ಯೆಸ್ ಬ್ಯಾಂಕ್ ಹಣಕಾಸು ಅವ್ಯವಹಾರ ಪ್ರಕರಣ: ಮೊದಲ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ನವದೆಹಲಿ, ಜೂನ್ 25: ಯೆಸ್ ಬ್ಯಾಂಕ್ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ, ಸಂಸ್ಥಾಪಕ ರಾಣಾ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಎಂಟು ಘಟಕಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಚಾರ್ಜ್ಶೀಟ್ ದಾಖಲಿಸಿದೆ. ಇತರ ಆರೋಪಿಗಳಲ್ಲಿ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮತ್ತು ಪ್ರವರ್ತಕರಾದ ಕಪಿಲ್ ವಾಧವನ್ ಮತ್ತು ಧೀರಜ್ ವಾಧವನ್ ಸೇರಿದ್ದಾರೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಯಕ್ತಿಕ ಸಂತೃಪ್ತಿಯ ಬದಲಾಗಿ ಸಾಲಗಾರರನ್ನು ಆಯ್ಕೆ ಮಾಡಲು ಬ್ಯಾಂಕ್ ಹೆಚ್ಚಿನ ಮೌಲ್ಯದ ಸಾಲಗಳನ್ನು ವಿಸ್ತರಿಸಿದೆ ಎಂದು ಆರೋಪಿಸಲಾಗಿದೆ. 100 ಪುಟಗಳ ಚಾರ್ಜ್ಶೀಟ್ನಲ್ಲಿ ಈ ಘಟಕಗಳ ವಿರುದ್ಧದ ಆರೋಪಗಳು, ಮೋಸ, ವಂಚನೆ, ಪಿತೂರಿ, ಭ್ರಷ್ಟಾಚಾರ ಮತ್ತು ಸಾಲ ನೀಡುವ ಮಾನದಂಡಗಳ ಉಲ್ಲಂಘನೆಯನ್ನು ಒಳಗೊಂಡಿರುತ್ತದೆ.
ಯೆಸ್ ಬ್ಯಾಂಕ್ ಕೇಸ್: ಮುಂಬೈನ 5 ಸ್ಥಳಗಳ ಮೇಲೆ ದಾಳಿ ನಡೆಸಿದ ಇಡಿ
ರಾಣಾ ಕಪೂರ್ ಅವರು ಕಪಿಲ್ ಮತ್ತು ಧೀರಜ್ ವಾಧವನ್ ಅವರೊಂದಿಗೆ ಡಿಎಚ್ಎಫ್ಎಲ್ಗೆ ಹೆಚ್ಚಿನ ಮೌಲ್ಯದ ಸಾಲವನ್ನು ವಿಸ್ತರಿಸಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದೆ.
ಹಗರಣ ಕುರಿತು ಸಿಬಿಐ ಮಾರ್ಚ್ 7 ರಂದು ಪ್ರಕರಣವನ್ನು ದಾಖಲಿಸಿತ್ತು, ಅದು 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ ಹಗರಣ ಪೀಡಿತ ಡಿಎಚ್ಎಫ್ಎಲ್ನ ಅಲ್ಪಾವಧಿಯ ಡಿಬೆಂಚರ್ಗಳಲ್ಲಿ 3,700 ಕೋಟಿ ಹೂಡಿಕೆ ಮಾಡಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಯಾಗಿ, ವಾಧವಾನ್ಸ್ ಮಾಜಿ ಯೆಸ್ ಬ್ಯಾಂಕ್ ಸಿಇಒ ರಾಣಾ ಕಪೂರ್ ಮತ್ತು ಅವರ ಕುಟುಂಬ ಸದಸ್ಯರಿಗೆ ಡೊಯಿಟ್ ಅರ್ಬನ್ ವೆಂಚರ್ಸ್ ಲಿಮಿಟೆಡ್ಗೆ ಸಾಲ ರೂಪದಲ್ಲಿ '600 ಕೋಟಿ ಕಿಕ್ಬ್ಯಾಕ್ ಪಾವತಿಸಿದ್ದಾರೆ' ಎಂದು ಆರೋಪಿಸಲಾಗಿದೆ.
ಮಾರ್ಚ್ 9 ರಂದು ಕಪೂರ್ ಕುಟುಂಬ ಸದಸ್ಯರ ಮನೆಯಲ್ಲಿ ಹುಡುಕಾಟ ನಡೆಸಲಾಯಿತು. ಮೇ 6 ರಂದು ಇಡಿ ಮನಿ ಲಾಂಡರಿಂಗ್ ಆರೋಪದ ಮೇಲೆ ಯೆಸ್ ಬ್ಯಾಂಕ್ನಲ್ಲಿ ಚಾರ್ಜ್ಶೀಟ್ ಸಲ್ಲಿಸಿತ್ತು. ಮೋಸದ ವ್ಯವಹಾರಗಳ ಗಾತ್ರವನ್ನು, 5,050 ಕೋಟಿ ರುಪಾಯಿ ಎಂದು ಸಂಸ್ಥೆ ಅಂದಾಜಿಸಿದೆ.