ಚುನಾವಣೆ ಎಫೆಕ್ಟ್!: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಸಾಧ್ಯತೆ
ನವದೆಹಲಿ, ಮಾರ್ಚ್ 10: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆ ಭರದಿಂದ ನಡೆಯುತ್ತಿದೆ. ಈ ತಿಂಗಳ ಅಂತ್ಯದಿಂದ ಚುನಾವಣೆ ಆರಂಭವಾಗಲಿದೆ. ಈ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವ ಸಾಧ್ಯತೆ ಇದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗಳನ್ನು ಕಡಿತಗೊಳಿಸುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗಿದೆ. ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಬಿಜೆಪಿಯನ್ನು ಮೂಲೆ ಗುಂಪು ಮಾಡಲು ವಿರೋಧಪಕ್ಷಗಳಿಗೆ ತೈಲ ಬೆಲೆ ಏರಿಕೆ ಪ್ರಮುಖ ಅಸ್ತ್ರವಾಗಿದೆ. ಹೀಗಾಗಿ ಚುನಾವಣೆಯಲ್ಲಿ ಅದರ ಬಿಸಿ ತಟ್ಟದಂತೆ ಮುಂಜಾಗ್ರತೆ ವಹಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸಿದೆ ಎಂದು ವರದಿಯಾಗಿದೆ.
ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 70 ಡಾಲರ್ಗೆ ಏರಿಕೆಯಾಗಿದೆ. ಕಳೆದ ಒಂಬತ್ತು ದಿನಗಳಿಂದ ಚಿಲ್ಲರೆ ಮಾರುಕಟ್ಟೆಯಲ್ಲಿನ ತೈಲ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಇದರ ನಡುವೆಯೂ ಸಾರ್ವಜನಿಕ ವಲಯದ ತೈಲ ಚಿಲ್ಲರೆ ಮಾರಾಟಗಾರರು ಕೂಡ ಬೆಲೆ ಇಳಿಕೆ ಬಗ್ಗೆ ಒಲವು ಹೊಂದಿದ್ದಾರೆ.

5.5 ಲಕ್ಷ ಕೋಟಿ ರೂ ಆದಾಯ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದಾಯದ ಪ್ರಮುಖ ಮೂಲಗಳಾಗಿವೆ. ಕೋವಿಡ್-19 ಸಾಂಕ್ರಾಮಿಕ ಮತ್ತು ಅದರಿಂದ ಜಾರಿಯಾದ ಲಾಕ್ಡೌನ್ ಹಿನ್ನೆಲೆಯಲ್ಲಿ ಸರ್ಕಾರಗಳಿಗೆ ಆದಾಯ ಸೃಷ್ಟಿ ಪ್ರಮುಖ ಸವಾಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೈಲದ ಮೇಲಿನ ತೆರಿಗೆಗಳ ಮೂಲಕ ವರ್ಷಕ್ಕೆ 5.5 ಲಕ್ಷ ಕೋಟಿ ರೂ ಆದಾಯ ಸಂಗ್ರಹಿಸುತ್ತವೆ.

ಜಿಎಸ್ಟಿ ವ್ಯಾಪ್ತಿಗೆ ತಂದರೆ?
ತೈಲವನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ, ಈ ತೆರಿಗೆ ಅಡಿಯಲ್ಲಿ ಗರಿಷ್ಠ ಮಿತಿ ಶೇ 28 ಇರುವುದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ವಾರ್ಷಿಕ 2.5 ಲಕ್ಷ ಕೋಟಿ ಆದಾಯ ನಷ್ಟ ಅನುಭವಿಸಲಿವೆ. ಹೀಗಾಗಿ ಜಿಎಸ್ಟಿ ವ್ಯಾಪ್ತಿಗೆ ಇದನ್ನು ತರಲು ಸರ್ಕಾರ ಮುಂದಾಗುತ್ತಿಲ್ಲ. ಜಿಎಸ್ಟಿ ವ್ಯಾಪ್ತಿಗೆ ಬಂದರೆ ಈಗಿರುವ ಬೆಲೆಗಿಂತ ಕಡಿಮೆ ದರಕ್ಕೆ ಗ್ರಾಹಕರಿಗೆ ತೈಲ ಲಭ್ಯವಾಗಲಿದೆ.

ಬಂಡುಕೋರರ ದಾಳಿ ಕಾರಣ
ಜಗತ್ತಿನ ಅತಿ ದೊಡ್ಡ ಕಚ್ಚಾ ತೈಲ ಪೂರೈಕೆ ಕೇಂದ್ರವಾದ ಸೌದಿ ಅರೇಬಿಯಾದ ರಾಸ್ ತನುರಾದ ಮೇಲೆ ಡ್ರೋನ್ ಮೂಲಕ ಕ್ಷಿಪಣಿ ದಾಳಿ ನಡೆದಿತ್ತು. ಅದೃಷ್ಟವಶಾತ್ ಅದರಿಂದ ಘಟಕಕ್ಕೆ ಹಾನಿಯಾಗಿರಲಿಲ್ಲ. ಹೌತಿ ಬಂಡುಕೋರರು ನಡೆಸಿದ ಈ ದಾಳಿಯ ಪರಿಣಾಮ ದೇಶದ ಕಚ್ಚಾ ತೈಲ ಪೂರೈಕೆಯ ಸುರಕ್ಷತೆ ಬಗ್ಗೆ ಕಲವಳ ಉಂಟಾಗಿದ್ದು, ಕಚ್ಚಾ ತೈಲದ ಬೆಲೆ ಏಕಾಏಕಿ ಏರಿಕೆಯಾಗಿದೆ.

ಉತ್ಪಾದನೆ ಕಡಿತ ಮಾಡಿತ ಒಪೆಕ್
ಲಾಕ್ಡೌನ್ ವೇಳೆ 2020ರ ಏಪ್ರಿಲ್ನಲ್ಲಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಐತಿಹಾಸಿಕ ಕುಸಿತ ಕಂಡಿತ್ತು. ಆಗ ಬ್ಯಾರೆಲ್ಗೆ 19 ಡಾಲರ್ ಇತ್ತು. ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಪೂರೈಕೆ ದೇಶಗಳ ಸಂಸ್ಥೆ (ಒಪೆಕ್) 2020ರ ಮೇ ತಿಂಗಳಲ್ಲಿ 9.7 ಮಿಲಿಯನ್ ಬ್ಯಾರೆಲ್ನಷ್ಟು ಉತ್ಪಾದನೆ ಕಡಿತ ಮಾಡಿತ್ತು. ಸೌದ ಅರೇಬಿಯಾ ಕೂಡ ಬೇಡಿಕೆ ಹೆಚ್ಚಳಕ್ಕಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಪ್ರತಿ ದಿನ 1 ಮಿಲಿಯನ್ ಬ್ಯಾರೆಲ್ನಷ್ಟು ಉತ್ಪಾದನೆ ಕಡಿತಕ್ಕೆ ನಿರ್ಧರಿಸಿದೆ. ಇದರಿಂದ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಉತ್ಪಾದನೆ ಹೆಚ್ಚಿಸಬೇಕೆಂಬ ಭಾರತ ಹಾಗೂ ಇತರೆ ದೇಶಗಳ ಬೇಡಿಕೆಯನ್ನು ಒಪೆಕ್ ತಿರಸ್ಕರಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications