ಆದಾಯ ಕಡಿಮೆಯಾಗದಂತೆ ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಸಲು ಇದೆ ಅವಕಾಶ
ನವದೆಹಲಿ, ಮಾರ್ಚ್ 3: ಪೆಟ್ರೋಲ್ ಮತ್ತು ಡೀಸೆಲ್ ದರವು ನಿರಂತರ ಏರಿಕೆಯಿಂದ ಸಾರ್ವಕಾಲಿಕ ದಾಖಲೆಯತ್ತ ಸಾಗಿದೆ. ಕಳೆದ ಒಂಬತ್ತು ತಿಂಗಳಿನಿಂದ ತೈಲ ಬೆಲೆ ಹೆಚ್ಚಳವಾಗುತ್ತಲೇ ಇದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 91.17 ರೂ ಇದ್ದರೆ, ಡೀಸೆಲ್ ದರ ಲೀಟರ್ಗೆ 81.47 ರೂಪಾಯಿಗೆ ತಲುಪಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಂಡುಬಂದಿದ್ದರಿಂದ ತೈಲ ಮಾರುಕಟ್ಟೆ ಕಂಪೆನಿಗಳು ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ.
ಕಳೆದ ಎರಡು ವಾರಗಳಲ್ಲಿ ಜಾಗತಿಕ ತೈಲ ದರವು ಬ್ಯಾರೆಲ್ಗೆ 67 ಡಾಲರ್ಗೆ ತಲುಪಿತ್ತು. ಆದರೆ ಈಗ ಅದು ಬ್ಯಾರೆಲ್ಗೆ 63 ಡಾಲರ್ಗೆ ಇಳಿದಿದ್ದು, ಮುಂದಿನ ತಿಂಗಳಿನಿಂದ ಉತ್ಪಾದನಾ ಕಡಿತದ ನಿಯಮ ಕೊಂಚ ಸಡಿಲವಾಗುವ ಸಾಧ್ಯತೆ ಇದೆ.
ಕೋವಿಡ್ನಿಂದ ಉಂಟಾದ ಆರ್ಥಿಕ ಹೊರೆಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಧಿಕ ಅಬಕಾರಿ ಸುಂಕ ವಿಧಿಸಿದೆ. ಆದರೆ ಈ ಎರಡೂ ತೈಲಗಳಿಂದ ಗುರಿ ಹೊಂದಿರುವ ಆದಾಯದ ಮೇಲೆ ಪರಿಣಾಮ ಉಂಟಾಗದಂತೆಯೂ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 8.5 ರೂವರೆಗೂ ಕಡಿತಗೊಳಿಸಲು ಸರ್ಕಾರಕ್ಕೆ ಅವಕಾಶವಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಮುಂದೆ ಓದಿ.

4.35 ಲಕ್ಷ ಕೋಟಿ ರೂ ಸಂಗ್ರಹ
'ಆಟೊಮೊಬೈಲ್ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸದೆ ಇದ್ದರೆ 2021-22ನೇ ಸಾಲಿನಲ್ಲಿ (2021ರ ಏಪ್ರಿಲ್ನಿಂದ 2022ರ ಮಾರ್ಚ್ 31ರವರೆಗೆ) ಅಂದಾಜಿತ 3.2 ಲಕ್ಷ ಕೋಟಿಯ ಬದಲು 4.35 ಲಕ್ಷ ಕೋಟಿ ಸಂಗ್ರಹಿಸಬಹುದು ಎಂದು ನಾವು ಅಂದಾಜಿಸಿದ್ದೇವೆ' ಎಂಬುದಾಗಿ ವಿಶ್ಲೇಷಕರು ಹೇಳಿದ್ದಾರೆ.

8.5 ರೂಪಾಯಿ ಕಡಿತ ಮಾಡಬಹುದು
'ಹೀಗೆ ಈ ಬಾರಿ ಅಬಕಾರಿ ಸುಂಕವನ್ನು 2021ರ ಏಪ್ರಿಲ್ 1ರಂದು ಅಥವಾ ಮುನ್ನ ಲೀಟರ್ಗೆ 8.5 ರೂಪಾಯಿ ಕಡಿತ ಮಾಡಿದರೂ, 2022ರ ಹಣಕಾಸು ವರ್ಷದ ಬಜೆಟ್ ಗುರಿಯನ್ನು ಮುಟ್ಟಬಹುದಾಗಿದೆ' ಎಂದು ಐಸಿಐಸಿಐ ಸೆಕ್ಯುರಿಟೀಸ್ ಹೇಳಿದೆ.

ಕೇಂದ್ರಕ್ಕೆ ಕಾರಣಗಳಿವೆ
ಬೇಡಿಕೆಯ ಚೇತರಿಕೆ, ಖಾಸಗೀಕರಣ ಮತ್ತು ಹಣದುಬ್ಬರದ ಸಾಧ್ಯತೆಯ ಕಾರಣಗಳಿಂದ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಬಹುದು ಎಂಬ ಆಶಾಭಾವ ವ್ಯಕ್ತಪಡಿಸಬಹುದು. ಆದರೆ ಇದು ಲೀಟರ್ಗೆ 8.5 ರೂಪಾಯಿಗಿಂತ ಕಡಿಮೆ ಇರುವ ಸಾಧ್ಯತೆ ಇಲ್ಲ ಎಂದು ಸಂಸ್ಥೆ ತಿಳಿಸಿದೆ.

ಕಳೆದ ವರ್ಷ ಸುಂಕ ಹೆಚ್ಚಳ
ತೈಲದ ಮೇಲಿನ ಅಬಕಾರಿ ಸುಂಕವನ್ನು ಮಾರ್ಚ್ 2020ರಿಂದ ಮೇ 2020ರ ಅವಧಿಯಲ್ಲಿ ಪೆಟ್ರೋಲ್ ಮೇಲೆ ಲೀಟರ್ಗೆ 13 ರೂ ಹಾಗೂ ಡೀಸೆಲ್ ಮೇಲೆ 16ರೂ ಹೆಚ್ಚಿಸಲಾಗಿತ್ತು. ಪ್ರಸ್ತುತ ಪ್ರತಿ ಲೀಟರ್ ಡೀಸೆಲ್ ಮೇಲಿನ ಅಬಕಾರಿ ಸುಂಕ 31.8 ರೂ ಇದ್ದರೆ, ಪೆಟ್ರೋಲ್ ಮೇಲಿನ ಸುಂಕ 32.9 ರೂ. ಇದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications