ಪೆಟ್ರೋಲ್ ಪಂಪ್ ಗಳಲ್ಲಿ ಜ. 13ರವರೆಗೆ ಕಾರ್ಡ್ ಬಳಕೆ
ನವದೆಹಲಿ, ಜ. 9: ಪೆಟ್ರೋಲ್ ಪಂಪ್ ಗಳಲ್ಲಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಗಳ ಬಳಕೆಯನ್ನು ಜ. 13ರವರಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಜ. 13ರಂದು ನಡೆಯಲಿರುವ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘವು ತಿಳಿಸಿದೆ.
ಕಾರ್ಡ್ ಬಳಕೆ ಮೇಲೆ ಶೇ. 1ರಷ್ಟು ಶುಲ್ಕ ವಿಧಿಸುವ ಬ್ಯಾಂಕ್ ಗಳ ನಿಯಮವನ್ನು ವಿರೋಧಿಸಿ ಪೆಟ್ರೋಲ್ ಬಂಕ್ ಮಾಲೀಕರ ಸಂಘ ಕಾರ್ಡ್ ಬಳಕೆ ನಿಷೇಧದ ನಿರ್ಧಾರವನ್ನು ಭಾನುವಾರ ಘೋಷಿಸಿದ್ದವು.

ಅದರಂತೆ, ಭಾನುವಾರ ಮಧ್ಯರಾತ್ರಿಯಿಂದಲೇ ಬಂಕ್ ಗಳಲ್ಲಿ ಕಾರ್ಡ್ ಗಳ ಬಳಕೆ ಸ್ಧಗಿತಗೊಳ್ಳಬೇಕಿತ್ತು. ಆದರೆ, ತಮ್ಮ ಪಟ್ಟನ್ನು ಕೊಂಚ ಸಡಿಲಿಸಿರುವ ಬಂಕ್ ಮಾಲೀಕರ ಸಂಘ, ಜ. 13ರ ಮಧ್ಯರಾತ್ರಿಯವರೆಗೆ ಕಾರ್ಡುಗಳ ಬಳಕೆ ಮುಂದುವರಿಸಲು ನಿರ್ಧರಿಸಿದೆ.
ಬ್ಯಾಂಕ್ ಗಳ ನಕಾರ: ಏತನ್ಮಧ್ಯೆ, ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಬೇಡಿಕೆಯಂತೆ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡುಗಳ ಬಳಕೆ ಮೇಲೆ ವಿಧಿಸಲಾಗುತ್ತಿರುವ ಶೇ. 1ರಷ್ಟು ಶುಲ್ಕವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬ್ಯಾಂಕ್ ಗಳು ಸ್ಪಷ್ಟಪಡಿಸಿವೆ.
ಗ್ರಾಹಕರಿಗೆ ಸಂಕಷ್ಟ?: ಆದರೆ ಇನ್ನು ಮುಂದೆ ಪೆಟ್ರೋಲ್ ಬಂಕ್ ಗಳ ಮಾಲೀಕರಂತೆ ಇತರ ಅಗತ್ಯ ವಸ್ತು ಮಾರಾಟಗಾರರೂ ಇದೇ ಹಠ ಹಿಡಿದರೆ ಗ್ರಾಹಕರಿಗೆ ಮತ್ತೊಂದು ಸಂಕಷ್ಟ ಒದಗಲಿದೆ.
ಇದೀಗ, ಬ್ಯಾಂಕುಗಳಲ್ಲಿ, ಎಟಿಎಂಗಳಲ್ಲಿ ತಮಗೆ ಅವಶ್ಯಕತೆಯಿರುವಷ್ಟು ಹಣ ಸಿಗುತ್ತಿಲ್ಲವಾದರೂ, ಕಾರ್ಡು ಬಳಕೆಯಿರುವುದರಿಂದ ಜನರು ಕೊಂಚ ನೆಮ್ಮದಿಯಿಂದ ಇದ್ದಾರೆ. ಇದೀಗ ಕಾರ್ಡು ಬಳಕೆ ಸಾಧ್ಯವಿಲ್ಲಎಂದಾದರೆ, ಗ್ರಾಹಕರು ಸಂಕಷ್ಟ ಎದುರಿಸಲಿದ್ದಾರೆ.
-
ಮಧ್ಯಪ್ರಾಚ್ಯ ಯುದ್ಧ: ಗ್ಯಾಸ್ ಸಿಲಿಂಡರ್, ಪೆಟ್ರೋಲ್ - ಡಿಸೇಲ್ ಸೇರಿದಂತೆ ಪ್ರಮುಖ ವಸ್ತುಗಳ ಬಗ್ಗೆ ಕೇಂದ್ರದಿಂದ ಮಹತ್ವದ ಆದೇಶ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications