ಗ್ಲೋಬಲ್ ವಿಲೇಜ್ ಟೆಕ್ ಮಾರಾಟ, ತಗ್ಗಿದ ಕಾಫಿ ಡೇ ಸಾಲದ ಹೊರೆ
ಬೆಂಗಳೂರು, ಆಗಸ್ಟ್ 18: ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ ಎಂಬ ಕಹಿ ಸುದ್ದಿ ನಡುವೆ, ಸಾಲದ ಹೊರೆ ತಗ್ಗಿರುವ ಸಿಹಿ ಸುದ್ದಿ ಬಂದಿದೆ.
ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಸುಮಾರು 4970 ಕೋಟಿ ರು ಸಾಲ ಹೊಂದಿದೆ ಎಂದು ಸಂಸ್ಥೆ ಪ್ರಕಟಿಸಿತ್ತು.ಈ ನಡುವೆ ಟ್ಯಾಂಗ್ಲಿನ್ ಡೆವಲ್ಮೆಂಟ್ಸ್ ಒಡೆತನದಲ್ಲಿರುವ 90 ಎಕರೆ ವಿಸ್ತೀರ್ಣ ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಮಾರಾಟಕ್ಕಿಡಲಾಗಿದ್ದು, ಬ್ಲಾಕ್ ಸ್ಟೋನ್ ಸಂಸ್ಥೆ ಖರೀದಿಗೆ ಮುಂದಾಗಿರುವ ಸುದ್ದಿ ಬಂದಿದೆ. 2,600 ಕೋಟಿ ರು ನಿಂದ 3,000 ಕೋಟಿ ರು ಮೌಲ್ಯಕ್ಕೆ ಮಾರಾಟವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಬಂದಿತ್ತು.
ಈಗ ಮಾರಾಟ ಸುದ್ದಿಯನ್ನು ಖಚಿತಪಡಿಸಿರುವ ಕಾಫಿ ಡೇ ಸಂಸ್ಥೆ, ಸಾಲದ ಹೊರೆ 1,000 ಕೋಟಿ ರುಗೆ ಇಳಿಯಲಿದೆ ಎಂದು ಪ್ರಕಟಿಸಿದೆ. ಜುಲೈ 31, 2019ರ ಪ್ರಕಟಣೆಯಂತೆ ಸಂಸ್ಥೆ 3,472 ಕೋಟಿ ರು ಸಾಲ ಹೊಂದಿತ್ತು.

ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಮಾರಾಟದ ಬಳಿಕ ಲಾಜಿಸ್ಟಿಕ್ ಕಂಪನಿ ಸಿಕಾಲ್ ಕೂಡಾ ಮಾರುವ ಮುನ್ಸೂಚನೆ ಸಿಕ್ಕಿದೆ. ಸಿಕಾಲ್ ಲಾಜಿಸ್ಟಿಕ್ ಲಿಮಿಟೆಡ್ ಕೂಡಾ 1,488 ಕೋಟಿ ರು ಸಾಲ ಹೊಂದಿದೆ.
ಕೆಫೆ ಕಾಫಿ ಡೇ ಮಾಲೀಕರಾದ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಹೂಡಿಕೆದಾರರು ಒಟ್ಟು 2,437.29 ಕೋಟಿ ರು ಕಳೆದುಕೊಂಡಿದ್ದಾರೆ. ಜುಲೈ 29ರಂದು 4, 067.65 ಕೋಟಿ ರು ಇದ್ದ ಸಂಸ್ಥೆಯ ಮಾರುಕಟ್ಟೆ ಮೌಲ್ಯ 1630. 86 ಕೋಟಿ ರುಗೆ ಕುಸಿದಿದೆ
ಜುಲೈ 29ರಂದು ಮಂಗಳೂರು- ಉಳ್ಳಾಲ ಬಳಿಯ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ದಾರ್ಥ, ಜುಲೈ 31ರಂದು ಹೊಯ್ಗೆ ಬಜಾರ್ ಸಮೀಪ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಮಾರ್ಚ್ 2019ರ ಎಣಿಕೆಯಂತೆ ಭಾರತದಲ್ಲಿ ಸುಮಾರು 1,752 ಕೆಫೆಗಳನ್ನು ಹೊಂದಿರುವ ಕೆಫೆ ಕಾಫಿ ಡೇ ಸದ್ಯ ದೇಶದಲ್ಲಿ ಮುಂಚೂಣಿಯಲ್ಲಿರುವ ಕಾಫಿ ಸಂಸ್ಥೆಯಾಗಿದೆ
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications