ಬಿಎಸ್ಎನ್ಎಲ್ ನಿಂದ 40 ಸಾವಿರ ವೈಫೈ ಹಾಟ್ ಸ್ಪಾಟ್
ಇಂದೋರ್, ಜ. 05: ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್ ಎನ್ ಎಲ್) ಭಾರತದಲ್ಲಿ 40 ಸಾವಿರ ವೈಫೈ ಹಾಟ್ ಸ್ಪಾಟ್ ಜಾಲ ನಿರ್ಮಿಸುವುದಾಗಿ ಘೋಷಿಸಿದೆ.
ಇನ್ನೂ 4ಜಿ ಸೇವೆ ಆರಂಭಿಸದ ಬಿಎಸ್ ಎನ್ ಎಲ್ ಮಾಡಿರುವ ಈ ಬೃಹತ್ ಘೋಷಣೆ ಬಗ್ಗೆ ಅನೇಕರಿಗೆ ಕುತೂಹಲ ಉಂಟು ಮಾಡಿದೆ.
ಆದರೆ, ಇದನ್ನು ಸವಾಲಾಗಿ ಸ್ವೀಕರಿಸಿರುವ ಬಿಎಸ್ಎನ್ಎಲ್ ಈಗ ಇರುವ ತರಂಗಗುಚ್ಛಗಳ ನಡುವೆ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸುವುದಾಗಿ ಹೇಳಿದೆ. ದೇಶದೆಲ್ಲೆಡೆ 40 ಸಾವಿರಕ್ಕೂ ಅಧಿಕ ವೈಫೈ ಹಾಟ್ ಸ್ಪಾಟ್ ನಿರ್ಮಿಸುವುದು ನಮ್ಮ ಗುರಿ ಎಂದು ಬಿಎಸ್ಎನ್ ಎಲ್ ಸಿಎಂಡಿ ಅನುಪಮ್ ಶ್ರೀವಾಸ್ತವ ಹೇಳಿದ್ದಾರೆ.

ಈಗಾಗಲೇ 500ಕ್ಕೂ ಅಧಿಕ ವೈಫೈ ಹಾಟ್ ಸ್ಪಾಟ್ ಗಳು ಪ್ರಾಯೋಗಿಕ ಹಂತದಲ್ಲಿ ಸ್ಥಾಪನೆಯಾಗಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲೇ 2,500 ವೈಫೈ ಹಾಟ್ ಸ್ಪಾಟ್ ವಿಸ್ತರಣೆಯಾಗಲಿದೆ. ಇದರ ಜೊತೆಗೆ 5,500 ಕೋಟಿ ರು ವೆಚ್ಚದಲ್ಲಿ 25,000 ಮೊಬೈಲ್ ಟವರ್ ಗಳನ್ನು ನಿರ್ಮಿಸಲಾಗುವುದು ಎಂದರು.
ಕಾಲ್ ಡ್ರಾಪ್ ಬಗ್ಗೆ ಮಾತನಾಡಿ,ಮೊಬೈಲ್ ಟವರ್ ಬಳಿ ನಿಂತರೆ ಅಧಿಕ ರೇಡಿಯೇಷನ್ ಆಗುತ್ತದೆ. ಬ್ಯಾಟರಿ ಲೋ ಇದ್ದಾಗ ಹೆಚ್ಚು ಮಾತನಾಡಬಾರದು ಮುಂತಾದ ಅನೇಕ ಕಲ್ಪಿತ ಸುದ್ದಿಗಳಿಂದ ಕಾಲ್ ಡ್ರಾಪ್ ಗಳು ಅಧಿಕವಾಗಿವೆ. ಗ್ರಾಹಕರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತೆ ನಿಯಮ ಪಾಲಿಸದ ಟವರ್ ಗಳನ್ನು ಬದಲಾಯಿಸಲಾಗಿದೆ ಎಂದು ತಿಳಿಸಿದರು.
ಕಳೆದ ಆರ್ಥಿಕ ವರ್ಷದಲ್ಲಿ ಬಿಎಸ್ ಎನ್ ಎಲ್ ಸಂಸ್ಥೆ 672 ಕೋಟಿ ರು ನಿರ್ವಹಣಾ ಲಾಭ ಪಡೆದುಕೊಂಡಿದೆ. ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ 1,000 ಕೋಟಿ ರು ಲಾಭದ ನಿರೀಕ್ಷೆಯಿದೆ. ಇದರ ಜೊತೆಗೆ 2019ರ ವೇಳೆಗೆ ನಿವ್ವಳ ಲಾಭ ಹೆಚ್ಚಳದ ಗುರಿ ಹೊಂದಲಾಗಿದೆ ಎಂದರು. (ಒನ್ ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications