2021 ರಲ್ಲಿ 30 ಸಾವಿರ ಮಂದಿ ನೇಮಕಾತಿ ಘೋಷಿದ ಐಟಿ ಕಂಪನಿ
ಬೆಂಗಳೂರು, ಫೆಬ್ರವರಿ 26: ಕೊರೊನಾವೈರಸ್ ಸೋಂಕಿನ ಭೀತಿಯಲ್ಲೂ ಪ್ಯಾರೀಸ್ ಮೂಲದ ಕ್ಯಾಪ್ ಜೆಮಿನಿ ತನ್ನ ಉದ್ಯೋಗಿಗಳಿಗೆ ಸಂಬಳ ಏರಿಕೆ ಮಾಡಿತ್ತು. ಈಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. 2021ರಲ್ಲಿ ಸುಮಾರು 30, 000ಕ್ಕೂ ಅಧಿಕ ಮಂದಿಯನ್ನು ನೇಮಕ ಮಾಡಿಕೊಳ್ಳುತ್ತಿರುವುದಾಗಿ ಘೋಷಿಸಿದೆ.
ಐಟಿ ರಫ್ತು ಸೇವಾ ಸಂಸ್ಥೆ ಕ್ಯಾಪ್ ಜೆಮಿನಿ ಕೊವಿಡ್ 19 ಸಂದರ್ಭದಲ್ಲೂ ಉತ್ತಮ ಪ್ರಗತಿ ಕಂಡಿದ್ದು, ಹೊಸ ನೇಮಕಾತಿಗೆ ಮುಂದಾಗಿದೆ.
2021ರ ಆರ್ಥಿಕ ವರ್ಷಕ್ಕೆ ಶೇ 7 ರಿಂದ 9ರಷ್ಟು ಆದಾಯ ಪ್ರಗತಿ ಮಾರ್ಗದರ್ಶನ ನೀಡಲಾಗಿದೆ ಎಂದು ಕ್ಯಾಪ್ ಜೆಮಿನಿ ಭಾರತದ ಮುಖ್ಯ ಕಾರ್ಯಕಾರಿ ಅಧಿಕಾರಿ ಅಶ್ವಿನ್ ವೈ ಹೇಳಿದ್ದಾರೆ.

ಭಾರತದಲ್ಲಿ ನೇಮಕಾತಿ ಹೆಚ್ಚಳ
ಸರಿ ಸುಮಾರು 30,000 ಮಂದಿ ನೇಮಕವಾಗುತ್ತಿದ್ದು, ಫ್ರೆಶರ್ಸ್, ಮಧ್ಯಮ ಸ್ತರದ ಸಾಫ್ಟ್ ವೇರ್ ಇಂಜಿನಿಯರ್ಸ್ ಗಳಿಗೆ ಆದ್ಯತೆ ನೀಡಲಾಗುತ್ತದೆ. ಹೊಸ ಡಿಜಿಟಲ್ ತಂತ್ರಜ್ಞಾನ ಅಳವಡಿಕೆಗೆ ಪೂರಕವಾಗಿ ನೇಮಕಾತಿ ನಡೆಯಲಿದೆ ಎಂದು ಸಂಸ್ಥೆ ಹೇಳಿದೆ.
ಭಾರತದಲ್ಲಿ 1.2 ಲಕ್ಷ ಉದ್ಯೋಗಿಗಳನ್ನು ಕ್ಯಾಪ್ ಜೆಮಿನಿ ಹೊಂದಿದೆ. ಕಳೆದ ವರ್ಷ 12,000 ಮಂದಿಯನ್ನು ಭಾರತದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು.
ಕ್ಲೌಡ್ ಆಧಾರಿತ ಸೇವೆ, ರಿಮೋಟ್ ತಂತ್ರಜ್ಞಾನ ಸೇವೆ, ಸೈಬರ್ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದ್ದು, ಡಿಜಿಟಲ್ ಹಾಗೂ ಕ್ಲೌಡ್ ತಂತ್ರಜ್ಞಾನ ಕೌಶಲ್ಯ ಹೊಂದಿದವರಿಗೆ ಬೇಡಿಕೆ ಹೆಚ್ಚಿದೆ ಎಂದು ಮಾನವ ಸಂಪನ್ಮೂಲ ವಿಭಾಗದ ಅನಿಲ್ ಕುಮಾರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಹೀಥ್ರೂ ವಿಮಾನ ನಿಲ್ದಾಣ, ಏರ್ ಬಸ್ ಸ್ಕೈವೈಸ್, ಮರ್ಸೀಡಿಸ್ ಬೆಂಜ್ ಮುಂತಾದ ಸಂಸ್ಥೆಗಳನ್ನು ಗ್ರಾಹಕರಾಗಿ ಕ್ಯಾಪ್ ಜೆಮಿನಿ ಹೊಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications