30 ಲಕ್ಷದ ಆಸ್ತಿ ಖರೀದಿಗೆ ಮುನ್ನ ಇದನ್ನು ಓದಿ
ನವದೆಹಲಿ, ಜನವರಿ, 05: : ಇನ್ನು ಮುಂದೆ 30 ಲಕ್ಷ ರು. ಹೆಚ್ಚಿನ ಮೊತ್ತದ ಸ್ಥಿರಾಸ್ತಿಗಳ ಖರೀದಿ ಮತ್ತು ಮಾರಾಟವನ್ನು ನೋಂದಣಿ ಅಧಿಕಾರಿಗಳು, ಆದಾಯ ತೆರಿಗೆ ಅಧಿಕಾರಿಗಳ ಗಮನಕ್ಕೆ ತರಬೇಕಾಗುತ್ತದೆ. 2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಸರಕು ಮತ್ತು ಸೇವೆಗಳ ಮಾರಾಟದ ಬಗ್ಗೆಯೂ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ.
ದೇಶದಲ್ಲಿ ಕಪ್ಪು ಹಣದ ಚಲಾವಣೆಗೆ ಕಡಿವಾಣ ಹಾಕಲು ನೇರ ತೆರಿಗೆ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಹೊಸ ನಿಯಮಗಳನ್ನು ಏಪ್ರಿಲ್ 1, 2016 ರಿಂದ ಜಾರಿಗೆ ತರಲಿದೆ. ಅಂದರೆ ಹೊಸ ಹಣಕಾಸು ವರ್ಷದಿಂದ ನಿಮ್ಮ ಪ್ರತಿಯೊಂದು ದೊಡ್ಡ ಮೊತ್ತದ ಹಣಕಾಸು ಚಲಾವಣೆಯನ್ನು ದಾಖಲು ಮಾಡಬೇಕಾಗುತ್ತದೆ.[ಬಿಡಿಎ ಮನೆ ಕೊಳ್ಳುವ ನಿಮ್ಮ ಕನಸು ಸದ್ಯದಲ್ಲೇ ನನಸು!]

ಗರಿಷ್ಠ ಮೊತ್ತದ ವಹಿವಾಟು ಮತ್ತು ನಗದು ಪಡೆದ ವಿವರಗಳನ್ನು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕಾಗುತ್ತದೆ. ನಗದು ಸ್ವೀಕಾರ, ಷೇರು - ಮ್ಯುಚುವಲ್ ಫಂಡ್ ಖರೀದಿ, ನಿಶ್ಚಿತ ಠೇವಣಿ, ಸ್ಥಿರಾಸ್ತಿ, ಮತ್ತು ವಿದೇಶಿ ಕರೆನ್ಸಿ ಮಾರಾಟದ ಬಗ್ಗೆ ತಿಳಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆಗೆ 'ಫಾರ್ಮ್ 61ಎದಲ್ಲಿ (Form 61A) ಸಂಪೂರ್ಣ ವಿವರ ನೀಡಬೇಕಾಗುತ್ತದೆ.[ಸ್ವಿಸ್ ಬ್ಯಾಂಕಲ್ಲಿ ಅತ್ತೆ-ಸೊಸೆಯರ ಭರ್ಜರಿ ಜುಗಲಬಂದಿ]
ಹಣಕಾಸು ವರ್ಷವೊಂದರಲ್ಲಿ ವ್ಯಕ್ತಿಯೊಬ್ಬ ಒಂದು ಅಥವಾ ಹೆಚ್ಚಿನ ಖಾತೆಗಳಲ್ಲಿ 10ಲಕ್ಷ ರು. ಮತ್ತು ಅಧಿಕ ಮೊತ್ತವನ್ನು ಠೇವಣಿ ಇರಿಸಿದರೆ ಅದನ್ನು ಬ್ಯಾಂಕ್ಗಳು ತೆರಿಗೆ ಇಲಾಖೆಯ ಗಮನಕ್ಕೆ ನೀಡಬೇಕಾಗುತ್ತದೆ. ಇದು ಅಂಚೆ ಕಚೇರಿಯ ಠೇವಣಿಗಳು ಮತ್ತು ಹಣ ಮರಳಿ ಪಡೆಯುವುದಕ್ಕೂ ಅನ್ವಯಿಸಲಿವೆ ಎಂದು ಹಣಕಾಸು ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಿದೆ.[ಸ್ವಿಸ್ ಲೀಕ್ ಪಟ್ಟಿಯಲ್ಲಿರುವ 100 ಜನ ವಂಚಕರು]
ಕ್ರೆಡಿಟ್ ಕಾರ್ಡ್ ಗೂ ನಿಯಮ
ಹಣಕಾಸು ವರ್ಷದಲ್ಲಿ ಒಂದು ಅಥವಾ ಹೆಚ್ಚು ಕ್ರೆಡಿಟ್ ಕಾರ್ಡ್ಗಳ ಮೂಲಕ 2ಲಕ್ಷ ರು. ಮತ್ತು ಅದಕ್ಕಿಂತ ಹೆಚ್ಚು ಮೊತ್ತದ ಬಿಲ್ ಪಾವತಿ ಮಾಡಿರುವುದನ್ನು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ತರಬೇಕು. ಕಪ್ಪು ಹಣದ ಹರಿವು ತಡೆಯಲು ರಿಸರ್ವ್ ಬ್ಯಾಂಕ್ ಮತ್ತು ತೆರಿಗೆ ಇಲಾಖೆ ಈ ಬಗೆಯ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications