ಸಿದ್ದಾರ್ಥ ಸಾವಿನ ನಂತರ ನೆಲಕಚ್ಚಿದ ಕಾಫಿ ಡೇ ಷೇರುಗಳು
ಮುಂಬೈ, ಜುಲೈ 31:ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಸಾವಿನ ಸುದ್ದಿಯಿಂದ ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳಿಗೆ ಭಾರಿ ಹೊಡೆತ ಬಿದ್ದಿದೆ. ಕಾಫಿ ಡೇ ಸೇರಿದಂತೆ ವಿಜಿ ಸಿದ್ದಾರ್ಥ ಅವರ ಮಾಲೀಕತ್ವದ ಸಂಸ್ಥೆಗಳು ಬುಧವಾರದಂದು ಬಂದ್ ಆಗಿವೆ. ಈ ನಡುವೆ ಷೇರುಪೇಟೆಯಲ್ಲಿ ಕಾಫಿ ಡೇ ಸಂಸ್ಥೆ ಷೇರುಗಳು ನೆಲಕಚ್ಚಿವೆ.
ಕಾಫಿ ಡೇ ಮಾಲೀಕ ಸಿದ್ದಾರ್ಥ ಸಾವಿನ ನಂತರ ಚಿಕ್ಕಮಗಳೂರಿನ ಕಾಫಿ ಡೇ ಸಂಸ್ಥೆ, ಹಾಸನ, ಮಡಿಕೇರಿಯಲ್ಲಿನ ಕಾರ್ಮಿಕರಿಗೂ ಮೂರು ದಿನಗಳ ರಜೆ ಘೋಷಿಸಲಾಗಿದೆ. ಕಾಫಿ ಕೆಲಸ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ತೀರ್ಥ ಮಲ್ಲೇಶ್ ಹೇಳಿದ್ದಾರೆ.
ಪ್ರತಿಷ್ಠಿತ ಎಬಿಸಿ ಕಂಪನಿ ಸೇರಿದಂತೆ ಸೇರಾಯ್ ರೆಸಾರ್ಟ್, ಅಂಬರ್ ವ್ಯಾಲಿ ಶಾಲೆ, ವಿ.ಟಿ.ಸಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಸ್ಟೇಟ್ ಕೆಲಸಕ್ಕೆ ಅಗಮಿಸಿದ ಸಾವಿರಾರು ಕಾರ್ಮಿಕರನ್ನು ವಾಪಸ್ ಕಳುಹಿಸಲಾಗಿದೆ.

ಷೇರುಪೇಟೆಯಲ್ಲಿ ಕಾಫಿ ಡೇ : ಬುಧವಾರದಂದು ಕೂಡಾ ದಿನದ ಆರಂಭದ ವಹಿವಾಟಿನಲ್ಲಿ ಶೇ20ರಷ್ಟು ಕುಸಿತ ಕಂಡ ಕಾಫಿ ಡೇ ಷೇರುಗಳು 52 ವಾರಗಳಲ್ಲೇ ಅತ್ಯಧಿಕ ಕಳಪೆ ಸಂಖ್ಯೆಯನ್ನು ಕಂಡಿದೆ. ಸುಮಾರು 2,494,013 ಷೇರು ಮಾರಾಟಕ್ಕಿದ್ದರೂ ಖರೀದಿದಾರಲಿಲ್ಲ.
ಬುಧವಾರದಂದು ಬಿಎಸ್ಇಯಲ್ಲಿ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಷೇರುಗಳು ಬೆಳಗ್ಗೆ 10.24ರ ಸುಮಾರಿಗೆ 123.25ರು ನಂತೆ ವಹಿವಾಟು ಆರಂಭಿಸಿದ್ದು, 19.99% ಕುಸಿತ ಕಂಡು 38.50ರು ಕಳೆದುಕೊಂಡಿದೆ. ಇದೇ ವೇಳೆ ಎನ್ ಎಸ್ ಇಯಲ್ಲಿ 20% ಕುಸಿತ ಕಂಡು 30.65ರು ನಷ್ಟು ನಷ್ಟವಾಗಿದ್ದು, 122.75ರಂತೆ ವಹಿವಾಟು ನಡೆಸಿದೆ.
ಮಂಗಳವಾರಂದು ಬಿಎಸ್ಇಯಲ್ಲಿ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಷೇರುಗಳು 153.4ರು ನಂತೆ ವಹಿವಾಟು ಆರಂಭಿಸಿದ್ದು, 19.90% ಕುಸಿತ ಕಂಡು 38.50ರು ಕಳೆದುಕೊಂಡಿದೆ. ಇದೇ ವೇಳೆ ಎನ್ ಎಸ್ ಇಯಲ್ಲಿ 20% ಕುಸಿತ ಕಂಡು 38.35ರು ನಷ್ಟು ನಷ್ಟವಾಗಿದೆ.
ಮಾರ್ಚ್ 2019ರ ಎಣಿಕೆಯಂತೆ ಭಾರತದಲ್ಲಿ ಸುಮಾರು 1,752 ಕೆಫೆಗಳನ್ನು ಹೊಂದಿರುವ ಕೆಫೆ ಕಾಫಿ ಡೇ ಸದ್ಯ ದೇಶದಲ್ಲಿ ಮುಂಚೂಣಿಯಲ್ಲಿರುವ ಕಾಫಿ ಸಂಸ್ಥೆಯಾಗಿದೆ. ಭಾರತದಲ್ಲಿ ವಿಸ್ತೃತವಾದ ಕಾಫಿ ಮಳಿಗೆಯನ್ನು ವಿಸ್ತರಿಸುವಲ್ಲಿ ಸಂಸ್ಥೆಯ ಸ್ಥಾಪಕ ವಿಜಿ ಸಿದ್ದಾರ್ಥ ಅವರ ಪಾತ್ರ ದೊಡ್ಡದು. 1996ರಿಂದ ಇಲ್ಲಿ ತನಕ ಹಲವು ಏರಿಳಿತ ಕಂಡಿರುವ ಸ್ವದೇಶಿ ಬ್ರ್ಯಾಂಡ್ ಕೆಫೆ ಕಾಫಿ ಡೇ ಈಗ ಅಮೆರಿಕದ ಕೋಕ ಕೋಲಾ ಕಂಪನಿ ಪಾಲಾಗುವ ಮಾತುಕತೆ ನಡೆದಿತ್ತು. ಕಾಫಿ ಡೇ ಸಂಸ್ಥೆ ಆದಾಯ 1,777 ಕೋಟಿ ರು ಹಾಗೂ 2020ರ ವೇಳೆಗೆ 2250 ಕೋಟಿ ರು ಗಳಿಕೆ ಗುರಿ ಹೊಂದಿದ್ದರು. ಇತ್ತೀಚೆಗೆ ಸಿದ್ದಾರ್ಥ ಅವರು ಮೈಂಡ್ ಟ್ರೀಯಲ್ಲಿದ್ದ ತಮ್ಮ 20.3% ಷೇರುಗಳನ್ನು ಎಲ್ ಅಂಡ್ ಟಿ ಕಂಪನಿಗೆ ಮಾರಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications