2 ಲಕ್ಷ ರುಪಾಯಿ ಮೇಲಿನ ಆಭರಣದ ನಗದು ಖರೀದಿಗೆ ಶೇ 1ರಷ್ಟು ತೆರಿಗೆ
ಏಪ್ರಿಲ್ 1ರಿಂದ ಎರಡು ಲಕ್ಷ ಮೇಲ್ಪಟ್ಟು ಆಭರಣ ಖರೀದಿಯನ್ನು ನಗದು ಮೂಲಕ ಮಾಡಿದರೆ ಶೇ 1ರಷ್ಟು ತೆರಿಗೆ ನೀಡಬೇಕಾಗುತ್ತದೆ. ಈವರೆಗೆ 5 ಲಕ್ಷ ರುಪಾಯಿ ಮೇಲ್ಪಟ್ಟ ಖರೀದಿಗೆ ತೆರಿಗೆ ಹಾಕಲಾಗುತ್ತಿತ್ತು. ಅದನ್ನು ಎರಡು ಲಕ್ಷಕ್ಕೆ ಇಳಿಸಲಾಗಿದೆ.
ನವದೆಹಲಿ, ಫೆಬ್ರವರಿ 20: ಏಪ್ರಿಲ್ 1ರಿಂದ ಎರಡು ಲಕ್ಷ ಮೇಲ್ಪಟ್ಟ ಮೊತ್ತಕ್ಕೆ ನಗದು ನೀಡಿ, ಆಭರಣ ಖರೀದಿಸಿದರೆ ಶೇ 1ರಷ್ಟು ತೆರಿಗೆ ಬೀಳುತ್ತದೆ. ಈ ವರೆಗೆ ಐದು ಲಕ್ಷವಿದ್ದ ಮಿತಿಯನ್ನು ಎರಡು ಲಕ್ಷಕ್ಕೆ ಇಳಿಸಲಾಗಿದೆ. ಚಿನ್ನವನ್ನು ಎಲ್ಲ ವಸ್ತುಗಳಂತೆ ಪರಿಗಣಿಸಿ, 2 ಲಕ್ಷ ರುಪಾಯಿ ಮೇಲಿನ ಖರೀದಿಗೆ ಶೇ 1ರಷ್ಟು (ಟ್ಯಾಕ್ಸ್ ಕಲೆಕ್ಟಡ್ ಅಟ್ ಸೋರ್ಸ್) ತೆರಿಗೆ ಹಾಕಲಾಗುತ್ತದೆ.
ಆರ್ಥಿಕ ಮಸೂದೆ 2017ರ ಅನ್ವಯ ಸದ್ಯದ 5 ಲಕ್ಷದ ಮಿತಿಯನ್ನು ತೆಗೆದುಹಾಕಲಾಗಿದೆ. ಮೂರು ಲಕ್ಷ ರುಪಾಯಿ ಮೇಲಿನ ನಗದು ಖರೀದಿಗೆ ಅಷ್ಟೇ ಮೊತ್ತದ ದಂಡ ಹಾಕಲು ಕೇಂದ್ರ ಬಜೆಟ್ ನಲ್ಲೇ ಪ್ರಸ್ತಾವ ಮಾಡಲಾಗಿತ್ತು. ಚಿನ್ನಕ್ಕೆ ಟ್ಯಾಕ್ಸ್ ಕಲೆಕ್ಟಡ್ ಅಟ್ ಸೋರ್ಸ್ ಎಂದು ಪರಿಗಣಿಸಲು ಸಾಧ್ಯವಿರಲಿಲ್ಲ ಆದ್ದರಿಂದ ಇದೀಗ ಅದನ್ನೂ ಸಾಮಾನ್ಯ 'ಸರಕು' ಎಂಬಂತೆ ಪರಿಗಣಿಸಿ, ಶೇ 1ರಷ್ಟು ತೆರಿಗೆ ಹಾಕಲಾಗುತ್ತದೆ.[ಏಪ್ರಿಲ್ ನಿಂದ 3 ಲಕ್ಷ ರುಪಾಯಿ ಮೇಲಿನ ನಗದು ವ್ಯವಹಾರಕ್ಕೆ ಬ್ರೇಕ್!]

ಆದರೆ, 2016-17ರ ಬಜೆಟ್ ನಲ್ಲೇ 2 ಲಕ್ಷ ರುಪಾಯಿ ಮೇಲ್ಪಟ್ಟ ಸರಕು ಹಾಗೂ ಸೇವೆಗೆ ನಗದು ಪಾವತಿಸಿದರೆ ಶೇ 1ರಷ್ಟನ್ನು ಟ್ಯಾಕ್ಸ್ ಕಲೆಕ್ಟಡ್ ಅಟ್ ಸೋರ್ಸ್ ಎಂದು ತೆಗೆದುಕೊಳ್ಳಲಾಗುತ್ತಿದೆ. ಇದೀಗ ಪ್ರಸ್ತಾವಿತ ಆರ್ಥಿಕ ಮಸೂದೆ 2017ಕ್ಕೆ ತಿದ್ದುಪಡಿ ತರುವ ಮೂಲಕ ಈವರೆಗೆ ಇದ್ದ ಆಭರಣ ಖರೀದಿಯ 5 ಲಕ್ಷದ ಮೇಲಿನ ಶೇ 1ರಷ್ಟು ತೆರಿಗೆಯನ್ನು ಎರಡು ಲಕ್ಷ ರುಪಾಯಿಗೆ ಇಳಿಕೆ ಮಾಡಲಾಗುವುದು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications