ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದಿಂದ ಮತ್ತೊಂದು ಉತ್ತೇಜನ ಪ್ಯಾಕೇಜ್ ಘೋಷಣೆ ಸಾಧ್ಯತೆ

|
Google Oneindia Kannada News

ನವದೆಹಲಿ, ಏಪ್ರಿಲ್ 15: ಕೊರೊನಾ ವೈರಸ್ ಎರಡನೆಯ ಅಲೆಯ ಹೊಡೆತ ಮತ್ತು ಸ್ಥಳೀಯ ಮಟ್ಟದ ನಿರ್ಬಂಧಗಳ ಕಾರಣದಿಂದ ದೇಶದ ಆರ್ಥಿಕ ಚಟುವಟಿಕೆಗಳಿಗೆ ಮತ್ತೆ ಹಿನ್ನಡೆಯುಂಟಾಗುತ್ತಿದ್ದು, ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮತ್ತೆ ಪ್ಯಾಕೇಜ್‌ಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಕೋವಿಡ್ ಸೋಂಕಿನ ಎರಡನೆಯ ಅಲೆಯು ಬಡಜನರ ಜೀವನಕ್ಕೆ ತೀವ್ರ ಹಾನಿ ಮಾಡುವಂತಹ ಸನ್ನಿವೇಶ ಎದುರಾದರೆ ಅವರಿಗೆ ಪರಿಹಾರ ಒದಗಿಸಲು ಈ ಪ್ಯಾಕೇಜ್ ಬಿಡುಗಡೆ ಮಾಡುವ ಉದ್ದೇಶ ಇದೆ ಎನ್ನಲಾಗಿದೆ.

ಯಾವುದೇ ಕಾರಣಕ್ಕೂ ಲಾಕ್‌ಡೌನ್ ಮಾಡುವುದಿಲ್ಲ; ನಿರ್ಮಲಾ ಸೀತಾರಾಮನ್ ಸ್ಪಷ್ಟನೆಯಾವುದೇ ಕಾರಣಕ್ಕೂ ಲಾಕ್‌ಡೌನ್ ಮಾಡುವುದಿಲ್ಲ; ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಕಳೆದ ವರ್ಷ ಮೊದಲ ಅಲೆಯ ವೇಳೆ ಲಾಕ್‌ಡೌನ್ ಮತ್ತಿತರ ನಿರ್ಬಂಧಗಳ ಕಾರಣದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐದು ಹಂತಗಳಲ್ಲಿ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಪ್ರಕಟಿಸಿದ್ದರು. ಇದರಲ್ಲಿ ಎಂಎಸ್ಎಂಇಗಳಿಗೆ 3.70 ಲಕ್ಷ ಕೋಟಿ ರೂ, ಎನ್‌ಬಿಎಫ್‌ಸಿಗಳಿಗೆ 75,000 ಕೋಟಿ ರೂ, ವಿದ್ಯುತ್ ವಿತರಣಾ ಕಂಪೆನಿಗಳಿಗೆ 90,000 ಕೋಟಿ ರೂ ಒಳಗೊಂಡಿತ್ತು.

Centre Likely To Announce Stimulus Package To Combat Second Wave Of Coronavirus Pandemic

ಇದರ ಜತೆಗೆ ಆರೋಗ್ಯ ಕ್ಷೇತ್ರಕ್ಕೆ 15,000 ಕೋಟಿ ರೂ ಅನುದಾನದ ಜತೆಗೆ ವಿವಿಧ ವಲಯಗಳಿಗೆ ತೆರಿಗೆ ವಿನಾಯಿತಿಗಳನ್ನು ನೀಡಲಾಗಿತ್ತು. ಕೋವಿಡ್ ಸೋಂಕು ಅಧಿಕಗೊಂಡಿರುವ ರಾಜ್ಯಗಳಲ್ಲಿನ ಬ್ಯಾಂಕಿಂಗ್ ಕ್ಷೇತ್ರ ಕೂಡ ಶೋಚನೀಯ ಸ್ಥಿತಿಯಲ್ಲಿದೆ. ಮಹಾರಾಷ್ಟ್ರದಲ್ಲಿನ ಲಾಕ್‌ಡೌನ್ ಎಲ್ಲ ಬ್ಯಾಂಕ್ ಸಾಲಗಳಿಗೆ ಹಿನ್ನಡೆಯುಂಟುಮಾಡಿದೆ ಎಂದು ವರದಿ ತಿಳಿಸಿದೆ.

English summary
Reports says Centre likely to announce a new stimulus package to combat second wave of Coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X