ತೈಲದ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದು ಯಾಕೆ?
ನವದೆಹಲಿ, ಡಿಸೆಂಬರ್, 16(ಪಿಟಿಐ): ಜನರ ಮೂಗಿಗೆ ತೈಲ ಕಂಪನಿಗಳು ತುಪ್ಪ ಸವರಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 30 ಪೈಸೆ ಮತ್ತು ಪ್ರತಿ ಲೀಟರ್ ಡೀಸಲ್ ಮೇಲೆ 1.17 ರು. ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ.
ಈ ಹೆಚ್ಚಳದಿಂದ ಮೂಲ ಅಬಕಾರಿ ಸುಂಕ ಪೆಟ್ರೊಲ್ ಗೆ 7.06 ರು. ಆದರೆ ಡೀಸೆಲ್ ಗೆ 5.83 ರು. ಆಗುತ್ತದೆ. ಈ ಅಬಕಾರಿ ಸುಂಕ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ 2,500 ಸಾವಿರ ಕೋಟಿ ಆದಾಯ 2015-16 ರ ಹಣಕಾಸು ವರ್ಷದಲ್ಲಿ ಬರಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.[ಜನರ ಮೂಗಿಗೆ ತುಪ್ಪ ಸವರಿದ ತೈಲ ಕಂಪನಿಗಳು]

ಕಳೆದ ಆರು ವಾರಗಳಲ್ಲಿ ಎರಡನೇ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ನವೆಂಬರ್ 7 ರಂದು ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಗೆ ರು.1.60 ಮತ್ತು ಪ್ರತಿ ಲೀಟರ್ ಡೀಸಲ್ ಮೇಲೆ 40 ಪೈಸೆ ಹೆಚ್ಚಳ ಮಾಡಲಾಗಿತ್ತು.[ಲೀಟರ್ ಪೆಟ್ರೋಲ್ಗೆ ಎಷ್ಟು ಕೊಡ್ತಾ ಇದೀರಿ? ಈ ಲೆಕ್ಕ ನೋಡಿ]
ಕೇಂದ್ರ ಸರ್ಕಾರ ಒಟ್ಟು ಕಳೆದ ಹಣಕಾಸು ವರ್ಷದಲ್ಲಿ 99,184 ಕೋಟಿ ರು. ಸಂಗ್ರಹ ಮಾಡಿತ್ತು. ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 33,042 ಕೋಟಿ ಸಂಗ್ರಹ ಮಾಡಿದೆ.
ಕೇಂದ್ರ ಸರ್ಕಾರ ಆದಾಯ ಸಂಗ್ರಹಣೆ ಉದ್ದೇಶದಿಂದ ಆಗಾಗ ಅಬಕಾರಿ ಸುಂಕ ಹೆಚ್ಚಳ ಮಾಡುವುದು ಸಾಮಾನ್ಯ. ಅಲ್ಲದೇ ಕೋಲ್ ಇಂಡಿಯಾದ ಅಪಾರ ಪ್ರಮಾಣದ ಷೇರುಗಗಳನ್ನು ಮಾರಾಟ ಮಾಡಿತ್ತು. ತರಂಗಾಂತರ ಹಂಚಿಕೆಯಿಂದಲೂ ಆದಾಯ ಗಳಿಸಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಮುಖವಾಗಿದ್ದರೂ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವುದರಿಂದ ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ದರದಲ್ಲಿ ಗಣನೀಯ ಪ್ರಮಾಣದ ಇಳಿಕೆ ಅಸಾಧ್ಯ ಎಂದೇ ವಿಶ್ಲೇಷಣೆ ಮಾಡಲಾಗಿದೆ.
-
ಮಧ್ಯಪ್ರಾಚ್ಯ ಯುದ್ಧ: ಗ್ಯಾಸ್ ಸಿಲಿಂಡರ್, ಪೆಟ್ರೋಲ್ - ಡಿಸೇಲ್ ಸೇರಿದಂತೆ ಪ್ರಮುಖ ವಸ್ತುಗಳ ಬಗ್ಗೆ ಕೇಂದ್ರದಿಂದ ಮಹತ್ವದ ಆದೇಶ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications