ಇತಿಹಾಸ ಪುಟ ಸೇರಲಿರುವ ಎಚ್ಎಂಟಿ ಗಡಿಯಾರ
ನವದೆಹಲಿ, ಜ. 06: ಹಿಂದೂಸ್ತಾನ್ ಮಿಷನ್ ಟೂಲ್ಸ್ (ಎಚ್ ಎಂಟಿ) ಇತಿಹಾಸ ಪುಟ ಸೇರುವ ದಿನಗಳು ಹತ್ತಿರವಾಗುತ್ತಿದೆ. ಎಚ್ ಎಂಟಿ ಸಮೂಹದ ಮೂರು ಸಂಸ್ಥೆಗಳನ್ನು ಮುಚ್ಚಲು ಆರ್ಥಿಕ ವ್ಯವಹಾರಗಳ ಕೇಂದ್ರ ಸಚಿವ ಸಂಪುಟದ ಸಮಿತಿ (ಸಿಸಿಇಎ) ಬುಧವಾರ ನಿರ್ಧರಿಸಿದೆ.
ಈ ಮೂಲಕ ಎಚ್ ಎಂಟಿ ವಾಚ್ ಕಂಪನಿ, ಎಚ್ ಎಂಟಿ ಚಿನಾರ್ ಹಾಗೂ ಎಚ್ ಎಂಟಿ ಬೇರಿಂಗ್ಸ್ ಸಂಸ್ಥೆ ಮುಚ್ಚಲಾಗುತ್ತದೆ. ನಷ್ಟದ ಹಾದಿಯಲ್ಲಿ ಸಾಗುತ್ತಿರುವ ಕಂಪನಿಗೆ ಬೀಗ ಹಾಕಲು ತೀರ್ಮಾನಿಸಲಾಗಿದೆ. ಹೆಚ್ಚುವರಿ 427.48 ಕೋಟಿ ರು ನಗದು ಅನುದಾನ ನೀಡಲಾಗಿತ್ತು. [ಎಚ್ಎಂಟಿ ಸಮಾಧಿ ಮೇಲೆ ಕಾಂಗ್ರೆಸ್ಸಿಗರ ದುಡ್ಡಿನ ಸೌಧ]

ಆದರೆ, ಮೂರು ಲಿಮಿಟೆಡ್ ಸಂಸ್ಥೆಗಳು ಚೇತರಿಕೆ ಕಾಣದ ಹಿನ್ನಲೆಯಲ್ಲಿ ಸಂಸ್ಥೆಗಳಿಗೆ ಬಾಗಿಲು ಹಾಕುವುದು ಅನಿವಾರ್ಯ ಎಂದು ಸಿಸಿಇಎ ಹೇಳಿದೆ. ಈ ಮೂರು ಸಂಸ್ಥೆಗಳ ಉದ್ಯೋಗಿಗಳು ವಿಆರ್ ಎಸ್ /ವಿಎಸ್ಎಸ್ ಮೂಲಕ ಬಾಕಿ ಮೊತ್ತವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.[ಎಚ್ಎಂಟಿ ಕಂಪನಿಗೆ ಬೀಳಲಿದೆ ಬೀಗ]
ಸ್ವಯಂ ನಿವೃತ್ತಿ ಅಡಿಯಲ್ಲಿ ನಿವೃತ್ತಿ ಪಡೆಯುವ ಉದ್ಯೋಗಿಗಳಿಗೆ 2007ರ ವೇತನ ಆಯೋಗದಂತೆ ಸಂಬಳ ಭತ್ಯೆ ಸಿಗಲಿದೆ. ಮೂರು ಸಂಸ್ಥೆಗಳಾ ಸ್ಥಿರ, ಚರಾಸ್ತಿಗಳನ್ನು ಸರ್ಕಾರಿ ನಿಯಮದಂತೆ ಹರಾಜು ಹಾಕಲಾಗುವುದು ಎಂದು ಸಿಸಿಇಎ ಹೇಳಿದೆ.
53 ವರ್ಷಗಳಿಂದ ಭಾರತೀಯರಿಗೆ ನಿಖರ ಸಮಯ ತೋರಿಸುತ್ತಿದ್ದ ಕಂಪನಿ 2000ದಿಂದ ನಷ್ಟದ ಹಾದಿಯಲ್ಲಿ ಸಾಗುತ್ತಾ ಬಂದಿದೆ.
1961ರಲ್ಲಿ ಜಪಾನ್ನ ಸಿಟಿಜನ್ ವಾಚ್ ಕಂಪನಿಯ ಸಹಯೋಗದಲ್ಲಿ ಆರಂಭವಾದ ಎಚ್ಎಂಟಿ ವಾಚಸ್ ಕಂಪನಿಯು 2011-12ನೇ ಸಾಲಿನಲ್ಲಿ 224.04 ಕೋಟಿ ರೂ. ನಷ್ಟ ಅನುಭವಿಸಿತು. 2012-13ನೇ ಸಾಲಿನಲ್ಲಿ ಇದು 242.47 ಕೋಟಿ ರೂ.ಗೆ ಏರಿತು. 2012ರಲ್ಲಿ ಕೇಂದ್ರ ಸರ್ಕಾರ ಈ ಕಂಪನಿಗೆ 694.52 ಕೋಟಿ ರೂ. ಸಾಲ ನೀಡಿದರೂ ಕಂಪನಿ ನಷ್ಟದಿಂದ ಬಿಡುಗಡೆ ಹೊಂದಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ದೇಶದ 4 ಕಡೆ ಉತ್ಪಾದನಾ ಘಟಕವನ್ನು ಎಚ್ಎಂಟಿ ಹೊಂದಿದೆ. (ಐಎಎನ್ಎಸ್)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications