ಟೆಲಿಕಾಂ ಟವರ್ ಧ್ವಂಸ ಘಟನೆ ತೀವ್ರವಾಗಿ ಖಂಡಿಸಿದ ಸಿಒಎಐ
ನವದೆಹಲಿ, ಡಿಸೆಂಬರ್ 30: ಕೇಂದ್ರ ಕೃಷಿ ಕಾನೂನು ವಿರೋಧಿಸಿ ಪಂಜಾಬ್ ನಲ್ಲಿ ಪ್ರತಿಭಟನೆ ರೂಪವಾಗಿ 1500ಕ್ಕೂ ಹೆಚ್ಚು ಮೊಬೈಲ್ ಟವರ್ ಗಳನ್ನು ಮತ್ತು ಟೆಲಿಕಾಂ ನೆಟ್ ವರ್ಕ್ ಮೂಲಸೌಕರ್ಯ ನಾಶಗೊಳಿಸಿದ ಕ್ರಮವನ್ನು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಖಂಡಿಸಿದೆ.
ಲಕ್ಷಾಂತರ ಗ್ರಾಹಕರ ಪಾಲಿಗೆ ಟೆಲಿಕಾಂ ಸೇವೆ "ಜೀವನಾಡಿ' ಇದ್ದಂತೆ ಎಂದಿರುವ ಸಿಒಎಐನ ಮಹಾ ನಿರ್ದೇಶಕ ಎಸ್.ಪಿ. ಕೊಚ್ಚರ್, ಟೆಲಿಕಾಂ ಸೇವೆ ವ್ಯತ್ಯಯದಿಂದಾಗಿ ಜನ ಸಾಮಾನ್ಯರಿಗೆ ಬಹಳ ಸಮಸ್ಯೆಯಾಗುತ್ತಿದೆ. ಇದು "ಅಗತ್ಯ ಸೇವೆಗಳಲ್ಲಿ" ಒಂದಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
"ಯಾವುದೇ ವಿಚಾರಕ್ಕೆ ಪ್ರತಿಭಟನೆ ಮಾಡುವ ಹಕ್ಕನ್ನು ನಾವು ಗೌರವಿಸುತ್ತೇವೆ. ಟೆಲಿಕಾಂ ನೆಟ್ ವರ್ಕ್ ಮೂಲಸೌಕರ್ಯವನ್ನು ನಾಶ ಪಡಿಸುವುದು ಹಾಗೂ ಪ್ರತಿಭಟನೆ ರೂಪದಲ್ಲಿ ಟೆಲಿಕಾಂ ಸೇವೆಗೆ ಅಡೆತಡೆ ಮಾಡುವುದನ್ನು ಬಲವಾಗಿ ಖಂಡಿಸುತ್ತೇವೆ," ಎಂದು ಸಿಒಎಐ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಸಿಒಎಐ)ದಲ್ಲಿ ರಿಲಯನ್ಸ್ ಜಿಯೋ, ಭಾರ್ತಿ ಏರ್ ಟೆಲ್ ಹಾಗೂ ವೊಡಾಫೋನ್ ಐಡಿಯಾದ ಸದಸ್ಯರು ಒಳಗೊಂಡಿದ್ದಾರೆ.
ಕೇಂದ್ರದ ಹೊಸ ಕೃಷಿ ಕಾನೂನಿನ ವಿರುದ್ಧ ಪಂಜಾಬ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, 1500ಕ್ಕೂ ಹೆಚ್ಚು ಟೆಲಿಕಾಂ ಟವರ್ ಗಳಿಗೆ ಹಾನಿಯಾಗಿದೆ. ಕೆಲವು ಕಡೆ ಸೇವೆ ವ್ಯತ್ಯಯವಾಗಿದೆ.
ಟೆಲಿಕಾಂ ಸಿಗ್ನಲ್ ಗಳಿಗೆ ಪೂರಕವಾಗಿ ಆಗುವ ವಿದ್ಯುತ್ ಪೂರೈಕೆಗೆ ತಡೆಯಾಗಿದೆ ಮತ್ತು ಪಂಜಾಬ್ ನ ಹಲವು ಭಾಗಗಳಲ್ಲಿ ಕೇಬಲ್ ಕತ್ತರಿಸಲಾಗಿದೆ. ಕೇಂದ್ರ ಸರ್ಕಾರದ ಹೊಸ ಕಾನೂನಿನಿಂದ ಮುಕೇಶ್ ಅಂಬಾನಿಗೆ ಅನುಕೂಲ ಆಗುತ್ತದೆ ಎಂದು ಆರೋಪಿಸಿ, ಅವರ ಒಡೆತನದ ಜಿಯೋಗೆ ಸೇರಿದ ಮೂಲಸೌಕರ್ಯ ವ್ಯವಸ್ಥೆಗೆ ಹಾನಿ ಮಾಡಲಾಗುತ್ತಿದೆ. ಇದರ ಜತೆಗೆ ಗೌತಮ್ ಅದಾನಿ ಅವರನ್ನೂ ಪ್ರಮುಖ ಫಲಾನುಭವಿ ಎಂದು ಆರೋಪಿಸಲಾಗುತ್ತಿದೆ.
ಮೊಬೈಲ್ ಟವರ್ ಗಳನ್ನು ನಾಶಪಡಿಸಿ, ಟೆಲಿಕಾಂ ಸೇವೆ ವ್ಯತ್ಯಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಎಚ್ಚರಿಸಿದ್ದಾರೆ.
ಲಕ್ಷಾಂತರ ವಿದ್ಯಾರ್ಥಿಗಳು ಆನ್ ಲೈನ್ ಕ್ಲಾಸ್ ಗಳಲ್ಲಿ ಕಲಿಯುತ್ತಿದ್ದಾರೆ, ವೃತ್ತಿಪರರು ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಆನ್ ಲೈನ್ ಹೆಲ್ತ್ ಕನ್ಸಲ್ಟೇಷನ್ ಸೌಲಭ್ಯ ಪಡೆಯುತ್ತಿದ್ದಾರೆ. ಇಂಥ ಸನ್ನಿವೇಶದಲ್ಲಿ ಸಾಮಾನ್ಯ ಜನರ ಜೀವನಾಡಿಯಾದ ಟೆಲಿಕಾಮ್ ಸೇವೆಗೆ ತಡೆಯೊಡ್ಡುವುದು ಖಂಡನೀಯ ಎಂದು ಸಿಒಎಐ ತಿಳಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications