Q4: ಕೆನರಾ ಬ್ಯಾಂಕ್ ಆದಾಯ ಇಳಿಕೆ, ಲಾಭವೂ ಅಷ್ಟಕಷ್ಟೇ!
ಬೆಂಗಳೂರು, ಮೇ26: ಕರ್ನಾಟಕ ಮೂಲದ ಕೆನರಾ ಬ್ಯಾಂಕ್ 2014-15ನೇ ಸಾಲಿನ ಕೊನೆ ತ್ರೈಮಾಸಿಕದಲ್ಲಿ ಶೇ 0.34ರಷ್ಟು ನಿವ್ವಳ ಲಾಭ ಏರಿಕೆ ಕಂಡಿದೆ. ಮಾ.31ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ 612.96 ಕೋಟಿ ನಿವ್ವಳ ಲಾಭ ಪಡೆದುಕೊಂಡಿದೆ. ಅದರೆ, ತ್ರೈಮಾಸಿಕದಿಂದ ತ್ರೈಮಾಸಿಕ ಆದಾಯ ಇಳಿಕೆಯಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ 610.8 ಕೋಟಿ ರು ಲಾಭ ಪಡೆದುಕೊಂಡಿತ್ತು. ಬ್ಯಾಂಕಿನ ಒಟ್ಟಾರೆ ಆದಾಯ ಶೇ 7 ರಷ್ಟು ಏರಿಕೆ ಕಂಡು 12,429.21 ಕೋಟಿ ರು ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 11,609.72 ಕೋಟಿ ರು ಗಳಿಸಿತ್ತು.
2014-15ರ ಅವಧಿಗೆ ಬ್ಯಾಂಕಿನ ನಿವ್ವಳ ಲಾಭ ಶೇ 10.8ರಷ್ಟು ಏರಿಕೆ ಕಂಡು 2,702.63 ಕೋಟಿ ರು ಗಳಿಸಿದೆ. ಈ ಹಿಂದಿನ ಆರ್ಥಿಕ ವರ್ಷದಲ್ಲಿ 2,438.19 ಕೋಟಿ ರು ಗಳಿಸಿತ್ತು. ಅದರೆ, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಹೋಲಿಸಿದರೆ 2,486 ಕೋಟಿ ರು ಆದಾಯ(ನಿವ್ವಳ ಬಡ್ಡಿ ಆದಾಯ) ಶೇ 1.93 ಕುಸಿತ ಕಂಡಿದೆ. ಕಳೆದ ವರ್ಷ ಇದೇ ತ್ರೈಮಾಸಿಕ ಅವಧಿಯಲ್ಲಿ 2,532 ಕೋಟಿ ರು ಗಳಿಸಲಾಗಿತ್ತು.
ಒಟ್ಟಾರೆ ಗ್ರಾಹಕರ ಸಂಖ್ಯೆ 6.58 ಕೋಟಿ ರೂ. ವೃದ್ಧಿಗೊಂಡಿದೆ (ಕಳೆದ ವರ್ಷ 5.55 ಕೋಟಿ ರೂ). ಪ್ರಸಕ್ತ ವಿತ್ತ ವರ್ಷದಲ್ಲಿ ಒಂದು ಕೋಟಿಗೂ ಅಧಿಕ ಗ್ರಾಹಕರು ಸೇರ್ಪಡೆಯಾಗಿದ್ದಾರೆ.

ಪ್ರಧಾನ ಮಂತ್ರಿಗಳ ಜನ-ಧನ ಯೋಜನೆಯಲ್ಲಿ 64.76 ಲಕ್ಷ ಖಾತೆಗಳನ್ನು ತೆರೆಯಲಾಗಿದೆ. ಈ ಯೋಜನೆ ಸಮರ್ಥವಾಗಿ ಜಾರಿಗೊಳಿಸಿದ್ದಕ್ಕೆ 2015ನೇ ಸಾಲಿನ ಅತ್ಯುತ್ತಮ ಸಾಧನೆ ಪ್ರಶಸ್ತಿ "ಗೋಲ್ಡನ್ ಪಿಕಾಕ್ ಬಿಸ್ನೆಸ್ ಎಕ್ಸಲೆನ್ಸಿ " ಕೆನರಾ ಬ್ಯಾಂಕ್ ಪಾಲಾಗಿದೆ.
ಕೆನರಾ ಬ್ಯಾಂಕ್ ತನ್ನ ಷೇರುದಾರರಿಗೆ 10.50 ರು ಪ್ರತಿ ಷೇರಿನಂತೆ ಡಿವಿಡೆಂಡ್ ಘೋಷಿಸಿದೆ. ಈ ವರ್ಷ ಸುಮಾರು 3,000 ಕೋಟಿ ರು ಹೂಡಿಕೆ ಸಿಕ್ಕರೆ ಪ್ರಗತಿ ಕಾಣಬಹುದು ಎಂದು ಕಾರ್ಯಕಾರಿ ನಿರ್ದೇಶಕ ಪಿಎಸ್ ರಾವತ್ ಹೇಳಿದ್ದಾರೆ.
ಕೆನರಾ ಬ್ಯಾಂಕ್ ಷೇರುಗಳು ಮಂಗಳವಾರ ಬಿಎಸ್ ಇನಲ್ಲಿ 340 ರು ನಂತೆ ಟ್ರೇಡಿಂಗ್ ಶುರು ಮಾಡಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 1.91ರಷ್ಟು ಕುಸಿತ ಕಂಡು 333.70 ರು ಗೆ ಇಳಿದಿತ್ತು. ಎನ್ ಎಸ್ ಇನಲ್ಲೂ ಇಷ್ಟೇ ಪ್ರಮಾಣದ ಇಳಿಕೆ ಕಂಡು ಬಂದಿದ್ದು 333.60ರಂತೆ ಟ್ರೇಡಿಂಗ್ ಆಗುತ್ತಿದೆ.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications