ಕ್ಯಾಡ್ಬರಿ ಚಾಕೊಲೇಟ್ ಕಂಪೆನಿ ವಿರುದ್ಧ ಸಿಬಿಐ ಎಫ್ಐಆರ್
ನವದೆಹಲಿ, ಮಾರ್ಚ್ 18: ಹಿಮಾಚಲ ಪ್ರದೇಶದಲ್ಲಿನ ತನ್ನ ಕಾರ್ಖಾನೆಗಾಗಿ 2009-10ರಲ್ಲಿ ಪರವಾನಗಿ ಪಡೆದುಕೊಳ್ಳುವಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿದ ಆರೋಪದಲ್ಲಿ ಕ್ಯಾಡ್ಬರಿ ಇಂಡಿಯಾ ಲಿ. ಮತ್ತು ಕೇಂದ್ರ ಅಬಕಾರಿ ತೆರಿಗೆ ಅಧಿಕಾರಿಗಲ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಹಿಮಾಚಲ ಪ್ರದೇಶದಲ್ಲಿ ಕ್ಯಾಡ್ಬರಿ ಇಂಡಿಯಾ (ಈಗ ಮೊಂಡೊಲೆಜ್ ಫುಡ್ಸ್ ಪ್ರೈ ಲಿ) ಹೊಸ ಚಾಕೊಲೇಟ್ ಉತ್ಪಾದನಾ ಘಟಕಕ್ಕೆ ಪರವಾನಗಿ ಪಡೆಯಲು 241 ಕೋಟಿ ರೂ ತೆರಿಗೆ ವಿನಾಯಿತಿ ಪಡೆದುಕೊಳ್ಳಲು ಅಲ್ಲಿನ ಅಬಕಾರಿ ಇಲಾಖೆ ಅಧಿಕಾರಿಗಳ ಜತೆ ಸಂಚು ನಡೆಸಿತ್ತು ಎಂದು ಆರೋಪಿಸಲಾಗಿದೆ. ಮುಂಬೈ, ಪಂಜಾಬ್, ಹಿಮಾಚಲಪ್ರದೇಶದ ಸುಮಾರು ಆರು ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಗಳನ್ನು ಮಾಡಿದ್ದರು.
ಹಿಮಾಚಲ ಪ್ರದೇಶದ ಬಡ್ಡಿ ಪ್ರದೇಶದಲ್ಲಿ ನಿರ್ಮಿಸಿದ್ದ ಘಟಕದಲ್ಲಿ 5 ಸ್ಟಾರ್ ಮತ್ತು ಜೆಮ್ಸ್ ಚಾಕೋಲೇಟ್ಗಳನ್ನು ಉತ್ಪಾದನೆ ಮಾಡಲಾಗುತ್ತಿತ್ತು. ಕ್ಯಾಡ್ಬರಿ ಇಂಡಿಯಾ ಲಿ.ಯ ಅಧಿಕಾರಿಗಳು, ಕೇಂದ್ರ ಅಬಕಾರಿ ಇಲಾಖೆಯ ಸುಪರಿಂಟೆಂಡೆಂಟ್ ನಿರ್ಮಲ್ ಸಿಂಗ್, ಇನ್ಸ್ಪೆಕ್ಟರ್ ಜಸ್ಪ್ರೀತ್ ಕೌರ್ ಸೇರಿದಂತೆ ಹತ್ತು ಮಂದಿಯನ್ನು ಸಿಬಿಐ ಆರೋಪಿಗಳನ್ನಾಗಿ ಹೆಸರಿಸಿದೆ.

ಪ್ರಾದೇಶಿಕ ಆಧಾರಿತ ಅಬಕಾರಿ ಸುಂಕ ಮತ್ತು ಆದಾಯ ತೆರಿಗೆಗಳಿಂದ ವಿನಾಯಿತಿ ಪಡೆಯುವ ಸಲುವಾಗಿ ಮೊಂಡೆಲೆಜ್ ಫುಡ್ಸ್ ಪ್ರೈ ಲಿ. ಸುಳ್ಳು ಮಾಹಿತಿಗಳು, ತಿರುಚಿದ ದಾಖಲೆಗಳು ಹಾಗೂ ಲಂಚಗಳನ್ನು ನೀಡಿತ್ತು ಎಂದು ಸಿಬಿಐನ ಶಿಮ್ಲಾ ಶಾಖೆಯ ಭ್ರಷ್ಟಾಚಾರ ನಿಯಂತ್ರಣ ಶಿಮ್ಲಾ ಘಟಕದ ಅಧಿಕಾರಿಗಳು ಎಫ್ಐಆರ್ನಲ್ಲಿ ದಾಖಲಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications