ಬಜೆಟ್ 2022: ಜಾಗತಿಕ ಸಾಲ ಹೂಡಿಕೆದಾರರಿಗೆ ತೆರಿಗೆ ವಿನಾಯಿತಿ ಸಿಗುತ್ತಾ?
ನವದೆಹಲಿ, ಜನವರಿ 19: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ನಲ್ಲಿ ಸಾಗರೋತ್ತರ ಸಾಲ ಹೂಡಿಕೆದಾರರಿಗೆ ಬಂಡವಾಳ ಲಾಭದ ತೆರಿಗೆ ಮನ್ನಾವನ್ನು ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ ಭಾರತದ ಸೇರ್ಪಡೆಗೆ ವೇದಿಕೆ ಲಭ್ಯವಾಗಲಿದೆ ಎಂದು ವರದಿಯು ಉಲ್ಲೇಖ ಮಾಡಿದೆ.
ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ ಭಾರತೀಯ ಸಾಲ ಮನ್ನಾ ಹಾಗೂ ಪರಿಣಾಮವಾಗಿ ಸೇರ್ಪಡೆಯು ಗಮನಾರ್ಹವಾಗಿ ಸ್ಥಳೀಯ ಸಾಲ ಭದ್ರತೆಗಳಿಗೆ ಬಂಡವಾಳದ ಹರಿವನ್ನು ಉಂಟುಮಾಡುತ್ತದೆ. ಹಾಗೆಯೇ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಲ್ಲಿ ಹಿನ್ನಡೆಯನ್ನು ಕಡಿಮೆ ಮಾಡಲಿದೆ ಎಂದು ವರದಿಯು ಉಲ್ಲೇಖ ಮಾಡಿದೆ.
ಜಾಗತಿಕ ಬಾಂಡ್ ಸೂಚ್ಯಂಕಗಳಲ್ಲಿ ಸೇರ್ಪಡೆಗೊಂಡ ನಂತರ ಕಡಲಾಚೆಯ ಹೂಡಿಕೆದಾರರು ಆಯ್ದ ಸವರನ್ ಭದ್ರತೆಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಮುಂದಿನ ದಶಕದಲ್ಲಿ ಶೇಕಡ 250 ಶತಕೋಟಿಯಷ್ಟು ಹೂಡಿಕೆಯನ್ನು ಸೆಳೆಯುವ ನಿರೀಕ್ಷೆ ಇದೆ. ಭಾರತದ ಸಾಲದ ವೆಚ್ಚವನ್ನು 50 ಬೇಸಿಸ್ ಪಾಯಿಂಟ್ಗಳವರೆಗೆ ಕಡಿಮೆ ಮಾಡುತ್ತದೆ ಎಂದು ಮೋರ್ಗನ್ ಸ್ಟಾನ್ಲಿ ಅಂದಾಜಿಸಿದೆ.

"ಪ್ರತಿ ಬಾಂಡ್ ವಹಿವಾಟಿನ ಮೇಲೆ ಬಂಡವಾಳ ಲಾಭದ ತೆರಿಗೆಯನ್ನು ಅನ್ವಯ ಮಾಡಿದರೆ, ಇದು ಜಾಗತಿಕ ಸೂಚ್ಯಂಕಗಳ ವಿರುದ್ಧವಾಗಿ ಲಿಕ್ವಿಡಿಟಿಯನ್ನು (ದ್ರವ್ಯತೆ) ಗಮನಾರ್ಹವಾಗಿ ಅಡ್ಡಿಪಡಿಸುತ್ತದೆ," ಎಂದು ಅಂತರಾಷ್ಟ್ರೀಯ ಸೆಕ್ಯುರಿಟೀಸ್ ಸೆಟಲ್ಮೆಂಟ್ ಪ್ಲಾಟ್ಫಾರ್ಮ್ ಯೂರೋಕ್ಲಿಯರ್ನ ಜಾಗತಿಕ ಬಂಡವಾಳ ಮಾರುಕಟ್ಟೆಯ ಮುಖ್ಯಸ್ಥ ಸುದೀಪ್ ಚಟರ್ಜಿ ಹೇಳಿದರು. ಪಟ್ಟಿ ಮಾಡಲಾದ ಬಾಂಡ್ ಅನ್ನು 12 ತಿಂಗಳೊಳಗೆ ಮಾರಾಟ ಮಾಡಿದರೆ ಸಾಗರೋತ್ತರ ಹೂಡಿಕೆದಾರರು ಅಲ್ಪಾವಧಿಯ ಬಂಡವಾಳ ಲಾಭದ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಹೂಡಿಕೆದಾರರ ಸ್ವಭಾವಕ್ಕೆ ಅನುಗುಣವಾಗಿ ತೆರಿಗೆ ಪ್ರಮಾಣವು ಶೇಕಡ 30-40 ವ್ಯಾಪ್ತಿಯಲ್ಲಿ ಇರಲಿದೆ. ಯುರೋಕ್ಲಿಯರ್ 49 ವಿವಿಧ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಅವುಗಳಲ್ಲಿ ಯಾವುದೂ ಬಾಂಡ್ ವಹಿವಾಟಿನ ಮೇಲೆ ಬಂಡವಾಳ ಲಾಭದ ತೆರಿಗೆಯನ್ನು ಹೊಂದಿಲ್ಲ.
ಬಜೆಟ್ ನಿರೀಕ್ಷೆಗಳು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಹಲವಾರು ವಲಯಗಳು ಹಲವು ನಿರೀಕ್ಷೆಗಳನ್ನು ಇರಿಸಿಕೊಂಡಿದೆ. ಎನ್ಆರ್ಐಗಳ ಬಹುಕಾಲದ ಬೇಡಿಕೆಗಳು ಇನ್ನೂ ಕೂಡಾ ಈಡೇರಿಕೆ ಆಗಿಲ್ಲ. ಹಾಗಾಗಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಿದೆ. ಇನ್ನು ಹಲವಾರು ವಲಯಗಳು ತಮ್ಮದೇ ಆದ ನಿರೀಕ್ಷೆಯನ್ನು ಹೊಂದಿದೆ. ಈ ಮಧ್ಯೆ ದ್ವಿಚಕ್ರ ವಾಹನ, ಸೆಕೆಂಡ್ಹ್ಯಾಂಡ್ ಕಾರುಗಳ ಮೇಲಿನ ಜಿಎಸ್ಟಿ ಕಡಿತ ಮಾಡುವ ಪ್ರಸ್ತಾಪವನ್ನು ಸರ್ಕಾರದ ಮುಂದೆ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ (ಎಫ್ಎಡಿಎ) ಇಟ್ಟಿದೆ.
ದೇಶದಾದ್ಯಂತ ಆಟೋಮೊಬೈಲ್ ಡೀಲರ್ಗಳು ಮತ್ತು ಚಿಲ್ಲರೆ ವ್ಯಾಪಾರಿಗಳನ್ನು ಪ್ರತಿನಿಧಿಸುವ ಉನ್ನತ ಸಂಸ್ಥೆಯಾದ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ (ಎಫ್ಎಡಿಎ) ಮುಂಬರುವ ಕೇಂದ್ರ ಬಜೆಟ್ನಲ್ಲಿ ಆಟೋಮೋಟಿವ್ ಉದ್ಯಮಕ್ಕೆ ಸಹಾಯ ಮಾಡಲು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿದೆ. ಸರ್ಕಾರ ಈ ಪ್ರಸ್ತಾಪವನ್ನು ಪರಿಗಣಿಸಿದರೆ ದ್ವಿಚಕ್ರ ವಾಹನ, ಸೆಕೆಂಡ್ಹ್ಯಾಂಡ್ ಕಾರುಗಳ ಮೇಲಿನ ಜಿಎಸ್ಟಿ ಕಡಿತವಾಗುವ ನಿರೀಕ್ಷೆ ಇದೆ.
ರಿಯಲ್ ಎಸ್ಟೇಟ್ ವಲಯ ಬಜೆಟ್ ಮೇಲೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ತೆರಿಗೆ ರಿಯಾಯಿತಿ ನೀಡಬೇಕು ಎಂಬುದು ವಲಯದ ಪ್ರಮುಖ ಬೇಡಿಕೆಯಾಗಿದೆ. ಗೃಹ ಸಾಲದ ಬಡ್ಡಿ ಕಡಿತ ಮಿತಿಯನ್ನು 2 ರಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಬೇಕು ಎಂಬುದು ಮೊದಲ ಬೇಡಿಕೆಯಾಗಿದೆ. ಕ್ರೆಡೈ ಅಧ್ಯಕ್ಷ ಹರ್ಷವರ್ಧನ್ ಪಟೋಡಿಯಾ ಈ ಕುರಿತು ಮಾತನಾಡಿದ್ದಾರೆ, "ಪ್ರಧಾನಮಂತ್ರಿಗಳಾದ ಕನಸಾದ ಎಲ್ಲರಿಗೂ ವಸತಿ ಯೋಜನೆ ಜಾರಿಗೊಳಿಸಲು ತೆರಿಗೆ ಸಡಿಲಿಕೆ ನೀತಿ ಸಹಾಯಕವಾಗಲಿದೆ" ಎಂದು ಹೇಳಿದ್ದಾರೆ. ಕನಿಷ್ಠ 50,000 ರೂಪಾಯಿಯಿಂದ ಪ್ರಾರಂಭವಾಗುವ ರಿಯಲ್ ಎಸ್ಟೇಟ್ ಇನ್ವೆಸ್ಟ್ಮೆಂಟ್ ಟ್ರಸ್ಟ್ಗಳಲ್ಲಿ ಹೂಡಿಕೆಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಲಾಗಿದೆ. (ಒನ್ಇಂಡಿಯಾ ಸುದ್ದಿ)
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications