯಿಂದ ಸದ್ಯ ಐಸಿಯುವಿನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್ಎನ್ಎಲ್) ಸಿಬ್ಬಂದಿಗಳ ಹುದ್ದೆಗಳು ನಂತರ ಒಮ್ಮೆಗೆ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ.
ಸುಮಾರು 54 ಸಾವಿರ ಉದ್ಯೋಗ ಕಡಿತಗೊಳಿಸುವಂತೆ ಬಿಎಸ್ಎನ್ಎಲ್ ಬೋರ್ಡ್ ನಿಂದ ದೂರ ಸಂಪರ್ಕ ಇಲಾಖೆ(ಡಿಒಟಿ)ಗೆ ವರದಿ ಸಲ್ಲಿಸಲಾಗಿದೆ. ಬೋರ್ಡ್ ಸದಸ್ಯರ ಪೈಕಿ 10ರಲ್ಲಿ 3 ಮಂದಿ ಇದಕ್ಕೆ ಸಮ್ಮತಿಸಿದ್ದಾರೆ. ಚುನಾವಣೆ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಉದ್ಯೋಗ ಕಡಿತ ಹೇಗೆ?: ಅನೇಕ ಮಂದಿಗೆ ವಿಆರ್ ಎಸ್ ಪ್ಯಾಕೇಜ್ ಘೋಷಿಸಲಾಗುತ್ತದೆ. ಇನ್ನು ಅನೇಕರಿಗೆ ನೇರವಾಗಿ ಮನೆಗೆ ಕಳಿಸಲಾಗುತ್ತದೆ. ಇದಲ್ಲದೆ, ನಿವೃತ್ತಿ ವಯೋಮಿತಿಯನ್ನು 60 ವರ್ಷಗಳಿಂದ 58 ವರ್ಷಕ್ಕೆ ಇಳಿಸಲು ಕೂಡಾ ಶಿಫಾರಸು ಮಾಡಲಾಗಿದೆ. 50 ವರ್ಷ ಮೇಲ್ಪಟ್ಟವರಿಗೆ ವಾಲೆಂಟರಿ ರಿಟೈರ್ ಮೆಂಟ್ ಸ್ಕೀಂ(ವಿಆರ್ ಎಸ್) ಜಾರಿಗೊಳಿಸಲು ಮುಂದಾಗಿದೆ.

ಇದರಿಂದಾಗಿ 54,451 ಬಿಎಸ್ಎನ್ಎಲ್ ಸಿಬ್ಬಂದಿ ಅಥವಾ 1,74,312 ಒಟ್ಟಾರೆ,ಶೇ 31ರಷ್ಟು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ವಿಆರ್ ಎಸ್, ಉದ್ಯೋಗ ಕಡಿತದ ಬಳಿಕ ಬಿಎಸ್ಎನ್ಎಲ್ ಸಿಬ್ಬಂದಿ ಸಂಖ್ಯೆ 33,568ಗೆ ತಗ್ಗಲಿದೆ ಇದರಿಂದ 13,895 ಕೋಟಿ ರು ಉಳಿತಾಯ ಮಾಡಬಹುದು ಎಂದು ತಿಳಿದು ಬಂದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ತನ್ನ ಸಿಬ್ಬಂದಿಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಸಂಬಳ ನೀಡಲು ಹಣವಿಲ್ಲದೆ ಸರ್ಕಾರದ ಮೊರೆ ಹೊಕ್ಕಿದ್ದನ್ನು ಇಲ್ಲಿ ಸ್ಮರಿಸಬಹುದು.
ಬಿಎಸ್ಎನ್ಎಲ್ ನಷ್ಟದ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆ ಆಗುತ್ತಿದೆ. ವರದಿ ಪ್ರಕಾರ, 2018ರಲ್ಲಿ ಸುಮಾರು 8 ಸಾವಿರ ಕೋಟಿ ರು ನಷ್ಟು ನಷ್ಟ ಎದುರಿಸಿದೆ. 2017ರ ಆರ್ಥಿಕ ವರ್ಷದಲ್ಲಿ 4,786 ಕೋಟಿ ರು, 2019ರಲ್ಲಿ 8 ಸಾವಿರ ಕೋಟಿ ರುಗೂ ಅಧಿಕ ನಷ್ಟ ನಿರೀಕ್ಷಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications