ಕೆನರಾ ಬ್ಯಾಂಕ್ ವಂಚನೆ ಕೇಸ್: ಯೂನಿಟೆಕ್ ಎಂಡಿ ವಿರುದ್ಧ ಸಿಬಿಐ ಕೇಸ್
ಬೆಂಗಳೂರು, ಡಿ. 7: ಕೆನರಾಬ್ಯಾಂಕಿಗೆ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಟೆಕ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.
ಯೂನಿಟೆಕ್ ಎಂಡಿ ಸಂಜಯ್ ಚಂದ್ರ, ಅವರ ತಂದೆ ರಂಏಶ್ ಚಂದ್ರ ಹಾಗೂ ಸೋದರ ಅಜಯ್ ಅವರ ವಿರುದ್ಧ ಕೆನರಾ ಬ್ಯಾಂಕಿಗೆ 198 ಕೋಟಿ ರು ವಂಚನೆ ಮಾಡಿದ ಆರೋಪದ ಮೇಲೆ ಸಿಬಿಐ ಪ್ರಕರಣಾ ದಾಖಲಿಸಿಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸೇರಿದ ಹಲವು ಕಚೇರಿ, ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರದಂದು ಸಂಜಯ್ ಚಂದ್ರ ಅವರು 43 ತಿಂಗಳುಗಳ ಬಳಿಕ ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಗ ಸಿಬಿಐ ಹೊಸದಾಗಿ ಪ್ರಕರಣ ದಾಖಲಿಸಿ ಆಘಾತ ನೀಡಿದೆ. ಯೂನಿಟೆಕ್ ವಿರುದ್ಧ ದೆಹಲಿ ಪೊಲೀಸ್, ಸಿಬಿಐ ಅಲ್ಲದೆ ಜಾರಿ ನಿರ್ದೇಶನಾಲಯ ಕೂಡಾ ತನಿಖೆ ನಡೆಸುತ್ತಿವೆ. 2ಜಿ ತರಂಗಗುಚ್ಛ ಹಂಚಿಕೆ ಪ್ರಕರಣದಲ್ಲೂ ಚಂದ್ರ ಅವರ ಹೆಸರು ಕಾಣಿಸಿಕೊಂಡಿತ್ತು. ಆದರೆ, ನ್ಯಾಯಾಲಯದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ.

ಚಂದ್ರ ಅವರ ವೈಯಕ್ತಿಕ ಗ್ಯಾರಂಟಿ ಆಧಾರದ ಮೇಲೆ ಕ್ರೆಡಿಟ್ ಸೌಲಭ್ಯಗಳನ್ನು ಕೆನರಾ ಬ್ಯಾಂಕಿನಿಂದ ಪಡೆದುಕೊಂಡು ವಂಚಿಸಲಾಗಿದೆ ಎಂಬ ಆರೋಪವಿದೆ. ಬೇಡಿಕೆ ತಗ್ಗಿದ ಸಂದರ್ಭದಲ್ಲಿ ಪೇಮೆಂಟ್ ಮಾಡದೆ ವಂಚಿಸಲಾಗಿದೆ ಎಂಬುದು ಆಡಿಟ್ ಸಂದರ್ಭದಲ್ಲಿ ತಿಳಿದು ಬಂದಿದೆ.
''29,800 ಗೃಹ ಖರೀದಿದಾರರಿಂದ 1,4270 ಕೋಟಿ ರು ಸಂಗ್ರಹವಾಗಿತ್ತು ಆದರೆ, 5063.05 ಕೋಟಿ ರು ಬಳಕೆಯಾಗಿಲ್ಲ, 74 ಯೋಜನೆಗಳಿಗೆ ಇದನ್ನು ಬಳಸಬೇಕಾಗಿತ್ತು'' ಎಂದು ಬ್ಯಾಂಕ್ ದೂರಿದೆ. ಒಟ್ಟಾರೆ, 198 ಕೋಟಿ ರುಗೂ ಅಧಿಕ ಸಾರ್ವಜನಿಕರ ಹಣವನ್ನು ಯೂನಿಟೆಕ್ ಸಂಸ್ಥ ದುರುಪಯೋಗ ಮಾಡಿಕೊಂಡು ವಂಚಿಸಿದೆ ಎಂದು ಆರೋಪಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications