ಸಿಂಗಲ್ ಬ್ರ್ಯಾಂಡ್ ನಲ್ಲಿ ಎಫ್ ಡಿಐಗೆ 100% ಅನುಮತಿ
ನವದೆಹಲಿ, ಜನವರಿ 10: ಸಿಂಗಲ್ ಬ್ರ್ಯಾಂಡ್ ನಲ್ಲಿ ಶೇ100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ ಡಿಐ)ಗೆ ಅನುಮತಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧಾರ ಕೈಗೊಂಡಿದೆ.
ಭಾರತಕ್ಕೆ ಎಫ್ ಡಿಐ ಹೊಸ ವಿಷಯವೇನಲ್ಲ. ಯುಪಿಎ ಸರ್ಕಾರದ ಕಾಲದಿಂದಲೂ ಎಫ್ ಡಿಐಗೆ ಅವಕಾಶ ನೀಡಲಾಗಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಸಿಂಗಲ್ ಬ್ರ್ಯಾಂಡ್ ನಲ್ಲಿ ಎಫ್ ಡಿಐ ಈಗಾಗಲೇ ಹೋಲ್ ಸೇಲ್, ಬ್ಯಾಂಕಿಂಗ್, ವಿಮಾ ಕ್ಷೇತ್ರದಲ್ಲಿ ಜಾರಿಯಲ್ಲಿದೆ.

ಈಗ ಇನ್ನಷ್ಟು ಕ್ಷೇತ್ರಗಳಿಗೆ ವಿಸ್ತರಿಸಲಾಗಿದೆ. ವಿಮಾನಯಾನ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತಗಳಲ್ಲಿ ಶೇ 49ರಷ್ಟು ಸ್ವಯಂ ಚಾಲಿತ ನೇರ ಹೂಡಿಕೆಗೆ ಅವಕಾಶವಿದೆ.
ಸಿಂಗಲ್ ಬ್ರ್ಯಾಂಡ್ ನಲ್ಲಿ ಎಫ್ ಡಿಐಗೆ ಅವಕಾಶ ನೀಡಿರುವುದರಿಂದ ಆರ್ಥಿಕ ಪ್ರಗತಿ ಕಾಣಬಹುದು. ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಎಫ್ ಡಿಐ ಮೂಲಕ ಇಲ್ಲಿನ ಮಾರುಕಟ್ಟೆ ಪ್ರವೇಶಿಸುವ ಸಂಸ್ಥೆಗಳ ಉತ್ಪನ್ನ 'ಸಿಂಗಲ್ ಬ್ರ್ಯಾಂಡ್' ಆಗಿರಬೇಕು. ಅದೇ ಬ್ರ್ಯಾಂಡ್ನಲ್ಲಿ ಜಾಗತಿಕ ಮಟ್ಟದಲ್ಲಿ ಮಾರಾಟ ಮಾಡಬೇಕು ಎಂಬ ಷರತ್ತಿನ ಅಡಿಯಲ್ಲಿ ಹೂಡಿಕೆಗೆ ಅನುಮತಿ ನೀಡಲಾಗಿದೆ. ಇದಲ್ಲದೆ, ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿನ ಎಫ್ಡಿಐ ನಿಯಮಾವಳಿಗೆ ಸಡಿಲಿಕೆ ಮಾಡಲಾಗಿದೆ.
ಸಾಲದ ಹೊರೆ ಹೊತ್ತು ಕುಸಿಯುತ್ತಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆ ಮೇಲೆತ್ತಲು ಶೇ 49ರಷ್ಟು ಎಫ್ ಡಿಐ ಅನುಕೂಲಕರ. ಇದಕ್ಕಿಂತ ಹೆಚ್ಚಿನ ಪ್ರಮಾಣದ ಹೂಡಿಕೆಗೆ ಸರ್ಕಾರದ ಅನುಮತಿ ಅಗತ್ಯ.
ದೇಶದ ಚಿಲ್ಲರೆ ಕ್ಷೇತ್ರ, ಮಲ್ಟಿ ಬ್ರ್ಯಾಂಡ್ ರೀಟೈಲ್ ನಲ್ಲಿ ಎಫ್ ಡಿಐ ಜಾರಿಗೊಂಡರೆ ದೇಶದ ಸಣ್ಣ ಉದ್ಯಮಿಗಳ ಬದುಕಿಗೆ ಮಾರಕವಾಗಲಿದೆ. ಸದ್ಯದ ಪರಿಸ್ಥಿತಿ ಮೆಗಾ ಸ್ಟೋರ್ ಗಳಿಗೆ ಮಣೆ ಹಾಕುವುದಿಲ್ಲ. ಮಲ್ಟಿ ಬ್ರ್ಯಾಂಡ್ ರೀಟೈಲ್ ಕ್ಷೇತ್ರವನ್ನು ಬಿಟ್ಟು ಉಳಿದ ಕ್ಷೇತ್ರಗಳಲ್ಲಿ ಎಫ್ ಡಿಐಗೆ ಅವಕಾಶ ಕಲ್ಪಿಸಲಾಗುವುದು ಹಾಗೂ ಇದರಿಂದ ಹೆಚ್ಚಿನ ಉದ್ಯೋಗವಕಾಶ ಕೂಡಾ ಸಿಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications