ಗ್ರಾಹಕರಿಗೆ ಸಿಹಿ ಸುದ್ದಿ: ಖಾದ್ಯ ತೈಲಗಳ ಮೇಲೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 14: ಸರಕುಗಳ ಜಾಗತಿಕ ಬೆಲೆ ಏರಿಕೆಯಿಂದ ದೇಶದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ ಖಾದ್ಯ ತೈಲಗಳ ಆಮದು ಸುಂಕವನ್ನು ಕಡಿತಗೊಳಿಸಿದೆ.
ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ.
ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ.2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ.20ರಿಂದ ಶೇ.7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಸಿಗಲಿದೆ.

ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಎರಡರ ಮೇಲಿನ ಕೃಷಿ ಸೆಸ್ ಅನ್ನು ಶೇ.20ರಿಂದ ಶೇ.5ಕ್ಕೆ ಇಳಿಸಲಾಗಿದೆ. ಈ ಎಲ್ಲ ಬದಲಾವಣೆಗಳು ಗುರುವಾರದಿಂದ (ಅಕ್ಟೋಬರ್ 14, 2021ರಿಂದ 2022ರ ಮಾರ್ಚ್ ಅಂತ್ಯದವರೆಗೆ) ಜಾರಿಯಲ್ಲಿರುತ್ತವೆ ಎಂದು ಆದೇಶಗಳಲ್ಲಿ ಹೇಳಲಾಗಿದೆ.
ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್ಬಿಡಿ) ಪಾಮ್ ಆಯಿಲ್, ಆರ್ಬಿಡಿ ಪಾಮೋಲಿನ್, ಆರ್ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ.32.5ರಿಂದ ಶೇ.17.5ಕ್ಕೆ ಕಡಿಮೆ ಮಾಡಲಾಗಿದೆ.
ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ಹೆಚ್ಚಿನ ಬೆಲೆಗಳು ದೇಶೀಯ ಬೆಲೆಯ ಮೇಲೆ ಗಣನೀಯ ಪರಿಣಾಮ ಬೀರುತ್ತವೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ತೈಲಗಳು ಮತ್ತು ಫ್ಯಾಟ್ ಹಣದುಬ್ಬರವು ಸೆಪ್ಟೆಂಬರ್ನಲ್ಲಿ ವರ್ಷದಿಂದ ವರ್ಷಕ್ಕೆ ಶೇ.34.19 ಹೆಚ್ಚಾಗಿದೆ ಎಂದು ಅಂಕಿ- ಅಂಶಗಳ ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ತಿಳಿದುಬಂದಿದೆ.

ಗ್ರಾಹಕರ ಆಹಾರ ಬೆಲೆ ಸೂಚ್ಯಂಕವನ್ನು ಆಧರಿಸಿದ ಒಟ್ಟಾರೆ ಆಹಾರ ಹಣದುಬ್ಬರವು ಸೆಪ್ಟೆಂಬರ್ನಲ್ಲಿ ಶೇ.0.68ರಷ್ಟಿತ್ತು. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ.10.68ರಷ್ಟಿತ್ತು.
ಆಮದು ಸುಂಕವನ್ನು ಕಡಿಮೆ ಮಾಡುವುದು ಖಾದ್ಯ ತೈಲ ಬೆಲೆಗಳನ್ನು ಇಳಿಕೆ ಮಾಡುವ ಸರ್ಕಾರದ ಪ್ರಮುಖ ಕಾರ್ಯತಂತ್ರದ ಒಂದು ಭಾಗವಾಗಿದೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರವು ಪ್ರಸ್ತುತ ರಾಷ್ಟ್ರೀಯ ಪ್ರಾಯೋಜಿತ ಯೋಜನೆ ಮಿಷನ್ ಆನ್ ಎಡಿಬಲ್ ಆಯಿಲ್ಸ್-ಆಯಿಲ್ ಪಾಮ್ (NMEO-OP) ಎಂದು ಕರೆಯುತ್ತಿದೆ. ಅಂದಹಾಗೆ ಮಲೇಷ್ಯಾ ಮತ್ತು ಇಂಡೋನೇಷ್ಯಾ ದೇಶಗಳು ಭಾರತದ ಖಾದ್ಯ ತೈಲ ಆಮದುಗಳ ಪ್ರಮುಖ ದೇಶಗಳಾಗಿವೆ.
ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ
2022ರ ಮಾರ್ಚ್ 31ರವರೆಗೆ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಪರವಾನಗಿಗಳ ಅಗತ್ಯತೆಗಳನ್ನು ತೆಗೆದು ಹಾಕುವುದು, ದಾಸ್ತಾನು ಮಿತಿ ಮತ್ತು ನಿರ್ದಿಷ್ಟ ಆಹಾರ ಉತ್ಪನ್ನಗಳ ಸಾಗಾಣೆಗೆ ನಿರ್ಬಂಧ (ತಿದ್ದುಪಡಿ) ಆದೇಶ- 2021 ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂದರೆ 2021ರ ಸೆಪ್ಟೆಂಬರ್ 8ರಿಂದ ಅನ್ವಯವಾಗುವಂತೆ ಹೊರಡಿಸಲಾಗಿದೆ. ಭವಿಷ್ಯದ ವ್ಯಾಪಾರದಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆ ಬೀಜಗಳನ್ನು ಎನ್ಸಿಡಿಇಎಕ್ಸ್ನಿಂದ ಅಮಾನತು ಮಾಡಲಾಗಿದ್ದು, ಅದು 2021ರ ಅಕ್ಟೋಬರ್ 8ರಿಂದ ಜಾರಿಗೆ ಬಂದಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಮತ್ತಷ್ಟು ಕುಸಿತವಾಗಲಿದ್ದು, ಆ ಮೂಲಕ ದೇಶಾದ್ಯಂತ ಗ್ರಾಹಕರಿಗೆ ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ಕೊಂಚ ನಿರಾಳತೆ ಸಿಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಗಳ ಬೆಲೆ ಏರಿಕೆಯಾಗಿರುವುದು ದೇಶೀಯವಾಗಿ ಖಾದ್ಯ ತೈಲಗಳ ಬೆಲೆ ಮೇಲೂ ಗಮನಾರ್ಹ ಪರಿಣಾಮ ಬೀರಿತ್ತು.
ಇದೀಗ ಭಾರತ ಸರ್ಕಾರ ಖಾದ್ಯ ತೈಲದಂತಹ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಲು ಬಹುಹಂತದ ಕಾರ್ಯತಂತ್ರವನ್ನು ರೂಪಿಸಿದೆ. ಆಮದು ಸುಂಕ ವ್ಯವಸ್ಥೆ ಏಕರೂಪಗೊಳಿಸುವುದು, ದಾಸ್ತಾನುಗಾರರು ತಮ್ಮ ಬಳಿ ಹೊಂದಿರುವ ದಾಸ್ತಾನುಗಳನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್ ಪೋರ್ಟಲ್ ಆರಂಭ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಖಾದ್ಯ ತೈಲಗಳ ಬೆಲೆಯನ್ನು ದೇಶೀಯವಾಗಿ ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ನಡೆಸುತ್ತಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ಎಲ್ಲ ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗಿದೆ. ಈ ಆದೇಶದಡಿ ಖಾದ್ಯ ತೈಲಗಳು ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿಯನ್ನು ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಿರ್ಧರಿಸಲಿವೆ.
-
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications