ಧಾನ್ಯಗಳ ದರ ಕೊಂಚ ಇಳಿಕೆ, ಈರುಳ್ಳಿ ದಿಢೀರ್ ಕುಸಿತ
ನವದೆಹಲಿ, ಅಕ್ಟೋಬರ್. 20: ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದ್ದ ಬೆಳೆ ಕಾಳುಗಳ ದರದಲ್ಲಿ ಕೊಂಚ ಇಳಿಕೆಯಾಗಿದೆ. ಬೇಳೆಕಾಳುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತುರ್ತು ಕ್ರಮ ಘೊಷಿಸಿದ ಮರುದಿನವೇ ಬೆಲೆ ಇಳಿಕೆ ಕಂಡಿದೆ.
ಕೆಜಿಗೆ 200 ರು. ತಲುಪಿರುವ ತೊಗರಿ ಬೆಳೆ ಇಳಿಕೆಯ ಹಾದಿಗೆ ಮರಳಿಲ್ಲ. ಉದ್ದಿನ ಬೆಳೆ ಸಹ ಕೆಜಿಗೆ 150 ರು. ದಲ್ಲಿ ಮಾರಾಟವಾಗುತ್ತಿದೆ. ಉದ್ದು, ಹೆಸರು, ತೊಗರಿ ಬೆಳೆಗಳು ದೆಹಲಿ ಮಾರುಕಟ್ಟೆಯಲ್ಲಿ ಕೊಂಚ ಇಳಿಕೆ ಸಾಧಿಸಿವೆ. ಅಕ್ಟೋಬರ್ 18ಕ್ಕೆ ಹೋಲಿಕೆ ಮಾಡಿದರೆ ಕ್ವಿಂಟಾಲ್ ಗೆ 500 ರು. ಕಡಿಮೆಯಾಗಿದೆ.[ಕಣ್ಣೀರುಳ್ಳಿ: ಸಾಮಾಜಿಕ ತಾಣದಲ್ಲಿ ಕಂಡಿದ್ದು, ಕೇಳಿದ್ದು]

ದರ ಇನ್ನಷ್ಟು ಕಡಿಮೆಯಾಗಲಿದ್ದರೂ ಸಹ ಚಿಲ್ಲರೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಲು ಒಂದೆರಡು ವಾರ ತೆಗೆದುಕೊಳ್ಳಬಹುದು.
ಸೋಮವಾರದ ದರ(ಕ್ವಿಂಟಾಲ್ ಗೆ)
* ಉದ್ದು: 9500-10500
* ಹೆಸರು: 7600-8200
* ತೊಗರಿ : 12500-12800
ಈರುಳ್ಳಿ ದರ ದಿಢೀರ್ ಕುಸಿತ
ರಫ್ತು ಸ್ಥಗಿತ ಹಾಗೂ ದಾಖಲೆ ಪ್ರಮಾಣದ ಆವಕದಿಂದಾಗಿ ಈರುಳ್ಳಿ ಬೆಲೆ ಏಕಾಏಕಿ ಕುಸಿದಿದೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಕಾರಣ ಕೋಲ್ಕತ್ತಾ, ಮೆಹದಿಪುರ ಹಾಗೂ ಹೀಲಿ ಗಡಿ ಮೂಲಕ ವ್ಯವಹಾರ ಸ್ಥಗಿತ ಮಾಡಲಾಗಿದ್ದು ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ಸ್ಥಗಿತಗೊಂಡಿದೆ. ಹೊಸ ಬೆಳೆ ಕೈಗೆ ಬಂದಿದ್ದು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಈರುಳ್ಳಿ ಆಗಮಿಸಿದೆ. ಕ್ವಿಂಟಾಲ್ ಗೆ 3,800 ಎಉ. ಇದ್ದ ಈರುಳ್ಳಿ ಏಕಾಏಕಿ 2,500ಕ್ಕೆ ಕುಸಿದಿದೆ. ದರ ಇಳಿಕಯನ್ನು ಖಂಡಿಸಿ ರೈತರು ಪ್ರತಿಭಟನೆಯನ್ನು ಆರಂಭ ಮಾಡಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications