ಶಿಕ್ಷಣ ಸಂಸ್ಥೆಗಳ ಉನ್ನತೀಕರಣ ಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ಗೆ ಮುಖ್ಯಮಂತ್ರಿ ಸಲಹೆ
ದಾವೋಸ್ ಮೇ 25 : ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಆಕ್ಸಿಸ್ ಬ್ಯಾಂಕ್ ನ ವ್ಯಸ್ಥಾಪಕ ನಿರ್ದೇಶಕರ ಹಾಗೂ ಸಿಇಓ ಅಮಿತಾಬ್ ಚೌಧರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಆಕ್ಸಿಸ್ ಬ್ಯಾಂಕ್ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳಲು ಅವಕಾಶವಿದೆ. ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಭಾರತದ ಮೂರನೇ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆಗಿದೆ. ಬೃಹತ್, ಮಧ್ಯಮ ಉದ್ದಿಮೆಗಳಿಗೆ, ಸಣ್ಣ ಕೈಗಾರಿಕೆ , ಕೃಷಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಸೌಲಭ್ಯಗಳನ್ನು ನೀಡುತ್ತಿದ್ದು, ದೇಶಾದ್ಯಂತ 4000 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಸಿಂಗಾಪುರ, ಹಾಂಕಾಂಗ್, ದುಬೈ ಸೇರಿದಂತೆ ಅನೇಕ ದೇಶಗಳಲ್ಲಿ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ.
ನೋಕಿಯಾ ಸಂಸ್ಥೆ:
ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ನೋಕಿಯಾ ಸಂಸ್ಥೆ ಬೆಂಗಳೂರು ನಗರದಲ್ಲಿ ಅತಿದೊಡ್ಡ ಸಂಶೋಧನಾ ಕೇಂದ್ರವನ್ನು ಹೊಂದಿದೆ. ಇಲ್ಲಿ 5ಜಿ, ಅಡ್ವಾನ್ಸಡ್ 5ಜಿ ಮತ್ತು 6ಜಿ ತಾಂತ್ರಿಕತೆಯ ಬಗ್ಗೆ ಸಂಶೋಧನೆ ಕೈಗೊಳ್ಳಲಾಗಿದ್ದು, 7000 ಕ್ಕೂ ಹೆಚ್ಚು ಸಂಶೋಧಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪೇಪಾಲ್ ಸಂಸ್ಥೆ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೇಪಾಲ್ ಸಂಸ್ಥೆಯ ಮುಖ್ಯಸ್ಥರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಹೂಡಿಕೆಗಳ ಬಗ್ಗೆ ಚರ್ಚಿಸಿದರು.
ಆನ್ ಲೈನ್ ಪಾವತಿಗಳ ಸಂಸ್ಥೆಯಾದ ಪೇ ಪಾಲ್ ಬೆಂಗಳೂರಿನಲ್ಲಿ ಭದ್ರವಾಗಿ ನೆಲೆಯೂರಿರುವ ಸಂಸ್ಥೆಯಾಗಿದೆ. ಜಾಗತಿಕ ಪಾವತಿಗಳ ಸೌಲಭ್ಯದಿಂದಾಗಿ ಪೇಪಾಲ್ ಸಂಸ್ಥೆ, ಭಾರತದ ರಫ್ತುದಾರರ ಆರ್ಥಿಕ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications